ಸುಳ್ಳು ಸುದ್ದಿ: ಸೈಬರ್ ಸೆಂಟರ್ಗೆ ತಹಶೀಲ್ದಾರ್ ಭೇಟಿ
Team Udayavani, May 27, 2023, 4:03 PM IST
ಕೆಜಿಎಫ್: ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷವು ನೀಡಿದ್ದ 5 ಗ್ಯಾರಂಟಿ ಯೋಜನೆಗಳ ಸೌಲಭ್ಯವನ್ನು ಪಡೆಯಲು ಫಲಾನುಭವಿಗಳು ತಮ್ಮ ಆಧಾರ್ ಕಾರ್ಡ್ನೊಂದಿಗೆ ಪಡಿತರ ಚೀಟಿಯನ್ನು ಜೋಡಣೆ ಮಾಡಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಿಬಿಟ್ಟ ಕೆಲವು ಸೈಬರ್ ಸೆಂಟರ್ಗಳಿಗೆ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಗರದ ಕೆಲವು ಸೈಬರ್ ಸೆಂಟರ್ ಮಾಲೀಕರು ಸಾಮಾಜಿಕ ಜಾಲತಾಣಗಳಲ್ಲಿ ಗೃಹಲಕ್ಷ್ಮೀ ಯೋಜನೆಯಡಿ ಮನೆಯ ಯಜಮಾನಿ 2 ಸಾವಿರ ಪಡೆದುಕೊಳ್ಳಲು, ಮೇ 31ರೊಳಗೆ ಆಧಾರ್ನೊಂದಿಗೆ ಪಡಿತರ ಚೀಟಿ ಜೋಡಣೆ ಮಾಡಿಕೊಳ್ಳಬೇಕೆಂದು ಗಾಳಿ ಸುದ್ದಿ ಸಾಮಾಜಿಕ ಜಾಲತಾಣ ಮತ್ತು ವಾಟ್ಸಾಪ್ಗ್ಳಲ್ಲಿ ಹರಡಿದೆ. ಇದರಿಂದಾಗಿ ನೂರಾರು ಮಹಿಳೆಯರು ಬೆಳಗಿನಿಂದಲೇ ಸೈಬರ್ ಸೆಂಟರ್ಗಳ ಮುಂದೆ ಸರತಿ ಸಾಲಿನಲ್ಲಿ ನಿಂತಿದ್ದ ದೃಶ್ಯ ಸಾಮಾನ್ಯವಾಗಿ ಕಂಡುಬಂದಿತು.
250-300 ರೂ.ಸೇವಾ ಶುಲ್ಕ ವಸೂಲಿ: ಚುನಾವಣೆಗೂ ಮೊದಲು ಆನ್ಲೆ„ನ್ ಮೂಲಕ ಆಧಾರ್ ಕಾರ್ಡ್ನೊಂದಿಗೆ ಪಡಿತರ ಚೀಟಿ ಜೋಡಣೆಗೆ ಸೆ„ಬರ್ ಸೆಂಟರ್ಗಳ ಮಾಲೀಕರು ಸೇವಾ ಶುಲ್ಕವೆಂದು 40-50 ರೂ. ಪಡೆದುಕೊಳ್ಳುತ್ತಿದ್ದು, ಈಗ ಗೃಹಲಕ್ಷ್ಮೀ ಯೋಜನೆ ಲಾಭ ಪಡೆದುಕೊಳ್ಳಲು ನಾಗರೀಕರು ಆಧಾರ್ ನೊಂದಿಗೆ ಪಡಿತರ ಚೀಟಿ ಜೋಡಣೆ ಮಾಡಿಸಲು ನೂರಾರು ಸಂಖ್ಯೆಯಲ್ಲಿ ಆಗಮಿಸಿದ್ದರಿಂದ, 40-50 ರೂಗಳಿದ್ದ ಸೇವಾ ಶುಲ್ಕವನ್ನು 250 ರಿಂದ 300 ರೂಗಳಿಗೆ ಏರಿಸಿದ್ದಾರೆ. ನಾಗರೀಕರು ದುಪ್ಪಟ್ಟು ಬೆಲೆ ನೀಡಲು ಕಂಗಾಲಾಗಿದ್ದು, ಈ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬಂದ ಹಿನ್ನಲೆಯಲ್ಲಿ ತಹಶೀಲ್ದಾರ್ ಶ್ರೀನಿವಾಸ್ ಮತ್ತು ಸಿಬ್ಬಂದಿ ಸೈಬರ್ ಸೆಂಟರ್ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ದುಪ್ಪಟ್ಟು ಶುಲ್ಕ ವಸೂಲಿ ಮಾಡುತ್ತಿದ್ದ ನಗರದ ನ್ಯಾಯಾಲಯ ಸಂಕೀರ್ಣದ ಎದುರಿನ ಮೊಹಿನ್ ಅಸೋಸಿಯೇಟ್ಸ್, ಗೀತಾ ರಸ್ತೆ 3ನೇ ಕ್ರಾಸ್ನ ಜೆಪಿ ನೆಟ್ವರ್ಕ್ ಕಮ್ಯುನಿಕೇಷನ್, ಮತ್ತು ಮಿನಿ ಇಬ್ರಾಹಿಂ ರಸ್ತೆಯ ರಾಜಾ ನೆಟ್ ಕಮ್ಯುನಿಕೇಷನ್ ಸೆ„ಬರ್ ಸೆಂಟರ್ಗಳ ವಿರುದ್ಧ ಪ್ರಕರಣವನ್ನು ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಸರ್ಕಾರದಿಂದ ಆಧಾರ್ ಮತ್ತು ಪಡಿತರ ಚೀಟಿ ಜೋಡಣೆ ಮಾಡುವುದಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ಮಾರ್ಗಸೂಚಿಗಳು ಬಂದಿಲ್ಲ. ಮಾರ್ಗಸೂಚಿಗಳು ಬಂದ ಬಳಿಕ ಸಂಬಂಧಪಟ್ಟ ಇಲಾಖೆ ವತಿಯಿಂದ ತಾಲೂಕು ಕಚೇರಿಯ ನಾಮಫಲಕದಲ್ಲಿ ಪ್ರಕಟಿಸಲಾಗುವುದು. ನಾಗರಿಕರು ಯಾವುದೇ ಕಾರಣಕ್ಕೂ ಸುಳ್ಳು ವದಂತಿಗಳಿಗೆ ಕಿವಿಗೊಡಬಾರದು. ಒಂದು ವೇಳೆ ಯಾರಾದರೂ ಆಧಾರ್ ಮತ್ತು ಪಡಿತರ ಚೀಟಿ ಜೋಡಣೆ ಮಾಡಿಕೊಡುತ್ತೇವೆ ಎಂದು ಹೇಳಿ ಹೆಚ್ಚಿನ ಶುಲ್ಕವನ್ನು ವಸೂಲಿ ಮಾಡುವುದರ ಬಗ್ಗೆ ದೂರು ನೀಡಿದಲ್ಲಿ ಕ್ರಮ ಕೈಗೊಳ್ಳಲಾಗುವುದು. -ಎಚ್.ಶ್ರೀನಿವಾಸ್, ತಹಶೀಲ್ದಾರ್, ಕೆಜಿಎಫ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ