IPL 2023 Final: ಜಡೇಜಾ ಕಮಾಲ್… ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ ಚಾಂಪಿಯನ್
Team Udayavani, May 30, 2023, 1:54 AM IST
ಅಹ್ಮದಾಬಾದ್: ಭಾರೀ ಮಳೆಯಿಂದಾಗಿ ಸೋಮವಾರಕ್ಕೆ ಮುಂದೂಡಲ್ಪಟ್ಟ ಐಪಿಎಲ್ ಫೈನಲ್ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡವನ್ನು ಡಕ್ವರ್ತ್ ಲೂಯಿಸ್ ನಿಯಮದಡಿ 5 ವಿಕೆಟ್ಗಳಿಂದ ಸೋಲಿಸಿದೆ,
ಮೊದಲು ಬ್ಯಾಟಿಂಗ್ಗೆ ಇಳಿಸಲ್ಪಟ್ಟ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ 4 ವಿಕೆಟಿಗೆ 214 ರನ್ ಪೇರಿಸಿತ್ತು, ಆದರೆ ಚೆನ್ನೈ ಚೇಸಿಂಗ್ ವೇಳೆ ಮಳೆಯ ಆಗಮನವಾಗಿದೆ. ಚೆನ್ನೈ ಕೇವಲ 3 ಎಸೆತಗಳನ್ನಷ್ಟೇ ಎದುರಿಸಿದ್ದು, ವಿಕೆಟ್ ನಷ್ಟವಿಲ್ಲದೆ 4 ರನ್ ಗಳಿಸಿದೆ. ಸುಮಾರು ಎರಡು ತಾಸುಗಳ ಬಳಿಕ ಆಟ ಪುನರಾರಂಭಗೊಂಡಾಗ ಚೆನ್ನೈಗೆ 15 ಓವರ್ಗಳಲ್ಲಿ 171 ರನ್ ಗಳಿಸುವ ಗುರಿಯನ್ನು ನೀಡಲಾಗಿತ್ತು. ಮಳೆ ನಿಂತ ಬಳಿಕ ಆಟ ಮುಂದುವರಿಸಿದ ಆರಂಭಿಕರಾದ ರುತುರಾಜ್ ಗಾಯಕ್ವಾಡ್ ಮತ್ತು ಡೇವನ್ ಕಾನ್ವೇ ಭರ್ಜರಿ ಆರಂಭ ಒದಗಿಸಿದ್ದು ಮೊದಲ ವಿಕೆಟಿಗೆ 6.3 ಓವರ್ಗಳಲ್ಲಿ 74 ರನ್ ಪೇರಿಸಿದ್ದರು. ಅವರಿಬ್ಬರ ಬಳಿಕ ಉಳಿದ ಆಟಗಾರರೆಲ್ಲರೂ ಸಿಕ್ಸರ್ಗಳ ಸುರಿಮಳೆ ಸುರಿಸಿದರು,
ನಡೆಯದ ಮೋಹಿತ್ ಮ್ಯಾಜಿಕ್ ಅಂತಿಮ ಓವರಿನಲ್ಲಿ ಚೆನ್ನೈ ಗೆಲ್ಲಲು 13 ರನ್ ಗಳಿಸಬೇಕಿತ್ತು. ಮೋಹಿತ್ ಶರ್ಮ ಎಸೆದ ಈ ಓವರಿನ ಮೊದಲ ನಾಲ್ಕು ಎಸೆತಗಳಲ್ಲಿ ತಂಡ ಕೇವಲ ಮೂರು ರನ್ ಗಳಿಸಿತ್ತು, ಇದರಿಂದಾಗಿ ಗುಜರಾತ್ ಗೆಲ್ಲುವ ಆಸೆ ಬಲವಾಯಿತು. ಆದರೆ ಗುಜರಾತ್ನ ಈ ಕನಸನ್ನು ರವೀಂದ್ರ ಜಡೇಜಾ ನುಚ್ಚುನೂರು ಮಾಡಿದರು. ಅಂತಿಮ ಎರಡು ಎಸೆತದಲ್ಲಿ 10 ರನ್ ಗಳಿಸಬೇಕಿತ್ತು, ಜಡೇಜ ಸಿಕ್ಸರ್ ಮತ್ತು ಬೌಂಡರಿ ಬಾರಿಸಿ ಚೆನ್ನೈ ತಂಡದ ಗೆಲುವನ್ನು ಸಾರಿದರು. ಮಾತ್ರವಲ್ಲದೇ ವಿದಾಯದ ಸನಿಹದಲ್ಲಿರುವ ಧೋನಿ ಅವರಿಗೆ ಐಪಿಎಲ್ ಪ್ರಶಸ್ತಿಯನ್ನು ಸಮರ್ಪಿಸಲು ಯಶಸ್ವಿಯಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್
T20 ವಿಶ್ವಕಪ್ ಇಂಗ್ಲೆಂಡ್ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್ ಬೌಲರ್ ತಂಡಕ್ಕೆ ಕಂಬ್ಯಾಕ್
ಬ್ಯಾಟಿಂಗ್ – ಬೌಲಿಂಗ್ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ ಪ್ರಕಟ
Mumbai Indians ವಿರುದ್ಧ ತವರಿನ ಅಂಗಳ: ರಾಹುಲ್ಗೆ ಮಹತ್ವದ ಪಂದ್ಯ
Champions Trophy ತಾಣ ಅಂತಿಮ ಲಾಹೋರ್, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?
MUST WATCH
ಹೊಸ ಸೇರ್ಪಡೆ
Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ
ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ
Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ