ಅತ್ತಿಬೆಲೆಯಲ್ಲಿ ನಿವೇಶನ ಕಲ್ಪಿಸಲು ಅನುದಾನದ ಕೊರತೆ


Team Udayavani, May 29, 2023, 2:45 PM IST

ಅತ್ತಿಬೆಲೆಯಲ್ಲಿ ನಿವೇಶನ ಕಲ್ಪಿಸಲು ಅನುದಾನದ ಕೊರತೆ

ದೇವನಹಳ್ಳಿ: ಈ ಹಿಂದೆ 2011ರಲ್ಲಿ ಆವತಿ ಗ್ರಾಮ ಪಂಚಾಯಿತಿಗೆ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ) ಸಂಘಟನೆಯ ವತಿಯಿಂದ ನಿವೇಶನ ರಹಿತರಿಗೆ ನಿವೇಶನ ಕಲ್ಪಿಸಿಕೊಡುವಂತೆ ಮನವಿ ಮಾಡುವುದರ ಮೂಲಕ ಅರ್ಜಿ ಹಾಕಲಾಗಿತ್ತು. ಅದರಂತೆ, ಗ್ರಾಮದಲ್ಲಿ ಒಂದೇ ಮನೆಯಲ್ಲಿ 3-4 ಕುಟುಂಬಗಳ ವಾಸವಿರುತ್ತದೆ. ಹಾಗಾಗೀ ಜಾಗದ ಸಮಸ್ಯೆ ಇದ್ದಿದ್ದರಿಂದ ಸರಕಾರಿ ಜಾಗ ವನ್ನು ಗುರ್ತಿಸಿದ್ದ ಫ‌ಲವಾಗಿ ಎರಡು ವರ್ಷದ ಹಿಂದೆಯಷ್ಟೇ ನಿವೇಶನ ಹಂಚಿಕೆಗೆ ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಡಿಎಸ್‌ಎಸ್‌ ತಾಲೂಕು ಸಂಚಾಲಕ ಹಾಗೂ ಆವತಿ ಗ್ರಾಪಂ ಸದಸ್ಯ ಅತ್ತಿಬೆಲೆ ನರಸಪ್ಪ ತಿಳಿಸಿದರು.

ತಾಲೂಕಿನ ಆವತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಅತ್ತಿಬೆಲೆ ಸಮೀಪದ ಸರ್ವೆ ನಂ.20ರಲ್ಲಿನ ಸರಕಾರಿ ಗೋಮಾಳದ ಜಾಗದಲ್ಲಿ ನಿವೇಶನ ರಹಿತರಿಗೆ ಹಕ್ಕು ಪತ್ರಗಳ ವಿತರಣೆಗೆ ಜಾಗದ ಅಭಿವೃದ್ಧಿಗೆ ಅನುದಾನ ಕೊರತೆ ಇರುವು ದರಿಂದ ಕೂಡಲೇ ದೇವನಹಳ್ಳಿ ಶಾಸಕರು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಅನುದಾನ ಬಿಡುಗಡೆ ಮಾಡಿ, ನಿವೇಶನ ರಹಿತರಿಗೆ ಅನುಕೂಲ ಮಾಡಿಕೊಡ ಬೇಕು ಎಂದು ಮನವಿ ಮಾಡುವುದರ ಮೂಲಕ ಅವರು ಮಾತನಾಡಿದರು.

ಅತ್ತಿಬೆಲೆ ಗ್ರಾಮದಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಅಲ್ಪಸಂಖ್ಯಾತ ಸಮುದಾಯದವರು ಹೆಚ್ಚಾಗಿದ್ದಾರೆ. ಒಂದೇ ಮನೆಯಲ್ಲಿ ಅಣ್ಣತಮ್ಮಂದಿರ ಕುಟುಂಬಗಳು ವಾಸವಾಗಿದ್ದು, ಅವರಿಗೆ ನಿವೇಶನ ಕಲ್ಪಿಸಿಕೊಡುವ ದೃಷ್ಠಿಯಿಂದ ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದು ಕೊಂಡು ನಮ್ಮ ಸಂಘಟನೆಯ ಮೂಲಕ ಅರ್ಜಿ ಗಳನ್ನು ಹಾಕಿ ಒಂದು ಹಂತಕ್ಕೆ ತರಲಾಗಿದೆ. ಜಿಲ್ಲಾಧಿಕಾರಿ ಪಾಲಯ್ಯ ಅವರ ಅವಧಿಯಲ್ಲಿ 3 ಎಕರೆ 30ಗುಂಟೆ ಜಾಗ ಮಂಜೂರಿಯಾಗಿರುತ್ತದೆ. ಹೆಚ್ಚಾಗಿ ಹಳ್ಳಕೊಳ್ಳ ವಿದ್ದು, ಬಂಡೆ ಇರುವುದರಿಂದ ಅದನ್ನು ಸಮಾಂತರಗೊಳಿಸಿ, ಸುಮಾರು ನಿವೇಶನ ರಹಿತರಿಗೆ ಹಂಚಿಕೆ ಮಾಡಲಾಗುತ್ತದೆ. ಅಭಿವೃದ್ಧಿ ಪಡಿಸಲು ಅನುದಾನ ಕೊರತೆ ಇದೆ.

ಸುಮಾರು 25ಲಕ್ಷ ರೂಗೂ ಹೆಚ್ಚಿನ ಅನುದಾನದ ಅವಶ್ಯಕತೆ ಇದೆ. ಈಗಾಗಲೇ ಗ್ರಾಮ ಪಂಚಾಯಿತಿಯಿಂದ 8ಲಕ್ಷ ರೂ., ತಾಲೂಕು ಪಂಚಾಯಿತಿಯಿಂದ 8ಲಕ್ಷ ರೂ., ಅನುದಾನ ಮೀಸಲಿಡಲಾಗಿದೆ. ಇನ್ನುಳಿದ ಅನುದಾನವನ್ನು ಶಾಸಕರೊಂದಿಗೆ ಚರ್ಚಿಸಿ, ಅಭಿವೃದ್ಧಿಗೊಳಿಸಿ, ಶೀಘ್ರವಾಗಿ ಹಕ್ಕುಪತ್ರ ಹಂಚಿಕೆ ಕಾರ್ಯ ಮಾಡಲಾಗುತ್ತದೆ ಎಂದು ಹೇಳಿದರು.

ಟಾಪ್ ನ್ಯೂಸ್

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.