ಶಾಲಾ ಶುಲ್ಕಕ್ಕಿಟ್ಟಿದ್ದ ಹಣ ದರೋಡೆ ಮಾಡಿದ್ದವರ ಸೆರೆ  


Team Udayavani, May 29, 2023, 2:37 PM IST

ಶಾಲಾ ಶುಲ್ಕಕ್ಕಿಟ್ಟಿದ್ದ ಹಣ ದರೋಡೆ ಮಾಡಿದ್ದವರ ಸೆರೆ  

ಬೆಂಗಳೂರು: ಆಟೋ ಚಾಲಕನ ಮನೆಗೆ ನುಗ್ಗಿ ಮಗನ ಶಾಲಾ ಶುಲ್ಕಕ್ಕೆಂದು ಇಟ್ಟಿದ್ದ ಸಾವಿರಾರು ರೂ. ನಗದು, ಚಿನ್ನಾಭರಣ ದೋಚಿದ್ದ ಮೂವರು ಆರೋಪಿಗಳು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಕಾಮಾಕ್ಷಿಪಾಳ್ಯದ ತೋಟದ ರಸ್ತೆ ಸಣ್ಣಕ್ಕಿಬೈಲು ನಿವಾಸಿ ಪ್ರೀತನ್‌ ಅಲಿಯಾಸ್‌ ಅಪ್ಪು(21), ರಜತ್‌(22) ಮತ್ತು ವಿಜಯ್‌ ಕುಮಾರ್‌ (19) ಬಂಧಿತರು. ತಲೆಮರೆಸಿಕೊಂಡಿರುವ ಟೆಕ್ಕಿ ಪ್ರವೀಣ್‌, ಅಫ್ತಾಭ್‌, ಭರತ್‌, ಮನೋಜ್‌ ಎಂಬವರು ತಲೆಮರೆಸಿಕೊಂಡಿದ್ದು, ಶೋಧ ಕಾರ್ಯ ನಡೆಯುತ್ತಿದೆ. ಬಂಧಿತ ಆರೋಪಿಗಳಿಂದ ಸಾವಿರಾರು ರೂ. ನಗದು, ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.

ಆರೋಪಿಗಳು ಮೇ 26ರಂದು ಕಾಮಾಕ್ಷಿಪಾಳ್ಯ ನಿವಾಸಿ ಆಟೋ ಚಾಲಕ ನಾಗೇಶ್‌ ಎಂಬವರ ಮನೆಗೆ ನುಗ್ಗಿ ದರೋಡೆ ಮಾಡಿದ್ದರು. ಆರೋಪಿಗಳ ಪೈಕಿ ಪ್ರೀತನ್‌ ಅಲಿಯಾಸ್‌ ಅಪ್ಪು ನಾಗೇಶ್‌ ಪರಿಚಯಸ್ಥನಾಗಿದ್ದು, ಅವರ ಮನೆ ಮೇಲಿನ ಮನೆಯಲ್ಲಿ ವಾಸವಾಗಿದ್ದಾನೆ. ನಾಗೇಶ್‌ ಪತ್ನಿ ಇಲ್ಲದಾಗ ಪ್ರೀತನ್‌ ಇಲ್ಲಿಯೇ ಮಲಗುತ್ತಿದ್ದ. ಆಗ ಮನೆಯಲ್ಲಿರುವ ಚಿನ್ನಾಭರಣ ಹಾಗೂ 2ನೇ ತರಗತಿ ಓದುತ್ತಿರುವ ಮಗನ ಶಾಲಾ ಶುಲ್ಕ ಪಾವತಿಗಾಗಿ 40 ಸಾವಿರ ರೂ. ತಂದಿದ್ದೇನೆ ಎಂದು ಹೇಳಿಕೊಂಡಿದ್ದರು. ಈ ವಿಚಾರ ತಿಳಿದ ಪ್ರೀತನ್‌, ನಗರದ ಪ್ರತಿಷ್ಠಿತ ಸಾಫ್ಟ್ವೇರ್‌ ಕಂಪನಿಯಲ್ಲಿ ಟೆಕ್ಕಿ ಆಗಿರುವ ಪ್ರವೀಣ್‌ಗೆ ಹೇಳಿಕೊಂಡಿದ್ದ. ಬಳಿಕ ಪ್ರವೀಣ್‌, ಇತರೆ ಆರೋಪಿಗಳ ಜತೆ ಹಂಚಿಕೊಂಡು ಮೇ 25ರಂದು ರಾತ್ರಿ ಎಲ್ಲರೂ ಕಂಠಪೂರ್ತಿ ಮದ್ಯ ಸೇವಿಸಿದ್ದರು. ಈ ವೇಳೆಯೇ ನಾಗೇಶ್‌ ಮನೆಯ ದರೋಡೆಗೆ ಸಂಚು ರೂಪಿಸಿದ್ದರು ಎಂದು ಪೊಲೀಸರು ಹೇಳಿದರು.

ಸಂಚು ರೂಪಿಸಿ ದರೋಡೆ: ಮತ್ತೂಂದೆಡೆ ನಾಗೇಶ್‌ ಪತ್ನಿ ಮತ್ತು ಮಗ ಊರಿಗೆ ತೆರಳಿದ ದಿನವೇ ಕಳವು ಮಾಡಬೇಕು. ಆಗ ಮಾತ್ರ ಹಣ ಸಿಗುತ್ತದೆ ಎಂದು ನಿರ್ಧರಿಸಿದ್ದ ಆರೋಪಿಗಳು, ಮೇ 26ರಂದು ನಾಗೇಶ್‌ ಪತ್ನಿ ಊರಿಗೆ ತೆರಳಿರುವ ವಿಚಾರ ಪ್ರೀತನ್‌ನಿಂದ ತಿಳಿದುಕೊಂಡಿದ್ದರು. ಅದೇ ದಿನ ಪ್ರೀತನ್‌, ತಾನು ನಾಗೇಶ್‌ ಮನೆಯಲ್ಲಿ ಹೋಗಿ ಮಲಗುತ್ತೇನೆ. ನೀವುಗಳು ಬಂದು ದಾಳಿ ನಡೆಸಿ, ದರೋಡೆ ಮಾಡಿ ಎಂದು ಸಲಹೆ ಕೊಟ್ಟಿದ್ದ. ಇತರೆ ಎಲ್ಲ ಆರೋಪಿಗಳು ಮುಸುಕುಧಾರಿಗಳಾಗಿ ಬಂದಿದ್ದು, ಮೂವರು ನಾಗೇಶ್‌ ಮನೆಗೆ ನುಗ್ಗಿದ್ದಾರೆ. ಇತರೆ ಮೂವರು ಆರೋಪಿಗಳು ರಸ್ತೆಯಲ್ಲಿ ನಿಂತು ಯಾರಾದರೂ ಬರುತ್ತಿದ್ದಾರೆಯೇ ಎಂದು ಗಮನಿಸಿದ ಮಾಹಿತಿ ನೀಡುತ್ತಿದ್ದರು. ಮನೆಯೊಳಗೆ ನುಗ್ಗಿದ್ದ ಆರೋಪಿಗಳು ನಾಗೇಶ್‌ ಮತ್ತು ಪ್ರೀತನ್‌ಗೆ ಮಾರಕಾಸ್ತ್ರ ತೋರಿಸಿ 30 ಗ್ರಾಂ ಚಿನ್ನಾಭರಣ, 35 ಸಾವಿರ ರೂ. ನಗದು ದರೋಡೆ ಮಾಡಿ ಪರಾರಿಯಾಗಿದ್ದರು ಎಂದು ಪೊಲೀಸರು ಹೇಳಿದರು.

ದೂರು ನೀಡುವುದಿಲ್ಲ ಎಂದು ಕೃತ್ಯ: ದೂರುದಾರ ನಾಗೇಶ್‌ ಬಗ್ಗೆ ತಿಳಿದುಕೊಂಡಿದ್ದ ಪ್ರೀತನ್‌, ಒಂದು ವೇಳೆ ದರೋಡೆ, ಕಳ್ಳತನವಾದರೆ ಪೊಲೀಸ್‌ ಠಾಣೆಗೆ ದೂರು ನೀಡುವುದಿಲ್ಲ ಎಂದು ಭಾವಿಸಿದ್ದ. ಅಲ್ಲದೆ, ಮಾತನಾಡುವಾಗಲೂ ಪೊಲೀಸ್‌ ಸಹವಾಸ ಬೇಡವೆಂದು ನಾಗೇಶ್‌ ಹೇಳಿಕೊಂಡಿದ್ದರಂತೆ. ಅದರಂತೆ ಆರೋಪಿಗಳು ಮನೆಗೆ ನುಗ್ಗಿ ದರೋಡೆ ಮಾಡಿದ್ದರು. ಬಳಿಕ ಪ್ರಕರಣ ದಾಖಲಿಸಿಕೊಂಡು ತಾಂತ್ರಿಕ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು ಐಷಾರಾಮಿ ಜೀವನಕ್ಕಾಗಿ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ಹೇಳಿದರು.

ಇನ್‌ಸ್ಪೆಕ್ಟರ್‌ ಲೋಹಿತ್‌ ನೇತೃತ್ವದಲ್ಲಿ ಪಿಎಸ್‌ಐ ಮೂರ್ತಿಧರ್ಮರಾಜ್‌, ಎಎಸ್‌ಐ ಶ್ರೀನಿವಾಸ್‌ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.

ಟಾಪ್ ನ್ಯೂಸ್

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.