ದಾವಣಗೆರೆ: ಮಕ್ಕಳಿಬ್ಬರಿಗೆ ಟಿಕ್ಸೋಟೇಪ್ ಸುತ್ತಿ ಕೊಲೆಗೈದ ತಂದೆ!; ಬಂಧನ
Team Udayavani, Jun 1, 2023, 5:45 PM IST
ದಾವಣಗೆರೆ: ತನ್ನಿಬ್ಬರು ಅವಳಿ ಮಕ್ಕಳಿಗೆ ಟಿಕ್ಸೋ ಟೇಪ್ ಸುತ್ತಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದ ತಂದೆಯನ್ನು ದಾವಣಗೆರೆಯ ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ.
ಮೂಲತಃ ಬೆಳಗಾವಿ ಜಿಲ್ಲೆ ಗೋಕಾಕ್ ನ ಅಮರ್ (36) ತನ್ನ ಅವಳಿ ಮಕ್ಕಳಾದ ಅದ್ವೈತ್ ಮತ್ತು ಅನ್ವಿತ್ (4.4 ವರ್ಷ) ಅವರನ್ನು ಕೊಲೆಗೈದಿರುವ ಆರೋಪಿ. ಯಾವ ಕಾರಣಕ್ಕೆ ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ ಎಂಬುದು ತನಿಖೆಯಿಂದ ಹೊರ ಬರಬೇಕಿದೆ.
ಹರಿಹರ ಸಮೀಪದ ಕಾರ್ಗಿಲ್ ಕಂಪನಿಯಲ್ಲಿ ಕೆಮಿಕಲ್ ಇಂಜಿನಿಯರ್ ಆಗಿರುವ ಅಮರ್, ದಾವಣಗೆರೆಯ ಆಂಜನೇಯ ಬಡಾವಣೆಯಲ್ಲಿ ವಾಸಿಸುತ್ತಿದ್ದ. ಮೇ.31 ರಂದು ಅವಳಿ ಮಕ್ಕಳಾದ ಅದ್ವೈತ್ ಮತ್ತು ಅನ್ವಿತ್ ಇಬ್ಬರನ್ನು ಕಾರಿನಲ್ಲಿ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಟೋಲ್ ಗೇಟ್ ಗೆ ಕರೆದೊಯ್ದು ಸರ್ವೀಸ್ ರಸ್ತೆಯಲ್ಲಿ ಇಬ್ಬರೂ ಮಕ್ಕಳಿಗೆ ಟಿಕ್ಸೋ ಟೇಪ್ ಸುತ್ತಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದ.
ಇದನ್ನೂ ಓದಿ:ತವರಿನ ಲಾಭವಿಲ್ಲ, ಟಾಸ್ ಗೆದ್ದು ಫೀಲ್ಡಿಂಗ್ ಮಾಡಬೇಕಿಲ್ಲ…: ಇದು 2023ರ IPL ವಿಶೇಷತೆ
ಅಮರ್ ಪತ್ನಿ ಜಯಲಕ್ಷ್ಮಿ ತನ್ನ ತವರು ಊರಾದ ವಿಜಯಪುರದಲ್ಲಿದ್ದರು. ಅಮರ್ ನ ತಾಯಿ ಸಾವಿತ್ರಮ್ಮ ಮನೆಯಲ್ಲಿದ್ದರು. ವಿದ್ಯಾನಗರ ಠಾಣೆ ಪೊಲೀಸರು ಆರೋಪಿಯನ್ನ ವಶಕ್ಕೆ ತೆಗೆದುಕೊಂಡು ವಿಚಾರಣೆಗೆ ಒಳಪಡಿಸಿದಾಗ ಅವಳಿ ಮಕ್ಕಳನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ. ಹೆಚ್ಚಿನ ವಿಚಾರಣೆ ಮಾಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
MUST WATCH
ಹೊಸ ಸೇರ್ಪಡೆ
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ