Fraud: ವಿಮಾನದ ಟಿಕೆಟ್ ಬುಕ್ ಮಾಡಿಸಿ 1.31 ಲ.ರೂ. ವಂಚನೆ
Team Udayavani, May 28, 2023, 5:52 AM IST
ಮಂಗಳೂರು: ವಿಮಾನ ಪ್ರಯಾಣದ ಟಿಕೆಟ್ ಬುಕ್ ಮಾಡಿಸಿ 1.31 ಲ.ರೂ. ವಂಚಿಸಿರುವ ಬಗ್ಗೆ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಝೈನುಲ್ ಅಭಿದಿನ್ ವಂಚನೆಗೊಳಗಾದವರು. ಅಬು ಹಿಲಾಲ್ ಅಜ್ಮಿ ಆರೋಪಿ.
ಪ್ರಕರಣದ ವಿವರ
ಝೈನುಲ್ ಅಭಿದಿನ್ ಅವರು ನಗರದ ಕೆ.ಎಸ್. ರಾವ್ ರಸ್ತೆಯಲ್ಲಿರುವ ಸಿಂಗಾಪುರ ಸಿಟಿ ಕಟ್ಟಡದಲ್ಲಿ ಶುಕ್ರಿಯಾ ಟ್ರಾವೆಲ್ಸ್ ಏಜೆನ್ಸಿಯನ್ನು ನಡೆಸುತ್ತಿದ್ದಾರೆ. ಕೆಲವು ವರ್ಷಗಳ ಹಿಂದೆ ಅವರಿಗೆ ದಿಲ್ಲಿಯ ಕರಿಯರ್ ಏಷ್ಯಾ ಟ್ರಾವೆಲ್ ಎಜೆನ್ಸಿಯ ಮಾಲಕ ಅಬು ಹಿಲಾಲ್ ಅಜ್ಮಿಯ ಪರಿಚಯವಾಗಿತ್ತು. ಅನಂತರ ಅವರು ಗ್ರಾಹಕರಿಗಾಗಿ ವಿಮಾನ ಪ್ರಯಾಣದ ಟಿಕೆಟ್ ಬುಕ್ ಮಾಡಿಸುತ್ತಿದ್ದರು. ಇದೇ ರೀತಿ 2022ರ ನ.19 ಮತ್ತು 20ರಂದು 1,31,600 ರೂ. ಮೊತ್ತದ ಟಿಕೆಟ್ ಬುಕ್ ಮಾಡಿಸಿದ್ದರು. ಹಣವನ್ನು ಒಂದು ವಾರದ ಬಳಿಕ ನೀಡುವುದಾಗಿ ಹೇಳಿದ್ದರು. ಅನಂತರ ಹಣ ನೀಡಿರಲಿಲ್ಲ. ಕರೆ ಮಾಡಿದಾಗ ಖಾತೆಗೆ ಹಣ ಕಳುಹಿಸುವುದಾಗಿ ತಿಳಿಸಿ ಹಣಕಾಸು ವ್ಯವಹಾರದ ಮೊಬೈಲ್ ಸ್ಕ್ರೀನ್ ಶಾಟ್ ಕಳುಹಿಸಿದ್ದರು. ಆದರೆ ಬ್ಯಾಂಕ್ಗೆ ಹೋಗಿ ನೋಡಿದಾಗ ಹಣ ಜಮೆಯಾಗಿರಲಿಲ್ಲ. ಅಜ್ಮಿ ನಕಲಿ ದಾಖಲೆಗಳನ್ನು ತೋರಿಸಿ ನಂಬುವಂತೆ ಮಾಡಿ ಮೋಸ ಮಾಡಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ
U. T. Khader ಮಂಗಳೂರಿನಿಂದ ಹಜ್ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ
MUST WATCH
ಹೊಸ ಸೇರ್ಪಡೆ
Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ
Bengaluru: ಫ್ಲೈಓವರ್ಗಳಲ್ಲೂ ಕಸ ಸುರಿಯುವ ವಾಹನ ಸವಾರರು
Godrej: ಜನಪ್ರಿಯ ಗೋದ್ರೆಜ್ ಸಮೂಹ ಇಬ್ಭಾಗ: ಜಮ್ಶೆಡ್, ನಾದಿರ್ ನೂತನ ಮುಖ್ಯಸ್ಥರು
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ