ರಷ್ಯಾ ಬಳಿಯಿದೆ 12 ಲಕ್ಷ ಕೋಟಿ ರೂ.!

ಆರ್ಥಿಕ ದಿಗ್ಬಂಧನ; ಭಾರತದ ರೂಪಾಯಿಯನ್ನು ಖರ್ಚು ಮಾಡಲಾಗದೆ ಒದ್ದಾಡುತ್ತಿದೆ ರಷ್ಯಾ

Team Udayavani, Jun 2, 2023, 7:45 AM IST

ರಷ್ಯಾ ಬಳಿಯಿದೆ 12 ಲಕ್ಷ ಕೋಟಿ ರೂ.!

ಬ್ಲೂಮ್‌ಬರ್ಗ್‌: ಉಕ್ರೇನ್‌ ಮೇಲೆ ಮುಗಿಬಿದ್ದು ಆರ್ಥಿಕ ದಿಗ್ಬಂಧನಕ್ಕೊಳಗಾಗಿ ಪರದಾಡುತ್ತಿರುವ ರಷ್ಯಾ ಒಂದು ವಿಚಿತ್ರ ಪೀಕಲಾಟದಲ್ಲಿ ಸಿಕ್ಕಿಬಿದ್ದಿದೆ.

ಭಾರತಕ್ಕೆ ಅದು ಪೆಟ್ರೋಲ್‌-ಡೀಸೆಲ್‌ ಸೇರಿದಂತೆ ಕೆಲವು ಉತ್ಪನ್ನಗಳನ್ನು ರಫ್ತು ಮಾಡುತ್ತಿದೆ. ಅದಕ್ಕೆ ಪ್ರತಿಯಾಗಿ ಭಾರತ ರೂಪಾಯಿಯಲ್ಲಿ ಪಾವತಿ ಮಾಡುತ್ತಿದೆ. ಹೀಗಾಗಿ ರಷ್ಯಾ 147 ಬಿಲಿಯನ್‌ ಡಾಲರ್‌ (12 ಲಕ್ಷ ಕೋಟಿ ರೂ.) ಮೌಲ್ಯದ ರೂಪಾಯಿಗಳನ್ನು ಹೊಂದಿದೆ.

ಆದರೆ ಅದನ್ನು ಹೇಗೆ ಖರ್ಚು ಮಾಡುವುದು ಎಂದು ತಿಳಿಯದೇ ಒದ್ದಾಡುತ್ತಿದೆ. ರಷ್ಯಾದ ಬ್ಯಾಂಕುಗಳು, ಅದರ ಕರೆನ್ಸಿ ರೂಬೆಲ್‌ಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಿಷೇಧವಿದೆ. ಆ ದೇಶದ ಕರೆನ್ಸಿ ತನ್ನ ಮೌಲ್ಯವನ್ನೇ ಕಳೆದುಕೊಂಡಿದೆ. ಇಂತಹ ಹೊತ್ತಿನಲ್ಲಿ ಅದಕ್ಕೆ ಆಸರೆಯಾಗಿರುವುದು ಭಾರತ. ಆದರೆ ಭಾರತದೊಂದಿಗೆ ವ್ಯಾಪಾರ ನಡೆಸಿದರೂ, ಅದಕ್ಕೆ ಉಪಯೋಗವಾಗುತ್ತಿಲ್ಲ.

ಭಾರತ ರಷ್ಯಾದಿಂದ ತರಿಸಿಕೊಳ್ಳುತ್ತಿದ್ದರೂ, ರಫ್ತು ಮಾಡುವ ಪ್ರಮಾಣ ತೀರಾ ಕಡಿಮೆಯಿದೆ. ಆಮದು-ರಫ್ತು ಪ್ರಮಾಣ ಒಂದು ಹಂತದಲ್ಲೇನಾದರೂ ಇದ್ದಿದ್ದರೆ ಹಾಗೆಯೇ ಸರಿಹೊಂದಿಸಬಹುದಿತ್ತು. ಅದೂ ಆಗುತ್ತಿಲ್ಲ. ಭಾರತದ ಕರೆನ್ಸಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಳಸಲು ರಷ್ಯಾಕ್ಕೆ ಆಗುತ್ತಿಲ್ಲ. ಪ್ರತೀ ತ್ತೈಮಾಸಿಕದಲ್ಲಿ ಅಸಮತೋಲನ 2ರಿಂದ 3 ಬಿಲಿಯನ್‌ ಡಾಲರ್‌ ಮೌಲ್ಯದ ರೂಪಾಯಿ ಸಂಗ್ರಹ ಹೆಚ್ಚಾಗುತ್ತಲೇ ಇದೆ. ಭಾರತವೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ತನ್ನ ಕರೆನ್ಸಿ ಬಳಕೆಯನ್ನು ಹೆಚ್ಚಿಸಬೇಕೆಂಬ ಉದ್ದೇಶ ಹೊಂದಿದೆ.

ಹಾಗಾಗಿ ಭಾರತಕ್ಕೆ ರಫ್ತು ಮಾಡುವ ದೇಶಗಳಿಗೆ ಹೆಚ್ಚುವರಿ ರೂಪಾಯಿಯಲ್ಲೇ ಪಾವತಿ ಮಾಡುತ್ತಿದೆ. ರೂಪಾಯಿ ಉಳಿದರೆ, ಅದನ್ನು ಭಾರತೀಯ ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವಂತೆ ಆರ್‌ಬಿಐ ವಿದೇಶಿ ಕಂಪನಿಗಳಿಗೆ ಸಲಹೆ ನೀಡಿದೆ.

ರಷ್ಯಾಕ್ಕಿರುವ ಆಯ್ಕೆಗಳೇನು?: ಭಾರತೀಯ ಬ್ಯಾಂಕುಗಳಲ್ಲಿ ಸಂಗ್ರಹವಾಗಿರುವ ರೂಪಾಯಿಯನ್ನು, ಭಾರತೀಯ ಮೂಲಸೌಕರ್ಯ ಯೋಜನೆಗಳಲ್ಲಿ ಹೂಡಿಕೆ ಮಾಡಿ, ಕಾಲಾನುಕ್ರಮದಲ್ಲಿ ಅದರ ಲಾಭ ಪಡೆಯಬಹುದು ಎಂಬ ಆಯ್ಕೆಯೂ ರಷ್ಯಾ ಮುಂದಿದೆ. ಆರಂಭದಲ್ಲಿ ಇದಕ್ಕೆ ಒಪ್ಪದಿದ್ದರೂ, ಸದ್ಯ ಇದೇ ರಷ್ಯಾ ಮುಂದಿರುವ ಉತ್ತಮ ಆಯ್ಕೆ ಎನಿಸಿದೆ. ಇನ್ನು ರಷ್ಯಾ ಮೂರನೇ ರಾಷ್ಟ್ರವಾದ ಚೀನಾದ ಯುವಾನ್‌, ಯುಎಇಯ ದಿರ್ಹಾಮ್‌ ಕರೆನ್ಸಿಯನ್ನು ಬಳಸಬಹುದು. ಇನ್ನೂ ಮುಖ್ಯವಾಗಿ ಭಾರತಕ್ಕೆ ಸರಿಸಮನಾಗಿ ರಷ್ಯಾದಿಂದ ತೈಲವನ್ನು ತರಿಸಿಕೊಳ್ಳುವ ರಾಷ್ಟ್ರಗಳು ತೀರಾ ಕಡಿಮೆಯಿವೆ. ಯಾವುದೇ ರೀತಿಯಲ್ಲಿ ನೋಡಿದರೂ ವಿಶ್ವದ ಬಹುತೇಕ ರಾಷ್ಟ್ರಗಳು ಹೇರಿರುವ ಆರ್ಥಿಕ ದಿಗ್ಬಂಧನ ಆ ದೇಶಕ್ಕೆ ಹೊರೆಯಾಗಿದೆ.

ರಷ್ಯಾದ ಸಂಕಷ್ಟಕ್ಕೆ ಇನ್ನೊಂದು ಮುಖ್ಯ ಕಾರಣವಿದೆ. ಆ ದೇಶದ ಬ್ಯಾಂಕುಗಳು ಪಾಶ್ಚಾತ್ಯ ರಾಷ್ಟ್ರಗಳಲ್ಲಿ ನಿಷೇಧಕ್ಕೊಳಗಾಗಿವೆ. ಹಾಗಾಗಿ ಅನ್ಯದೇಶಗಳಿಂದ ಹಣ ಪಡೆಯಲು ಕಷ್ಟವಾಗುತ್ತಿದೆ.

ಟಾಪ್ ನ್ಯೂಸ್

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.