Kaup : ಸ್ಕೂಟರ್ಗೆ ಕಾರು ಢಿಕ್ಕಿ; ಸವಾರ ಗಂಭೀರ
Team Udayavani, May 27, 2023, 5:05 AM IST
ಕಾಪು: ಸಂಬಂಧಿಕರ ಉಪನಯನ ಕಾರ್ಯಕ್ರಮಕ್ಕೆ ಆಗಮಿಸಿ ವಾಪಸಾಗುತ್ತಿದ್ದ ಸ್ಕೂಟರ್ಗೆ ಕಾರು ಢಿಕ್ಕಿ ಹೊಡೆದು ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ಕಾಪು ಕೆ1 ಹೊಟೇಲ್ ಜಂಕ್ಷನ್ ಬಳಿ ಮೇ 24ರಂದು ನಡೆದಿದೆ.
ಕುಂದಾಪುರ ಹಂಗಳೂರು ನಿವಾಸಿ ಮಂಜಯ್ಯ ಆಚಾರ್ (73) ಗಾಯಾಳು ಸ್ಕೂಟರ್ ಸವಾರ. ಕಾಪುವಿನ ಕಾಳಿಕಾಂಬಾ ದೇವಸ್ಥಾನಕ್ಕೆ ಸಂಬಂಧಿಕರ ಉಪನಯನ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮಂಜಯ್ಯ ಆಚಾರ್ ಅವರು ಕಾರ್ಯಕ್ರಮ ಮುಗಿಸಿ ತನ್ನ ಸ್ಕೂಟರಿನಲ್ಲಿ ತ್ರಾಸಿ ಕಡೆಗೆ ಹೋಗಲು ಕಾಪು ಪೇಟೆಯಿಂದ ಕೆ1 ಹೋಟೆಲ್ ಜಂಕ್ಷನ್ ಬಳಿ ಡೈವರ್ಶನ್ ಮೂಲಕ ಮಂಗಳೂರು – ಉಡುಪಿ ರಾಷ್ಟೀಯ ಹೆದ್ದಾರಿಗೆ ಬಂದಿದ್ದು, ಈ ವೇಳೆ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಕಾರು ಸ್ಕೂಟರ್ಗೆ ಢಿಕ್ಕಿ ಹೊಡೆದಿದೆ.
ಕಾರು-ಸ್ಕೂಟರಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಮಂಜಯ್ಯ ಆಚಾರ್ ರಸ್ತೆಗೆ ಬಿದ್ದು ತಲೆಗೆ ತೀವ್ರ ರಕ್ತ ಗಾಯ ಹಾಗೂ ಕೈ, ಕಾಲು ಮೈಗೆ ತರಚಿದ ಗಾಯ ಆಗಿದೆ. ಗಾಯಾಳುವನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ