ರಾಜ್ಯದಲ್ಲಿ ಶೇ.50 ಮಂದಿ ತಂಬಾಕು ಬಳಕೆ


Team Udayavani, May 30, 2023, 1:32 PM IST

ರಾಜ್ಯದಲ್ಲಿ ಶೇ.50 ಮಂದಿ ತಂಬಾಕು ಬಳಕೆ

ಬೆಂಗಳೂರು: ವಿಶ್ವ ಅರೋಗ್ಯ ಸಂಸ್ಥೆಯ ಪ್ರಕಾರ ಕೋವಿಡ್‌ 19ನಿಂದ ಸಾವನ್ನಪ್ಪಿರುವವರ ಸಂಖ್ಯೆ ಗಿಂತ ಬೀಡಿ, ಸಿಗರೇಟ್‌, ಗುಟ್ಕಾ ಮುಂತಾದ ತಂಬಾಕು ಉತ್ಪನ್ನಗಳ ಬಳಕೆಯಿಂದ ಮರಣ ಹೊಂದಿರುವವರ ಸಂಖ್ಯೆ ಅಧಿಕವಾಗಿದ್ದು, ಪ್ರತಿ ವರ್ಷ ಸರಿ ಸುಮಾರು 13.5-14 ಲಕ್ಷ ಜನ ದೇಶದಲ್ಲಿ ಬಲಿಯಾಗುತ್ತಿದ್ದಾರೆ.

ಡಬ್ಲ್ಯೂಎಚ್‌ಒ ನಡೆಸಿರುವ ಗ್ಲೋಬಲ್‌ ಅಡಲ್ಟ್ ತಂಬಾಕು ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ ಸುಮಾರು 3 ಕೋಟಿ ಜನ ತಂಬಾಕು ಉತ್ಪನ್ನಗಳನ್ನು ಬಳಸುತ್ತಿದ್ದಾರೆ. ಕರ್ನಾಟಕದ ಜನಸಂಖ್ಯೆಯಲ್ಲಿ ಅರ್ಧಕ್ಕರ್ಧ ಮಂದಿ ಈ ಉತ್ಪನ್ನಗಳನ್ನು ಬಳಸುತ್ತಿರುವುದು ಕಂಡು ಬಂದಿದೆ. ಈ ಪೈಕಿ ಶೇ.8.8ರಷ್ಟು ಧೂಮಪಾನಿಗಳು, ಶೇ.16.3ರಷ್ಟು ಧೂಮ ಪಾನ ರಹಿತ ತಂಬಾಕು ಬಳಕೆದಾರರು ಇದ್ದಾರೆ. ಇವರಲ್ಲಿ ಯುವಕರೇ ಹೆಚ್ಚು ವ್ಯಸನಿಗಳಾಗಿದ್ದಾರೆ. ತಂಬಾಕು ಮತ್ತು ಅದರ ಉತ್ಪನ್ನಗಳಿಂದಾಗುವ ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲು ವಿಶ್ವ ಆರೋಗ್ಯ ಸಂಸ್ಥೆಯು ಪ್ರತಿ ವರ್ಷ ಒಂದೊಂದು ಘೋಷವಾಕ್ಯದೊಂದಿಗೆ ಮೇ 31ರಂದು “ವಿಶ್ವ ತಂಬಾಕು ರಹಿತ ದಿನ’ವನ್ನು ಆಚರಿಸಲಾಗುತ್ತದೆ. ಅದೇ ರೀತಿ ಈ ವರ್ಷ “ನಮಗೆ ಆಹಾರ ಬೇಕು, ತಂಬಾಕು ಅಲ್ಲ’ ಎಂಬ ಘೋಷವಾಕ್ಯದೊಂದಿಗೆ ಹಾಗೂ ತಂಬಾಕು ರೈತರಿಗೆ ಪರ್ಯಾಯ ಬೆಳೆ ಉತ್ಪಾದನೆ ಮತ್ತು ಮಾರುಕಟ್ಟೆ ಅವಕಾಶಗಳ ಬಗ್ಗೆ ಅರಿವು ಮೂಡಿಸಲು ಮತ್ತು ಸಮರ್ಥನೀಯ, ಪೌಷ್ಟಿಕ ಬೆಳೆಗಳನ್ನು ಬೆಳೆಯಲು ಪೋ›ತ್ಸಾಹಿಸುವ ಗುರಿಯೊಂದಿಗೆ ಆಚರಿಸಲಾಗುತ್ತಿದೆ.

ಸೈಲ್ಕೋಥಾನ್‌: ಇದರ ಭಾಗವಾಗಿ ರಾಜ್ಯ ಆರೋಗ್ಯ ಇಲಾಖೆಯೂ ತಂಬಾಕು ಸೇವನೆ ಯಿಂದಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಕೈಗೊಂಡಿದ್ದು, “ವಿಶ್ವ ತಂಬಾಕು ರಹಿತ ದಿನ’ದಂದು ಹೀಲಿಯಂ ಬಲೂನ್‌ಗಳನ್ನು ಬಿಡುಗಡೆ ಮಾಡುವ ಮೂಲಕ ನಮಗೆ ಆಹಾರ ಬೇಕು; ತಂಬಾಕು ಅಲ್ಲ ಎಂಬ ಮಾಹಿತಿಯೊಂದಿಗೆ ನಗರದ ಆರೋಗ್ಯ ಸೌಧದಿಂದ ಫ್ರೀಡಂ ಪಾರ್ಕ್‌ವರೆಗೆ ಸೈಲ್ಕೋಥಾನ್‌ ಅನ್ನು ಆಯೋಜಿಸಲಾಗಿದೆ.

ಜಾಗೃತಿ: ಫ್ರೀಡಂ ಪಾರ್ಕ್‌ನಲ್ಲಿ ತಂಬಾಕಿ ನಿಂದಾಗುವ ತೊಂದರೆಗಳನ್ನು ಕುರಿತು ಅರಿವು ಮೂಡಿಸಲು ವಿವಿಧ ಚಟುವಟಿಕೆಗಳನ್ನು ಹಮ್ಮಿ ಕೊಳ್ಳಲಾಗಿದೆ. ರೈತರಲ್ಲಿ ಜಾಗೃತಿ ಮೂಡಿಸಲು, ಮೊದಲು ತಂಬಾಕು ಬೆಳೆಯುತ್ತಿದ್ದ ರೈತರು, ಇದೀಗ ತಂಬಾಕು ಬೆಳೆಯಿಂದ ಪರ್ಯಾಯ ಬೆಳೆಗಳಿಗೆ ಯಶಸ್ವಿಯಾಗಿ ಬದಲಾದವರಿಗೆ ಸನ್ಮಾನ ಮತ್ತು ಅವರ ಯಶಸ್ವಿ ಕಥೆಯನ್ನು ತಿಳಿಸಲಾಗುತ್ತದೆ. ಇದರಿಂದ ತಂಬಾಕು ರೈತರನ್ನು ಪರ್ಯಾಯ ಬೆಳೆ ಬೆಳೆಯಲು ಪ್ರೇರೆಪಿಸಲಾಗುತ್ತದೆ. ಅದೇ ರೀತಿ, ಜಿಲ್ಲಾ ಆಸ್ಪತ್ರೆಗಳಲ್ಲಿ ಸ್ಥಾಪಿಸಲಾಗಿರುವ “ತಂಬಾಕು ವ್ಯಸನ ಮುಕ್ತ ಕೇಂದ್ರ’ಗಳ ಮೂಲಕ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲು ತಿಳಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಡಿ. ರಂದೀಪ್‌ ತಿಳಿಸುತ್ತಾರೆ.

ತಂಬಾಕು ಬಳಕೆ ಮತ್ತು ಬೆಳೆಯಿಂದ ಆರೋಗ್ಯದ ಮೇಲೆ ಮಾತ್ರವಲ್ಲದೆ ಪರಿಸರ, ಆರ್ಥಿಕತೆ ಮತ್ತು ರಾಷ್ಟ್ರದ ಒಟ್ಟಾರೆ ಉತ್ಪಾದಕತೆಯ ಮೇಲೂ ಪರಿಣಾಮ ಬೀರುತ್ತದೆ. ತಂಬಾಕು ಬೆಳೆಯಿಂದ ರೈತರಿಗೆ ಹಾಗೂ ವ್ಯಾಪಾರಿಗಳಿಗೆ ಲಾಭವಾಗುವುದಕ್ಕಿಂತ ಹೆಚ್ಚು ತಂಬಾಕು ಸೇವನೆಯಿಂದ ಅನಾರೋಗ್ಯಕ್ಕೆ ಪೀಡಿತರಾದವರ ನಾನಾ ಕಾಯಿಲೆಗಳ ಚಿಕಿತ್ಸೆಗೆಂದು ಸರ್ಕಾರ ಹೆಚ್ಚು ಹಣವನ್ನು ವೆಚ್ಚಮಾಡುತ್ತಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆ ಕೈಗೊಂಡಿರುವ ಕ್ರಮಗಳು:

 ಸಾರ್ವಜನಿಕರಿಂದ ಸಿಒಟಿಪಿಎ ಉಲ್ಲಂಘನೆಗಳನ್ನು ನೋಂದಾಯಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು “ಸ್ಟಾಪ್ಟೊಬ್ಯಾಕೊ’ ಎಂಬ ಆ್ಯಂಡ್ರಾಯಿಡ್‌ ಮೊಬೈಲ್‌ ಅಪ್ಲಿಕೇಶನ್‌ ಪರಿಚಯಿಸಿದೆ.

 ನಗರಾಭಿವೃದ್ಧಿ ಇಲಾಖೆಯು 2022ರಲ್ಲಿ ತಂಬಾಕು ಮಾರಾಟಗಾರರ ಪರವಾನಗಿ ಕುರಿತು ಹೊರಡಿಸಿರುವ ಅಧಿಸೂಚನೆ ಪ್ರಕಾರ, ತಂಬಾಕು ಉತ್ಪನ್ನಗಳನ್ನು ಮಾರಾಟಕ್ಕೆ ಪ್ರತ್ಯೇಕ ಪರವಾನಗಿ ಕಡ್ಡಾಯವಾಗಿದೆ.

 ಕರ್ನಾಟಕದಲ್ಲಿ 30ಕ್ಕೂ ಹೆಚ್ಚು ಗ್ರಾಮಗಳನ್ನು ತಂಬಾಕು ಮುಕ್ತ ಗ್ರಾಮ ಎಂದು ಘೋಷಣೆ.

 ಅಪ್ರಾಪ್ತ ವಯಸ್ಕರನ್ನು ತಂಬಾಕು ಹಾವಳಿಯಿಂದ ರಕ್ಷಿಸಲು “ತಂಬಾಕು ಮುಕ್ತ ಉತ್ಪಾದನೆ-2023′ ಎಂಬ ಹೊಸ ನೀತಿಯನ್ನು ಪರಿಚಯಿಸುವ ಪ್ರಕ್ರಿಯೆ ನಡೆಯುತ್ತಿದೆ.

 ಸಿಗರೇಟ್‌ ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯಿದೆ(ಸಿಒಟಿಪಿಎ) 2003ರ ರಾಜ್ಯ ಮಟ್ಟದ ತಿದ್ದುಪಡಿಯು ಸರ್ಕಾರದ ಪರಿಶೀಲನೆಯಲ್ಲಿದೆ.

-ಭಾರತಿ ಸಜ್ಜನ್‌

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.