ಯಶವಂತಪುರ- ಹಾಸನಕ್ಕೆ ರೈಲು ಸೇವೆ ವಿಸ್ತರಿಸಿ


Team Udayavani, Jun 1, 2023, 2:50 PM IST

tdy-17

ಸಕಲೇಶಪುರ: ಹಾಸನ- ಯಶವಂತಪುರ ರೈಲನ್ನು ಸಕಲೇಶಪುರದವರೆಗೆ ವಿಸ್ತರಿಸುವಂತೆ ಮಲೆ ನಾಡಿಗರಿಂದ ಬೇಡಿಕೆ ಕೇಳಿ ಬರುತ್ತಿದೆ.

ಹಾಸನದಿಂದ ಬೆಳಿಗ್ಗೆ 7 ಗಂಟೆಗೆ ಹೊರಟು 10.10ಕ್ಕೆ ಬೆಂಗಳೂರಿನ ಯಶವಂತಪುರಕ್ಕೆ ಬರುವ ಹಾಗೂ ಸಂಜೆ 6 ಗಂಟೆಗೆ ಯಶವಂತಪುರದಿಂದ ಹೊರಡುವ ಇದೇ ರೈಲು ರಾತ್ರಿ 9.10ಕ್ಕೆ ಹಾಸನ ನಿಲ್ದಾಣಕ್ಕೆ ಬರುತ್ತದೆ.ಈ ಹಿನ್ನೆಲೆ ಇಂಟರ್‌ ಸಿಟಿ ರೈಲನ್ನು ಸಕಲೇಶಪುರದವರೆಗೆ ವಿಸ್ತರಿಸ ಬೇಕೆಂಬ ಬೇಡಿಕೆ ವ್ಯಾಪಕವಾಗಿ ಮಲೆನಾಡಿಗರಿಂದ ಕೇಳಿ ಬರುತ್ತಿದೆ. ಬೆಳಗ್ಗೆ 6 ಗಂಟೆಗೆ ಸಕಲೇಶಪುರ ರೈಲು ನಿಲ್ದಾಣದಿಂದ ಈ ರೈಲು ಹೊರಡುವಂತೆ ಮಾಡಿದರೆ ಬೆಂಗಳೂರಿಗೆ 10.10ಕ್ಕೆ ಹೋಗಿ ಕೆಲಸಗಳನ್ನು ಮುಗಿಸಿಕೊಂಡು ಇದೇ ರೈಲಿನಲ್ಲಿ ಸಂಜೆ 6 ಗಂಟೆಗೆ ಹೊರಟು ರಾತ್ರಿ 10.10ರವೇಳೆಗೆ ಸಕಲೇಶಪುರಕ್ಕೆ ಹಿಂತಿರುಗಿ ಬರಬಹುದಾಗಿದೆ. ಇದರಿಂದ ಮಲೆನಾಡಿನ ಜನಸಾಮಾನ್ಯರಿಗೆ ಹಾಗೂ ವರ್ತಕರಿಗೆ ಬಹಳ ಅನುಕೂಲವಾಗುತ್ತದೆ.

ರೈಲು ಸೇವೆಯಿಂದ ಅನುಕೂಲಕರ: ಕಾಫಿ, ಮೆಣಸು, ಏಲಕ್ಕಿ, ಜೇನುತುಪ್ಪದಂತಹ ಮಲೆನಾಡಿನ ಉತ್ಪನ್ನಗಳನ್ನು ಸಹ ಬೆಂಗಳೂರಿಗೆ ಕೊಂಡೊಯ್ದು ಮಾರಾಟ ಮಾಡಲು ಅನುಕೂಲ ವಾಗುತ್ತದೆ. ಪ್ರಸ್ತುತ ಇಂಟರ್‌ ಸಿಟಿ ರೈಲು ಹಾಸನದಲ್ಲಿ ನಿಲುಗಡೆ ಯಾಗುವುದರಿಂದ ಈ ರೈಲಿನಲ್ಲಿ ಬೆಳೆಗ್ಗೆ ಬೆಂಗಳೂರಿಗೆ ಹೋಗಬೇಕಾದವರು ಬೆಳಗ್ಗೆ 4.75ಕ್ಕೆ ಸಕಲೇಶಪು ರದಿಂದ ಹಾಸನಕ್ಕೆ ಬಸ್‌ನಲ್ಲಿ ದುಬಾರಿ ದರ ತೆತ್ತು ಮತ್ತೆ ಆಟೋ ಮೂಲಕ ಅಧಿಕ ಹಣ ಕೊಟ್ಟು ರೈಲು ನಿಲ್ದಾಣಕ್ಕೆ ಹೋಗಬೇಕಾಗಿದೆ. ಇನ್ನು ಬೆಂಗಳೂರು ಕಡೆಯಿಂದ ಸಕಲೇಶಪುರಕ್ಕೆ ಬರುವವರು ರಾತ್ರಿ ವೇಳೆ ಹಾಸನ ರೈಲು ನಿಲ್ದಾಣಕ್ಕೆ  ಹೊಸ ಬಸ್‌ ನಿಲ್ದಾಣಕ್ಕೆ ಬಂದು ಬಸ್‌ ಮೂಲಕ ಸಕಲೇಶಪುರಕ್ಕೆ ಬರಬೇಕಾಗಿರುತ್ತದೆ. ಈ ಹಿನ್ನೆಲೆ ಕೂಡಲೆ ಈ ರೈಲನ್ನು ಹಾಸನದಿಂದ ಸಕಲೇಶಪುರದವರೆಗೆ ವಿಸ್ತರಿಸಿದರೇ ಮಲೆನಾಡಿಗರಿಗೆ ಬಹಳ ಅನುಕೂಲವಾಗುತ್ತದೆ.

ಹಾಸನ ಯಶವಂತಪುರ ಇಂಟರ್‌ ಸಿಟಿ ರೈಲನ್ನು ಸಕಲೇಶಪುರದವರೆಗೆ ವಿಸ್ತರಿಸುವಂತೆ ಆಗ್ರಹಿಸಿ ಕೇಂದ್ರ ರೈಲ್ವೆ ಸಚಿವರಿಗೆ ಪತ್ರ ಬರೆದು ಮನವಿ ಸಲ್ಲಿಸುತ್ತೇನೆ. – ಸಿಮೆಂಟ್‌ ಮಂಜು, ಸಕಲೇಶಪುರ ಶಾಸಕ

ಹಾಸನ ಯಶವಂತಪುರ ಇಂಟರ್‌ ಸಿಟಿ ರೈಲನ್ನು ಸಕಲೇಶಪುರ ದವರೆಗೆ ವಿಸ್ತರಿಸುವಂತೆ ಹಲವು ಬಾರಿ ಉನ್ನತ ರೈಲ್ವೆ ಅಧಿಕಾರಿಗಳಿಗೆ ಮನವಿ ಮಾಡಿದರು ಸಹ ಯಾವುದೇ ಪ್ರಯೋಜನವಾಗಿಲ . -ನಾರಾಯಣ ಆಳ್ವ, ಅಧ್ಯಕ್ಷರು, ರೈಲು,ಪ್ರಯಾಣಿಕರ ಹಿತ ರಕ್ಷಣಾ ವೇದಿಕೆ ಪ್ರಯಾಣಿಕರ ಹಿತ ರಕ್ಷಣಾ ವೇದಿಕೆ

ಬದುಕಿಗಾಗಿ ನಾನು ಬೆಂಗಳೂರಿನಲ್ಲಿ ವಾಸವಿದ್ದರು ಸಹ ನಿರಂತರವಾಗಿ ಊರ ಕಡೆ ಹೋಗುತ್ತೇನೆ. ಯಶವಂತಪುರ ಹಾಸನ ಇಂಟರ್‌ ಸಿಟಿ ರೈಲನ್ನು ಸಕಲೇಶಪುರದವರೆಗೆ ವಿಸ್ತರಿಸಿದರೆ ನಮ್ಮಂತಹವರಿಗೆ ಬಹಳ ಅನುಕೂಲವಾಗುತ್ತದೆ. – ಚಿದನ್‌, ಬೆಂಗಳೂರು ವರ್ತಕ 

-ಸುಧೀರ್‌ ಎಸ್‌.ಎಲ್‌

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.