ಬಂಟ್ವಾಡಿ ಕಿಂಡಿ ಅಣೆಕಟ್ಟು : ಹಲಗೆ ಹಾಕಿದ್ದರೂ, ನದಿಪಾತ್ರದ ಊರುಗಳ ಬಾವಿ ನೀರೆಲ್ಲ ಉಪ್ಪು


Team Udayavani, May 31, 2023, 3:35 PM IST

ಬಂಟ್ವಾಡಿ ಕಿಂಡಿ ಅಣೆಕಟ್ಟು : ಹಲಗೆ ಹಾಕಿದ್ದರೂ, ನದಿಪಾತ್ರದ ಊರುಗಳ ಬಾವಿ ನೀರೆಲ್ಲ ಉಪ್ಪು

ಕುಂದಾಪುರ: ಉಪ್ಪು ನೀರಿನ ಸಮಸ್ಯೆ ಪರಿಹಾರಕ್ಕೆ ಸೌಪರ್ಣಿಕ ನದಿಗೆ ಬಂಟ್ವಾಡಿ ಬಳಿ ಕಿಂಡಿ ಅಣೆಕಟ್ಟು ನಿರ್ಮಿಸಿದ್ದರೂ, ನದಿ ಪಾತ್ರದ ಹತ್ತಾರು ಗ್ರಾಮಗಳಿಗೆ ಇದೇ ಶಾಪವಾಗಿ ಪರಿಣಮಿಸಿದೆ. ಡ್ಯಾಂಗೆ ಹಲಗೆ ಹಾಕಿರುವುದರಿಂದಲೇ ಇಲ್ಲಿನ ಅನೇಕ ಊರುಗಳ ಬಾವಿ ನೀರು ಉಪ್ಪಾಗಿದೆ. ಕೂಡಲೇ ಹಲಗೆ ತೆಗೆಯಬೇಕು ಎನ್ನುವುದಾಗಿ ಈ ಭಾಗದ ಜನರು ಆಗ್ರಹಿಸಿದ್ದಾರೆ.

ಬಂಟ್ವಾಡಿ ಕಿಂಡಿ ಅಣೆಕಟ್ಟಿಗೆ ಹಲಗೆ ಹಾಕಿರುವುದರಿಂದ ಬಂಟ್ವಾಡಿ ಆಸುಪಾಸಿನ ಊರುಗಳ ಬಾವಿಗಳ ನೀರು ಕಳೆದ ಡಿಸೆಂಬರ್‌ನಿಂದಲೇ ಉಪ್ಪಾಗಿದೆ. ಈ ಬಗ್ಗೆ ಅಧಿಕಾರಿಗಳಿಗೆ ಹೇಳಿದರೂ ಪ್ರಯೋಜನವಾಗಿಲ್ಲ ಎನ್ನುವ ಜನ, ಈಗಲಾದರೂ ಹಲಗೆ ತೆಗೆದರೆ, ನೀರಿನ ಹರಿವಿನಿಂದಾಗಿಯಾದರೂ ಒಂದಷ್ಟು ಅನುಕೂಲವಾಗಬಹುದು ಎನ್ನುತ್ತಾರೆ.

ಯಾವೆಲ್ಲ ಊರಿಗೆ ಸಮಸ್ಯೆ?
ಬಂಟ್ವಾಡಿ ಸುತ್ತಮುತ್ತಲಿನ ಪರಿಸರ ಸೇರಿದಂತೆ, ನಾವುಂದ, ಹಡವು, ಪಡುಕೋಣೆ, ಮರವಂತೆ, ಬಡಾಕೆರೆ, ಹೇರೂರು, ಕೋಣಿR, ಹುಂತನಗೋಳಿ ಆಸುಪಾಸಿನ ಊರುಗಳಿಗೆ ಈ ಬಂಟ್ವಾಡಿ ಡ್ಯಾಂನಿಂದಾಗಿ ಸಮಸ್ಯೆಯಾಗಿದೆ. ಹಲಗೆಗಳನ್ನು ಸರಿಯಾದ ಕ್ರಮದಲ್ಲ ಅಳವಡಿಸದೇ ಇರುವುದು, ಸರಿಯಾದ ಸಮಯಕ್ಕೆ ಅಳವಡಿಸದೇ ಇರುವುದರಿಂದ ಉಪ್ಪು ನೀರೆಲ್ಲ ಅದಾಗಲೇ ಮೇಲೆ ಬಂದಿದ್ದರಿಂದ ಈ ಸಮಸ್ಯೆ ಬಂದಿದೆ ಎನ್ನುವುದು ಸ್ಥಳೀಯರ ಅಭಿಪ್ರಾಯ.

ಮತ್ತೆ ನೆರೆ ಭೀತಿ
ಪ್ರತೀ ಮಳೆಗಾಲದಲ್ಲೂ ಬಂಟ್ವಾಡಿ ಕಿಂಡಿ ಅಣೆಕಟ್ಟಿನ ಹಲಗೆ ತೆಗೆಯುವ ಪ್ರಕ್ರಿಯೆ ವಿಳಂಬ ಆಗುತ್ತಿರು ವುದರಿಂದ ನಾವುಂದ, ಅರೆಹೊಳೆ, ಮರವಂತೆ, ಕೋಣಿR ಸುತ್ತಮುತ್ತಲಿನ ಪರಿಸರದಲ್ಲಿ ಕೃತಕ ನೆರೆ ಉಂಟಾಗುತ್ತದೆ. ಮಳೆಗಾಲಕ್ಕೂ ಮೊದಲೇ ತೆಗೆಯದೇ, ಕೊನೆಗೆ ಮಳೆ ಶುರುವಾದ ನಂತರ ತೆಗೆಯಲೂ ಆಗದೇ, ಅಲ್ಲೇ ಕೆಲ ಹಲಗೆ ಬಿಡುವ ಪ್ರಮೇಯವೂ ಇರುತ್ತದೆ. ಈ ಬಾರಿಯಾದರೂ ಕಿಂಡಿ ಅಣೆಕಟ್ಟಿನ ಹಲಗೆ ಬೇಗ ತೆಗೆದರೆ, ಆರಂಭದ ಮಳೆಗೆ ಡ್ಯಾಂನ ಕಿಂಡಿಗಳಲ್ಲಿ ನಿಲ್ಲುವ ಮರ, ಮಟ್ಟುಗಳು, ಕಸ, ಕಡ್ಡಿಗಳು ಕೊಚ್ಚಿ ಹೋಗಿ, ನೆರೆ ಭೀತಿ ಕಡಿಮೆಯಾಗಬಹುದು ಎನ್ನುವುದು ಈ ಭಾಗದ ಜನರ ಅಭಿಪ್ರಾಯ.

ಏನು ಪ್ರಯೋಜನ?
ಬಂಟ್ವಾಡಿ, ನಾವುಂದ, ಬಡಾಕೆರೆ, ಹುಂತನಗೋಳಿ ಆಸುಪಾಸಿನ ಭಾಗದಲ್ಲಿ ಸಾಮಾನ್ಯವಾಗಿ ಬಡಾಕೆರೆ ಹಬ್ಬದ ಸಮಯದಲ್ಲಿ ಅಂದರೆ ಜ.27ರ ಹುಣ್ಣಿಮೆ ನೀರು ಮೇಲೆ ಬರುವ ಸಮಯದಲ್ಲಿ ಉಪ್ಪು ನೀರಾಗುವುದು ವಾಡಿಕೆ. ಆದರೆ ಈ ಬಾರಿ ಗುಡ್ಡಮ್ಮಾಡಿ ಷಷ್ಠಿ ಸಂದರ್ಭ ಅಂದರೆ ಡಿಸೆಂಬರ್‌ನಲ್ಲಿಯೇ ಇಲ್ಲಿನ ಬಾವಿಗಳ ನೀರು ಉಪ್ಪಾಗಿದೆ. ಹಾಗಾದರೆ ಹಲಗೆ ಹಾಕಿ ಏನು ಪ್ರಯೋಜನ ಅನ್ನುವುದು ನಾವುಂದ ಗ್ರಾಮ ಪಂಚಾಯತ್‌ ಸದಸ್ಯ ರಾಜೇಶ್‌ ಸಾಲುºಡ ಅವರ ಪ್ರಶ್ನೆ.

ಕೂಡಲೇ ತೆಗೆಸುವ ಕ್ರಮ
ಈಗಾಗಲೇ ಹಲಗೆ ತೆಗೆಯಲು ಮುಂದಾಗಿದ್ದು, ಕೂಡಲೇ ಎಲ್ಲ ಹಲಗೆಯನ್ನು ತೆಗೆಸಲು ಕ್ರಮ ಕೈಗೊಳ್ಳಲಾಗುವುದು. ಮಳೆಗಾಲಕ್ಕೂ ಮೊದಲೇ ತೆಗೆಸಲಾಗುವುದು.
– ನಾಗಲಿಂಗ ಎಚ್‌., ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌,
ಸಣ್ಣ ನೀರಾವರಿ ಇಲಾಖೆ

– ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.