ಸಂಚಾರ ನಿಯಮ ಭಂಜಕರ ವಿರುದ್ಧ ಕ್ರಮ ಅನಿವಾರ್ಯ


Team Udayavani, May 30, 2023, 6:00 AM IST

police siren

ರಾಜ್ಯದಲ್ಲಿ ಕಳೆದೆರಡು ದಿನಗಳ ಅವಧಿಯಲ್ಲಿ 2 ಭೀಕರ ರಸ್ತೆ ಅಪಘಾತ ಸಂಭವಿಸಿದ್ದು 16 ಮಂದಿ ಸಾವಿಗೀಡಾಗಿದ್ದಾರೆ. ಈ ದುರ್ಘ‌ಟನೆಗಳು ಇಡೀ ರಾಜ್ಯದ ಜನತೆಯನ್ನು ತಲ್ಲಣಗೊಳಿಸುವಂತೆ ಮಾಡಿದೆ.

ಸೋಮವಾರ ಅಪರಾಹ್ನ ತಿ.ನರಸೀಪುರ ತಾಲೂಕಿನ ಕುರುಬೂರು ಗ್ರಾಮದಲ್ಲಿ ಕೊಳ್ಳೇಗಾಲ-ತಿ.ನರಸೀಪುರ ರಸ್ತೆಯಲ್ಲಿ ಇನೊವಾ ಕಾರು ಮತ್ತು ಖಾಸಗಿ ಬಸ್‌ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 10 ಮಂದಿ ಸಾವನ್ನಪ್ಪಿದ್ದರು. ಇನ್ನು ರವಿವಾರ ಸಂಜೆ ಕುಷ್ಟಗಿ ತಾಲೂಕಿನ ಕಲಕೇರಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ಇಂಡಿಕಾ ಕಾರು ನಡುವೆ ಸಂಭವಿಸಿದ್ದ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದರು. ಈ ಎರಡೂ ಅಪಘಾತಗಳಿಗೆ ನಿರ್ಲಕ್ಷ್ಯ, ಅತಿವೇಗ, ಸಂಚಾರ ನಿಯಮಗಳೆಲ್ಲವನ್ನೂ ಗಾಳಿಗೆ ತೂರಿರುವುದು ಕಾರಣ ಎಂಬುದು ಮೇಲ್ನೋ ಟಕ್ಕೆ ಕಾಣಿ ಸು ತ್ತಿದೆ. ಹೀಗೆ ವಾಹನ ಚಾಲಕರ ಅಸಡ್ಡೆ ಮತ್ತು ದುಂಡಾವರ್ತನೆಯ ಧೋರಣೆಯ ಕಾರಣಗಳಿಗಾಗಿ ಅಮಾಯಕರು ತಮ್ಮ ಜೀವವನ್ನೇ ಕಳೆದುಕೊಳ್ಳುವಂತಾಗಿದೆ.

ಹಾಗೆಂದು ದಿನನಿತ್ಯ ಸಂಭವಿಸುವ ರಸ್ತೆ ಅಪಘಾತಗಳಿಗೆಲ್ಲ ವಾಹನ ಚಾಲಕರೇ ಕಾರಣ ಎಂದು ಸಾರಾಸಗಟಾಗಿ ತೀರ್ಮಾನಕ್ಕೆ ಬರುವುದು ಸರಿಯಲ್ಲ. ರಸ್ತೆಗಳಲ್ಲಿರುವ ಹೊಂಡಗಳು, ಅವೈಜ್ಞಾನಿಕವಾಗಿ ನಿರ್ಮಿಸ ಲಾಗಿರುವ ಹಂಪ್ಸ್‌, ವಾಹನಗಳಲ್ಲಿನ ತಾಂತ್ರಿಕ ದೋಷಗಳು ಕೂಡ ವಾಹನ ಅಪಘಾತಗಳಿಗೆ ಕಾರಣಗಳಾಗುತ್ತಿವೆ. ಇತ್ತೀಚಿನ ವರ್ಷಗಳಲ್ಲಿ ರಸ್ತೆಗಳು ಮತ್ತು ಹೆದ್ದಾರಿಗಳ ಸ್ಥಿತಿ ಬಹಳಷ್ಟು ಸುಧಾರಣೆ ಕಂಡಿದೆ. ಹೆದ್ದಾರಿ ಗಳಂತೂ ವಿಸ್ತರಣೆಯಾಗಿ ಕಾಂಕ್ರೀಟ್‌ ಅಥವಾ ಫೇವರ್‌ಫಿನಿಶ್‌ ಯಂತ್ರದ ಮೂಲಕ ಹೊಸದಾಗಿ ಡಾಮರು ಕಂಡಿದ್ದರೆ ಇನ್ನು ರಾಜ್ಯ ಹೆದ್ದಾರಿಗಳು ಕೂಡ ಅಭಿವೃದ್ಧಿ ಹೊಂದಿವೆ. ಹೀಗಾಗಿ ವಾಹನ ಚಾಲಕರ ಧಾವಂತಕ್ಕೆ ಕಡಿವಾಣವೇ ಇಲ್ಲದಂತಾಗಿದೆ. ಹೆದ್ದಾರಿಗಳ ಇಕ್ಕೆಲಗಳಲ್ಲಿ ಹಾಕಿರುವ ಸೂಚನ ಫ‌ಲಕಗಳತ್ತ ಚಾಲಕರು ಕಣ್ಣು ಹಾಯಿಸುವುದೇ ಇಲ್ಲ. ಸಂಚಾರ ನಿಯಮಗಳ ಪಾಲನೆಯ ಮಾತಂತೂ ದೂರವೇ ಸರಿ. ಈ ಹಿಂದೆ ರಸ್ತೆ ದುರಸ್ತಿ ಮಾಡ ದ ಕಾರಣದಿಂದಾಗಿಯೇ ಅಪಘಾತಗಳು ಸಂಭವಿಸುತ್ತಿವೆ ಎಂದು ಜನರಿಂದ ಭಾರೀ ಆಕ್ರೋಶ ವ್ಯಕ್ತವಾಗುತ್ತಿತ್ತು. ಆದರೆ ಈಗ ಹೆದ್ದಾರಿಗಳು ಅಭಿವೃದ್ಧಿಗೊಂಡಿದ್ದರೂ ಪ್ರಯಾಣಿಕರ ಸುರಕ್ಷೆಗೆ ಮಾತ್ರ ಯಾವುದೇ ಖಾತರಿ ಇಲ್ಲದಂತಾಗಿದೆ.

ಈ ಎರಡೂ ಪ್ರಕರಣಗಳಿಗೆ ಸಂಬಂಧಿಸಿದಂತೆ ಮೃತಪಟ್ಟವರ ಕುಟುಂಬಗಳಿಗೆ ಸರಕಾರ ಪರಿಹಾರ ಘೋಷಿಸಿದೆ. ಆದ ರೆ ಕೇವಲ ಪರಿಹಾರ ವಿತರಣೆಗಷ್ಟೇ ಸರಕಾರ ತನ್ನ ಜವಾಬ್ದಾರಿಯನ್ನು ಸೀಮಿತ ಗೊಳಿಸಬಾರದು. ಭವಿಷ್ಯದಲ್ಲಿ ಇಂತಹ ಭೀಕರ ಅಪಘಾತಗಳು ಸಂಭವಿ ಸದಂತೆ ಸೂಕ್ತ ಕ್ರಮ ಕೈಗೊಳ್ಳುವ ಹೊಣೆಗಾರಿಕೆಯನ್ನು ಸಾರಿಗೆ ಮತ್ತು ಪೊಲೀಸ್‌ ಇಲಾಖೆ ಕಾನೂನು ನಿಯಮಾವಳಿಗಳಿಗನುಸಾರವಾಗಿ ನಿಭಾಯಿಸಬೇಕಿದೆ. ಸಂಚಾರ ನಿಯಮಗಳನ್ನು ಉಲ್ಲಂ ಸುವವರಿಗೆ ದಂಡ ವಿಧಿಸುವ ಜತೆಯಲ್ಲಿ ಕಾನೂನು ಪ್ರಕ್ರಿಯೆ ನಡೆಯಬೇಕಿದೆ. ಅಷ್ಟು ಮಾತ್ರವಲ್ಲದೆ ಸಂಬಂಧಿತ ಅಧಿಕಾರಿಗಳು ತಮ್ಮ ಕರ್ತವ್ಯ ನಿಭಾವಣೆಯ ಸಂದರ್ಭದಲ್ಲಿ ನಿಯಮ ಉಲ್ಲಂ ಸಿದವರೊಂದಿಗೆ ಯಾವುದೇ ರಾಜಿ ಅಥವಾ ಹೊಂದಾಣಿಕೆ ಮಾಡಿಕೊಳ್ಳದೆ ನಿಷ್ಠುರ ಕ್ರಮ ಕೈಗೊಳ್ಳಬೇಕು. ರಸ್ತೆ ಅಪಘಾತಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ವಾಹನ ಚಾಲಕರು ಮತ್ತು ಪಾದಚಾರಿಗಳು ಕೂಡ ಸಂಚಾರ ನಿಯಮಾವಳಿಗಳನ್ನು ಪಾಲಿಸುವುದು ತಮ್ಮ ಆದ್ಯ ಕರ್ತವ್ಯ ಎಂಬುದನ್ನು ಮನಗಾಣಬೇಕು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.