Railway: ಶಿವಮೊಗ್ಗದಲ್ಲಿ ತಪ್ಪಿದ ಭಾರೀ ಅನಾಹುತ; ಚಲಿಸುತ್ತಿದ್ದ ರೈಲಿನಿಂದ ಕಳಚಿದ ಇಂಜಿನ್!
Team Udayavani, May 26, 2023, 10:51 AM IST
ಶಿವಮೊಗ್ಗ: ಚಲಿಸುತ್ತಿದ್ದ ರೈಲಿನ ಇಂಜಿನ್ ಕಳಚಿಹೋದ ಘಟನೆ ಇಲ್ಲಿನ ಬಿದರೆ ಬಳಿ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತವೊಂದು ತಪ್ಪಿದೆ.
ತಾಳಗುಪ್ಪ- ಬೆಂಗಳೂರು ಎಕ್ಸ್ಪ್ರೆಸ್ ರೈಲಿ ನಲ್ಲಿ ಈ ಘಟನೆ ನಡೆದಿದ್ದು, ಕೆಲ ಕಾಲ ಭಯದ ವಾತಾವರಣ ಉಂಟಾಗಿತ್ತು.
ಈ ಎಕ್ಸ್ ಪ್ರೆಸ್ ರೈಲು ಶಿವಮೊಗ್ಗ ರೈಲ್ವೆ ನಿಲ್ದಾಣದಿಂದ ಹೊರಟಿತ್ತು. ಶಿವಮೊಗ್ಗ ಸಮೀಪದ ಬಿದರೆ ಬಳಿ ಬರುತ್ತಿದ್ದಂತೆ ಬೋಗಿಗಳಿಂದ ಇಂಜಿನ್ ಬೇರ್ಪಟ್ಟಿದೆ. ಕಪ್ಲಿಂಗ್ ಸಡಿಲಗೊಂಡ ಕಾರಣ ಬೋಗಿಗಳು ಮತ್ತು ಇಂಜಿನ್ ಬೇರೆ ಬೇರೆಯಾಗಿದೆ. ಬೋಗಿಗಳ ಬಿಟ್ಟು ಇಂಜಿನ್ ಸ್ವಲ್ಪ ದೂರ ಚಲಿಸಿದೆ.
ಇದನ್ನೂ ಓದಿ:U.T.Khader;ಕಾಗದಮುಕ್ತ ಪರಿಕಲ್ಪನೆಯಿಂದ ಡಿಜಿಟಲ್ ಅಸೆಂಬ್ಲಿ ಚಿಂತನೆ:ವಿಧಾನಸಭೆ ಸಭಾಧ್ಯಕ್ಷ
ಬಿದರೆ ಬಳಿ ಸಮತಟ್ಟಾಗಿದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ತಕ್ಷಣವೇ ಎಚ್ಚೆತ್ತ ಸಿಬ್ಬಂದಿಗಳು, ಸಮಸ್ಯೆ ಬಗೆಹರಿಸಿದರು. ರೈಲ್ವೇ ಪ್ರಯಾಣಿಕರು ಕೆಲಕಾಲ ಆತಂಕಗೊಂಡಿದ್ದರು. ಕೊನೆಗೆ ಬೆಂಗಳೂರು ಕಡೆಗೆ ರೈಲು ಹೊರಟಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ