Panaji: ಶೀಘ್ರದಲ್ಲೇ ಮನೋಹರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಲೂ ಟ್ಯಾಕ್ಸಿ ಸೇವೆ
Team Udayavani, May 29, 2023, 5:42 PM IST
ಪಣಜಿ: ಗೋವಾದ ಮನೋಹರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 160 ಟ್ಯಾಕ್ಸಿಗಳೊಂದಿಗೆ ಬ್ಲೂ ಟ್ಯಾಕ್ಸಿ ಸೇವೆಯನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು. ಟ್ಯಾಕ್ಸಿ ಚಾಲಕರಿಗೂ ತರಬೇತಿ ನೀಡಲಾಗುವುದು ಎಂದು ಸಾರಿಗೆ ಸಚಿವ ಮಾವಿನ್ ಗುದಿನ್ಹೊ ಮಾಹಿತಿ ನೀಡಿದ್ದಾರೆ.
ಪಣಜಿಯಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು- ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಗೋವಾದಲ್ಲಿ ಟ್ಯಾಕ್ಸಿ ಪಾತ್ರಾವ್ ಯೋಜನೆ ಮತ್ತು ಮಾಜಿ ಬಸ್ ಯೋಜನೆಯನ್ನು ಶ್ಲಾಘಿಸಿದ್ದಾರೆ. ಯೋಜನೆಯ ವಿವರಗಳನ್ನು ಶೀಘ್ರದಲ್ಲೇ ಸಚಿವ ಗಡ್ಕರಿ ಅವರೊಂದಿಗೆ ಚರ್ಚಿಸಲಾಗುವುದು. ಇನ್ನುಳಿದಂತೆ ಯೋಜನೆ ಜಾರಿಯಾಗಲಿದೆ ಎಂದು ಸಚಿವ ಗಡ್ಕರಿ ಕೂಡ ಹೇಳಿದ್ದಾರೆ ಎಂದು ಸಚಿವ ಮಾವಿನ್ ಗುದಿನ್ಹೊ ಹೇಳಿದರು.
ಗೋವಾ ಮೈಲ್ಸ್ ಟ್ಯಾಕ್ಸಿ ದರವನ್ನು ಸರ್ಕಾರ ಅಧಿಸೂಚಿತ ದರಗಳಿಗೆ ಹೋಲಿಸಿದರೆ ಶೇ 15 ರಿಂದ 20 ರಷ್ಟು ಕಡಿಮೆ ಮಾಡಲಾಗಿದೆ. ಹಾಗಾಗಿಯೇ ಪ್ರಯಾಣಿಕರು ಈ ಟ್ಯಾಕ್ಸಿ ಸೇವೆಯತ್ತ ಮುಖ ಮಾಡುತ್ತಿದ್ದಾರೆ. ಗೋವಾ ಟ್ಯಾಕ್ಸಿ ಪಾತ್ರಾವ್ ಯೋಜನೆಯಡಿ ಪೆಡ್ನೆಯಲ್ಲಿ ಸ್ಥಳೀಯ ಯುವಕರು ಟ್ಯಾಕ್ಸಿ ಓಡಿಸುವ ಮೂಲಕ ತಿಂಗಳಿಗೆ 50,000 ರಿಂದ 70,000 ರೂ.ಗಳಿಕೆ ಮಾಡುತ್ತಿದ್ದಾರೆ.ಗೋವಾದ ಯುವಕರು ಕಷ್ಟಪಟ್ಟು ದುಡಿಯುತ್ತಿದ್ದಾರೆ.
ಮೊಪಾ ವಿಮಾನ ನಿಲ್ದಾಣದಲ್ಲಿ 160 ಟ್ಯಾಕ್ಸಿಗಳೊಂದಿಗೆ ನೀಲಿ ಟ್ಯಾಕ್ಸಿ ಸೇವೆಯನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು. ಅವರು ಪ್ರಿಪೇಯ್ಡ್ ಟ್ಯಾಕ್ಸಿಗಳ ಪ್ರಕಾರ ಶುಲ್ಕ ವಿಧಿಸಲಿದ್ದಾರೆ. ಅವರು ಅಪ್ಲಿಕೇಶನ್ ಆಧಾರಿತ ಟ್ಯಾಕ್ಸಿ ಸೇವೆಯನ್ನು ಪ್ರಾರಂಭಿಸುವ ಸಾಮಥ್ರ್ಯವನ್ನು ಹೊಂದಿದ್ದಾರೆ ಎಂದು ಸಚಿವ ಮಾವಿನ್ ಗುದಿನ್ಹೊ ಹೇಳಿದರು.
ಟ್ಯಾಕ್ಸಿ ಚಾಲಕರಿಗೆ ಎರಡು ವಾರಗಳ ತರಬೇತಿ ನೀಡಲಾಗುವುದು. ಟ್ರಾಫಿಕ್ ಸಿಗ್ನಲ್ಗಳು ಮತ್ತು ಪ್ರವಾಸಿ ಪ್ರಯಾಣಿಕರೊಂದಿಗೆ ಹೇಗೆ ವ್ಯವಹರಿಸಬೇಕು ಎಂಬುದರ ಕುರಿತು ತರಬೇತಿ ನೀಡಲಾಗುವುದು. ಈ ಎರಡು ವಾರಗಳ ತರಬೇತಿ ಉಚಿತ ಮತ್ತು ಕಡ್ಡಾಯವಾಗಿದೆ. ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಗೋವಾದಲ್ಲಿ ಟ್ಯಾಕ್ಸಿ ಪಾತ್ರಾವ್ ಯೋಜನೆ ಮತ್ತು ಮಾಜಿ ಬಸ್ ಯೋಜನೆ ಕುರಿತು ಚರ್ಚಿಸಲಾಗಿದೆ. ಕೇಂದ್ರ ಸಚಿವ ಗಡ್ಕರಿ ಅವರು ಈ ಯೋಜನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಶೀಘ್ರದಲ್ಲಿಯೇ ಯೋಜನೆಯ ವಿವರಗಳನ್ನು ಚರ್ಚಿಸಿ ಅನುಷ್ಠಾನಗೊಳಿಸಲಾಗುವುದು ಎಂದು ಸಚಿವ ಮಾವಿನ್ ಗುದಿನ್ಹೊ ಹೇಳಿದರು.
ಇದನ್ನೂ ಓದಿ: Belarus ಅಧ್ಯಕ್ಷ ಆಸ್ಪತ್ರೆಗೆ ದಾಖಲು: ಪುಟಿನ್ ಭೇಟಿ ಬೆನ್ನಲ್ಲೇ ಘಟನೆ: ವರದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್