ಅಂಕೋಲಾ: ಬೆಳ್ಳಂಬೆಳಗ್ಗೆ ಫೋಟೋ ಸ್ಟುಡಿಯೋದಲ್ಲಿ ಅಗ್ನಿ ಅವಘಡ: ಅಪಾರ ಹಾನಿ
Team Udayavani, May 27, 2023, 12:41 PM IST
ಅಂಕೋಲಾ : ಫೋಟೋ ಸ್ಟುಡಿಯೋಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ತಗುಲಿದ ಪರಿಣಾಮ ಅಪಾರ ಪ್ರಮಾಣದ ಹಾನಿ ಉಂಟಾದ ಘಟನೆ ಶನಿವಾರ ಮುಂಜಾನೆ ಪಟ್ಟಣದ ಮುಖ್ಯ ರಸ್ತೆಯಲ್ಲಿ ನಡೆದಿದೆ.
ಸಂತೋಷ ನಾಯ್ಕ ಮಾಲಿಕತ್ವದ ಪಟ್ಟಣದ ಅರ್ಭನ್ ಬ್ಯಾಂಕ್ ಎದುರಿನ ಕಟ್ಟಡದ ಮೊದಲನೇ ಮಹಡಿಯಲ್ಲಿರುವ ಸಂತೋಷ ಸ್ಟುಡಿಯೋಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದ ಪರಿಣಾಮ ಸ್ಟುಡಿಯೋದೊಳಗಿದ್ದ ಕ್ಯಾಮೆರಾ ಕಂಪ್ಯೂಟರ್ ಸ್ಟುಡಿಯೋ ಲೈಟ್ ಗಳು ಸೇರಿದಂತೆ ಇನ್ನಿತರ ವಸ್ತುಗಳಿಗೆ ಬೆಂಕಿ ತಗುಲಿ ಅಪಾರ ಪ್ರಮಾಣದಲ್ಲಿ ಹಾನಿ ಉಂಟಾಗಿದೆ.
ಮುಂಜಾನೆ ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರು ಸ್ಟುಡಿಯೋದ ಒಳಗಡೆಯಿಂದ ಹೊರಗೆ ಹೊಗೆ ಕಾಣಿಸಿಕೊಂಡಿದ್ದನ್ನು ಗಮನಿಸಿ ಅಗ್ನಿಶಾಮಕ ದಳದವರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ತಕ್ಷಣ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ ಅಷ್ಟೊತ್ತಿಗಾಗಲೇ ಸ್ಟುಡಿಯೋದೊಳಗಿದ್ದ ಎಲ್ಲ ಬೆಲೆಬಾಳುವ ಸಾಮಾನುಗಳು ಬೆಂಕಿಗಾವತಿಯಾಗಿದೆ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಬಂದು ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ದೆಹಲಿಯಲ್ಲಿ ಗಾಳಿ ಸಹಿತ ಭಾರೀ ಮಳೆ: ವಿಮಾನ ಹಾರಾಟದಲ್ಲಿ ವ್ಯತ್ಯಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ
LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್
Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ಇನ್ನಿಲ್ಲ
8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್ಐಟಿ? ಇನ್ನಷ್ಟು ಎಫ್ಐಆರ್ ಸಾಧ್ಯತೆ
ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್ ಸೇವೆ ಸ್ಥಗಿತ
MUST WATCH
ಹೊಸ ಸೇರ್ಪಡೆ
T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ
Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್ ಕಾರಿಡಾರ್!
BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ
Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ
ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ