Thailand Open Badminton: ಹೊಸ ಭರವಸೆಯಲ್ಲಿ ಭಾರತ
Team Udayavani, May 30, 2023, 6:47 AM IST
ಬ್ಯಾಂಕಾಕ್: ಮಲೇಷ್ಯಾ ಮಾಸ್ಟರ್ ಬ್ಯಾಡ್ಮಿಂಟನ್ ಪಂದ್ಯಾವಳಿ ಯಲ್ಲಿ ಉತ್ತಮ ಪ್ರದರ್ಶನವಿತ್ತ ಭಾರತವೀಗ “ಥಾಯ್ಲೆಂಡ್ ಓಪನ್ ಸೂಪರ್-500′ ಕೂಟದಲ್ಲಿ ಹೊಸ ಭರವಸೆಯೊಂದಿಗೆ ಕಣಕ್ಕಿಳಿಯಲಿದೆ. ಈ ಪಂದ್ಯಾವಳಿ ಮಂಗಳವಾರ ಬ್ಯಾಂಕಾಕ್ನಲ್ಲಿ ಆರಂಭವಾಗಲಿದೆ.
ಮಲೇಷ್ಯಾದಲ್ಲಿ ಎಚ್.ಎಸ್. ಪ್ರಣಯ್ ಪುರುಷರ ಸಿಂಗಲ್ಸ್ ಪ್ರಶಸ್ತಿ ಗೆದ್ದು ತಂಡಕ್ಕೆ ಹೊಸ ಸ್ಫೂರ್ತಿ ತುಂಬಿ ದ್ದರು. ಆದರೆ ಪಿ.ವಿ. ಸಿಂಧು ಮತ್ತು ಕೆ. ಶ್ರೀಕಾಂತ್ ಕ್ರಮವಾಗಿ ಸೆಮಿಫೈನಲ್ ಮತ್ತು ಕ್ವಾರ್ಟರ್ ಫೈನಲ್ನಲ್ಲಿ ಎಡವಿ ನಿರಾಸೆ ಮೂಡಿಸಿದ್ದರು. ಇವರು ಬ್ಯಾಂಕಾಕ್ನಲ್ಲಿ ಸುಧಾರಿತ ಪ್ರದರ್ಶನ ನೀಡಬೇಕಿದೆ.
ಪಿ.ವಿ. ಸಿಂಧು ನೂತನ ರ್ಯಾಂಕಿಂಗ್ನಲ್ಲಿ 2 ಸ್ಥಾನ ಕುಸಿತ ಕಂಡಿದ್ದು (13), ಮತ್ತೆ ಪ್ರಗತಿ ಸಾಧಿಸಬೇಕಾದರೆ ಥಾಯ್ಲೆಂಡ್ನಲ್ಲಿ ಉತ್ತಮ ಪ್ರದರ್ಶನ ನೀಡುವುದು ಅನಿವಾರ್ಯ. ಮೊದಲ ಸುತ್ತಿನಲ್ಲಿ ಇವರ ಎದುರಾಳಿ ಕೆನಡಾದ ಮೈಕಲ್ ಲೀ. ಹಾಗೆಯೇ ಕೆ. ಶ್ರೀಕಾಂತ್ ಮಲೇಷ್ಯಾ ಮಾಸ್ಟರ್ ಫೈನಲಿಸ್ಟ್ ವೆಂಗ್ ಹಾಂಗ್ ಯಾಂಗ್ ಸವಾಲನ್ನು ಎದುರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಎಚ್.ಎಸ್. ಪ್ರಣಯ್ ಅವರಿಂದ ಕೆಲವು ಟಿಪ್ಸ್ ಕೂಡ ಪಡೆದಿದ್ದಾರೆ. ಮಲೇಷ್ಯಾದಲ್ಲಿ ಯಾಂಗ್ ಅವರನ್ನು ಮಣಿಸಿಯೇ ಪ್ರಣಯ್ ಚಾಂಪಿಯನ್ ಆಗಿ ಮೂಡಿಬಂದಿದ್ದರು.
ಮೊದಲ ಸುತ್ತು ದಾಟಿದರೆ ಪಿ.ವಿ. ಸಿಂಧು ಚೀನದ 6ನೇ ಶ್ರೇಯಾಂಕದ ಆಟಗಾರ್ತಿ ವಾಂಗ್ ಜೀ ಯೀ ಅವ ರನ್ನು, ಕೆ. ಶ್ರೀಕಾಂತ್ 3ನೇ ಶ್ರೇಯಾಂಕದ ಚೀನೀ ಆಟಗಾರ ಶೀ ಯು ಕ್ವಿ ಅವರನ್ನು ಎದುರಿಸುವ ಸಾಧ್ಯತೆ ಇದೆ.
ಲಕ್ಷ್ಯ ಸೇನ್ ಆಟ
ರ್ಯಾಂಕಿಂಗ್ನಲ್ಲಿ ಟಾಪ್-20 ಯಾದಿ ಯಿಂದ ಹೊರಬಿದ್ದಿರುವ ಲಕ್ಷ್ಯ ಸೇನ್ ಚೈನೀಸ್ ತೈಪೆಯ ವಾಂಗ್ ಜು ವೀ ವಿರುದ್ಧ ಆಟ ಆರಂಭಿಸಲಿದ್ದಾರೆ. “ಓಲೀìನ್ಸ್ ಮಾಸ್ಟರ್’ ಚಾಂಪಿಯನ್ ಪ್ರಿಯಾಂಶು ರಾಜಾವತ್ ಕೂಡ ಕಣದಲ್ಲಿದ್ದು, ಮಲೇಷ್ಯಾದ ಎನ್ಜಿ ಜೇ ಯಾಂಗ್ ಅವರನ್ನು ಮೊದಲ ಸುತ್ತಿನಲ್ಲಿ ಎದುರಿಸುವರು.
ಮಲೇಷ್ಯಾ ಓಪನ್ನಲ್ಲಿ ಎಡವಿದ ಭಾರತದ ನಂ.1 ಡಬಲ್ಸ್ ಜೋಡಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ-ಚಿರಾಗ್ ಶೆಟ್ಟಿ ಫ್ರಾನ್ಸ್ನ ಲುಕಾಸ್ ಕೊರ್ವೀ-ರೋನನ್ ಲಾಬರ್ ವಿರುದ್ಧ ಮೊದಲ ಸುತ್ತಿನ ಪಂದ್ಯ ಆಡುವರು. ಕೃಷ್ಣಪ್ರಸಾದ್ ಗರಗ್-ವಿಷ್ಣುವರ್ಧನ್, ಅಶ್ವಿನಿ ಭಟ್-ಶಿಖಾ ಗೌತಮ್ ಕೂಡ ಅದೃಷ್ಟಪರೀಕ್ಷೆಗೆ ಇಳಿಯಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 ವಿಶ್ವಕಪ್: ಮೇ 25ರಂದು ಭಾರತದ ಬಹುತೇಕ ಆಟಗಾರರ ಮೊದಲ ತಂಡ ನ್ಯೂಯಾರ್ಕ್ಗೆ
IPL ವಿಚಿತ್ರ; ಎಲ್ಲ ಪಂದ್ಯ ಮುಗಿದ ಬಳಿಕ ನಾಯಕ ಪಾಂಡ್ಯಗೆ ಒಂದು ಪಂದ್ಯ ನಿಷೇಧ!
ಇಟಾಲಿಯನ್ ಓಪನ್ ಟೆನಿಸ್ : ಜರ್ರಿ-ಜ್ವೆರೇವ್ ನಡುವೆ ಫೈನಲ್
CSK ವಿರುದ್ಧ ಗೆದ್ದು ಪ್ಲೇ ಆಫ್ ಪ್ರವೇಶಿಸಿದ ಆರ್ ಸಿಬಿ; ಪ್ರಶಂಸೆಗಳ ಸುರಿಮಳೆ
ಥಾಯ್ಲೆಂಡ್ ಓಪನ್ : ಪ್ರಶಸ್ತಿ ಸುತ್ತಿಗೆ ಚಿರಾಗ್-ಸಾತ್ವಿಕ್
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ
TG; ತೆಲಂಗಾಣದ ಸಂಕ್ಷಿಪ್ತ ರೂಪ ಇನ್ನು ಮುಂದೆ ‘ಟಿಎಸ್’ ಅಲ್ಲ!
Prajwal Revanna ಪತ್ತೆಗೆ ವಿತ್ತ ಅಸ್ತ್ರ ! ಬ್ಯಾಂಕ್ ವ್ಯವಹಾರ ಪರಿಶೀಲನೆ
Kyrgyzstan:ಭಾರತೀಯ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪಾಕಿಸ್ಥಾನದ 3 ವಿದ್ಯಾರ್ಥಿಗಳ ಕೊಲೆ?
T20 ವಿಶ್ವಕಪ್: ಮೇ 25ರಂದು ಭಾರತದ ಬಹುತೇಕ ಆಟಗಾರರ ಮೊದಲ ತಂಡ ನ್ಯೂಯಾರ್ಕ್ಗೆ