ಮಂಗಳೂರಿನಲ್ಲಿ ಪ್ರತ್ಯೇಕ ಪ್ರಕರಣ: ಎರಡು ಬೈಕ್ಗಳ ಕಳವು
Team Udayavani, Jun 2, 2023, 6:45 AM IST
ಮಂಗಳೂರು: ನಗರ ವ್ಯಾಪ್ತಿಯ ಎರಡು ಪ್ರತ್ಯೇಕ ಪ್ರಕರಣದಲ್ಲಿ ಎರಡು ಬೈಕ್ಗಳು ಕಳವಾಗಿರುವ ಕುರಿತಂತೆ ದೂರು ದಾಖಲಾಗಿದೆ.
ಮೇ 23ರಂದು ಮಧ್ಯಾಹ್ನ ಗಣೇಶ್ ಅವರು ಅಪರಾಹ್ನ 2.45ಕ್ಕೆ ಕುಂಟಿಕಾನದ ಬಿಎಂಎಸ್ ಹೊಟೇಲ್ ಎದುರುಗಡೆ ಬೈಕ್ ನಿಲ್ಲಿಸಿ ಪಕ್ಕದ ಶೋರೂಂ ಒಂದಕ್ಕೆ ಕೆಲಸಕ್ಕೆ ಹೋಗಿದ್ದರು. ಸಂಜೆ 6 ಗಂಟೆಗೆ ವಾಪಸು ಬಂದು ನೋಡಿದಾಗ ನಿಲ್ಲಿಸಿದ ಸ್ಥಳದಲ್ಲಿ ಬೈಕ್ ಇರಲಿಲ್ಲ. ಕಳವಾದ ಬೈಕ್ನ ಮೌಲ್ಯ 75 ಸಾವಿರ ರೂ. ಎಂದು ಅಂದಾಜಿಸಲಾಗಿದ್ದು, ಈ ಕುರಿತಂತೆ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೊಂದು ಪ್ರಕರಣದಲ್ಲಿ ಮೇ 11ರಂದು ಸಂಜೆ 6 ಗಂಟೆಯಿಂದ ಮೇ 12ರ ಬೆಳಗ್ಗೆ 7.15ರ ಮಧ್ಯಾವಧಿಯಲ್ಲಿ ಹಂಪನಕಟ್ಟೆಯ ವೆನಾÉಕ್ ಆಸ್ಪತ್ರೆ ಆವರಣದ ಬರ್ನ್ ವಾರ್ಡ್ ಬಳಿ ಪಾರ್ಕ್ ಮಾಡಿದ್ದ ಬೈಕ್ ಕಳವಾಗಿದೆ. ವಿಶ್ವನಾಥ್ ಧನ್ರಾಜ್ ಓಲೇಕರ್ ಅವರಿಗೆ ಸೇರಿದ ಪಲ್ಸರ್ ಬೈಕ್ ಆಗಿದ್ದು, 75 ಸಾವಿರ ರೂ. ಮೌಲ್ಯ ಅಂದಾಜಿಸಲಾಗಿದೆ. ಮಂಗಳೂರು ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ