ಮಡಿಕೇರಿ: ಕಳೆದ ಹೋಗಿದ್ದ 23 ಮೊಬೈಲ್ ಪತ್ತೆ… ವಾರಸುದಾರರಿಗೆ ಹಸ್ತಾಂತರ
Team Udayavani, Jun 1, 2023, 7:30 AM IST
ಮಡಿಕೇರಿ: ಪೊಲೀಸ್ ಠಾಣೆಗಳಿಗೆ ತೆರಳಿ ದೂರು ನೀಡುವ ದೂರುದಾರರ ನೆರವಿಗೆ ಪೊಲೀಸ್ ಕಂಟ್ರೋಲ್ ರೂಂ ಸಿದ್ಧವಿದೆ ಎಂದು ಎಸ್ಪಿ ಕೆ. ರಾಜರಾಮನ್ ತಿಳಿಸಿದ್ದಾರೆ.
ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಮೊಬೈಲ್ ಕಳೆದುಕೊಂಡ 23 ಮಂದಿಗೆ ಮೊಬೈಲ್ಗಳನ್ನು ಹಿಂದಿರುಗಿಸಿದ ಬಳಿಕ ಪತ್ರಕರ್ತರೊಂದಿಗೆ ಅವರು ಮಾತನಾಡಿ, ಜಿಲ್ಲೆಯ ಪ್ರತಿಯೊಂದು ಪೊಲೀಸ್ ಠಾಣೆಗಳಲ್ಲಿ ದೂರು ನೀಡಲು ತೆರಳುವವರ ವಿಳಾಸ ಹಾಗೂ ದೂರವಾಣಿ ಸಂಖ್ಯೆಯನ್ನು ದಾಖಲಿಸಿಕೊಳ್ಳುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಆ ಮಾಹಿತಿಯನ್ನು ಕಂಟ್ರೋಲ್ ರೂಂ ಪಡೆದುಕೊಂಡು ದೂರುದಾರರನ್ನು ಸಂಪರ್ಕಿಸುತ್ತದೆ. ಬಳಿಕ ಠಾಣೆಗೆ ತೆರಳಿದ ಉದ್ದೇಶ, ದೂರಿನ ಮಾಹಿತಿ ಪಡೆದುಕೊಳ್ಳಲಾಗುತ್ತದೆ. ಅಲ್ಲದೇ ಠಾಣೆಗಳಲ್ಲಿ ಸೂಕ್ತ ಸ್ಪಂದನೆ ದೊರೆತಿದೆಯೇ ? ಅಧಿಕಾರಿ, ಸಿಬಂದಿ ಗೌರವಯುತವಾಗಿ ನಡೆದುಕೊಂಡಿದ್ದಾರೆಯೇ, ನೀಡಿರುವ ದೂರಿಗೆ ಕ್ರಮ ಕೈಗೊಳ್ಳಲಾಗಿದೆಯೇ ಎಂಬ ಮಾಹಿತಿಯನ್ನು ದೂರುದಾರರಿಂದ ಪಡೆದುಕೊಳ್ಳಲಾಗುತ್ತದೆ.
ಈ ಸಂದರ್ಭ ಯಾವುದಾದರೂ ಠಾಣೆಗಳಲ್ಲಿ ಸೂಕ್ತ ಸ್ಪಂದನೆ ದೊರೆತ್ತಿಲ್ಲ ಎಂಬ ಬಗ್ಗೆ ದೂರುದಾರರು ತಿಳಿಸಿದರೆ, ಸಂಬಂಧಿಸಿದ ಅಧಿಕಾರಿ ಹಾಗೂ ಸಿಬಂದಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಈಗಾಗಲೇ ಈ ಸಂಬಂಧ ಕೆಲವೊಂದು ದೂರುಗಳು ಬಂದಿದ್ದು, ಇಲಾಖಾ ವಿಚಾರಣೆ ಕೈಗೊಳ್ಳಲಾಗಿದೆ ಎಂದು ರಾಮರಾಜನ್ ವಿವರಿಸಿದರು.
ಮೊಬೈಲ್ ಕಳುವಾದರೆ ceir.gov.in ವೆಬ್ಸೈಟ್ ಮೂಲಕ ದೂರು ನೀಡಬಹುದಾಗಿದೆ. ಅಲ್ಲಿ ಕೇಳಲಾಗುವ ಮಾಹಿತಿಗಳನ್ನು ಸಮರ್ಪಕವಾಗಿ ದಾಖಲು ಮಾಡಿದರೆ, ಆ ಬಗ್ಗೆ ಸ್ಥಳೀಯ ಠಾಣೆಗಳಿಗೆ ಮಾಹಿತಿ ಬರುತ್ತದೆ. ಬಳಿಕ ತನಿಖೆ ಕೈಗೊಂಡು ಮೊಬೈಲ್ಗಳನ್ನು ಪತ್ತೆ ಮಾಡಲಾಗುತ್ತದೆ. ನಾಗರಿಕರು ಈ ವೆಬ್ಸೈಟ್ ಅನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದರು.
ಈ ಸಂದರ್ಭ ಸೆನ್ ಪೊಲೀಸ್ ಠಾಣೆಯ ನಿರೀಕ್ಷಕ ಜಿ.ಕೆ.ರಾಘವೇಂದ್ರ ಹಾಗೂ ಸಿಬಂದಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ