Manipal ಪೊಲೀಸರ ಹೆಸರಿನಲ್ಲಿ ಹಣ ವಸೂಲು: ಆರೋಪಿಗಳು ವಶಕ್ಕೆ
Team Udayavani, May 27, 2023, 7:56 PM IST
ಉಡುಪಿ: ಪೊಲೀಸರ ಹೆಸರಿನಲ್ಲಿ ಹಣ ವಸೂಲು ಮಾಡುತ್ತಿದ್ದ ಆರೋಪಿಗಳನ್ನು ಮಣಿಪಾಲ ಠಾಣೆಯ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಶಿರ್ವ ಮೂಲದ ಮಂಜುನಾಥ ಅವರು ಮಣಿಪಾಲದ ಅರ್ಬಿಫಾಲ್ಸ್ ಬಳಿ ಸ್ನೇಹಿತರೊಂದಿಗೆ ಮೇ 26ರಂದು ಮಾತನಾಡುತ್ತಿರುವ ವೇಳೆ ಆರೋಪಿಗಳಾದ ಹನುಮಂತಪ್ಪ ಹಾಗೂ ಮಹಾದೇವಪ್ಪ ಅವರು ಸ್ಥಳಕ್ಕೆ ಆಗಮಿಸಿ ತಾನು ಮಣಿಪಾಲ ಠಾಣೆಯ ಪೊಲೀಸ್, ನೀವು ಇಲ್ಲಿ ಯಾಕೆ ಕುಳಿತಿದ್ದೀರಿ? ನಿಮ್ಮ ಮೇಲೆ ಕೇಸ್ ಮಾಡುತ್ತೇನೆ ಎಂದು ಹೇಳಿದ್ದಾರೆ. ಬಳಿಕ ಮಣಿಪಾಲ ಠಾಣೆಯ ಎಸ್ಐ ಅವರಿಗೆ ಫೋನ್ ಮಾಡುತ್ತೇನೆ ಅವರು ಹೇಳಿದರೆ ಬಿಡುತ್ತೇನೆ ಎಂದು ಹೇಳಿ ಮತ್ತೋರ್ವ ಆರೋಪಿ ಲಕ್ಷ್ಮಣ ಕುಪ್ಪಗೊಂಡ ಅವರಿಗೆ ಕರೆ ಮಾಡಿ ಲೌಡ್ಸ್ಪೀಕರ್ ಇಟ್ಟು ಮಾತನಾಡಿದ್ದಾರೆ.
ಈ ವೇಳೆ ಆ ವ್ಯಕ್ತಿ ತಾನು ಮಣಿಪಾಲ ಠಾಣೆಯ ಎಸ್ಐ ಮಾತನಾಡುತ್ತಿದ್ದೇನೆ. 5 ಸಾವಿರ ರೂ.ಅವರಿಗೆ ನೀಡು ಇಲ್ಲವಾದರೆ ಜೀಪು ಕಳುಹಿಸಿ ಪೊಲೀಸ್ ಠಾಣೆಗೆ ಕರೆಸಿಕೊಳ್ಳುತ್ತೇನೆ ಎಂದು ಬೆದರಿಸಿದ ಪರಿಣಾಮ ಮಂಜುನಾಥ ಅವರು ಆರೋಪಿಗಳು ಸೂಚಿಸಿದ ಮೊಬೈಲ್ ಸಂಖ್ಯೆೆಗೆ ಗೂಗಲ್ ಪೇ ಮೂಲಕ ಹಣ ವರ್ಗಾವಣೆ ಮಾಡಿದ್ದರು. ಅನುಮಾನಗೊಂಡ ಮಂಜುನಾಥ ಅವರು ಮಣಿಪಾಲ ಠಾಣೆಗೆ ಬಂದು ದೂರು ನೀಡಿದಾಗ ವಿಚಾರ ಬೆಳಕಿಗೆ ಬಂದಿದೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ