Manipur ದ 5 ಜಿಲ್ಲೆಗಳಲ್ಲಿ ಕರ್ಫ್ಯೂ ಸಡಿಲಿಕೆ 

ಲೂಟಿಯಾಗಿದ್ದ 140 ಶಸ್ತ್ರಾಸ್ತ್ರಗಳು ವಾಪಸ್‌- ಗೃಹ ಸಚಿವರು ಮರಳಿದ ಬೆನ್ನಲ್ಲೇ ಕೆಲವೆಡೆ ಮತ್ತೆ ಹಿಂಸಾಚಾರ

Team Udayavani, Jun 3, 2023, 7:26 AM IST

manipur violance

ನವದೆಹಲಿ/ಇಂಫಾಲ: ಕಳೆದೊಂದು ತಿಂಗಳಿಂದ ಸರಣಿ ಹಿಂಸಾಚಾರವನ್ನು ಕಂಡಿರುವ ಮಣಿಪುರದ 5 ಜಿಲ್ಲೆಗಳಲ್ಲಿ ಶುಕ್ರವಾರ ಕರ್ಫ್ಯೂ ಸಡಿಲಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಭೇಟಿ ನೀಡಿ ಶಾಂತಿ ಸ್ಥಾಪನೆಗೆ ಕ್ರಮ ಕೈಗೊಂಡ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಅಷ್ಟೇ ಅಲ್ಲ, ಪೊಲೀಸ್‌ ಶಿಬಿರಗಳಿಂದ ಲೂಟಿ ಮಾಡಲಾಗಿದ್ದ 2 ಸಾವಿರಕ್ಕೂ ಹೆಚ್ಚು ಶಸ್ತ್ರಾಸ್ತ್ರಗಳ ಪೈಕಿ 140 ಅನ್ನು ಅಮಿತ್‌ ಶಾ ಅವರ ಎಚ್ಚರಿಕೆಯ ಬಳಿಕ ಮರಳಿಸಲಾಗಿದೆ.

4 ದಿನಗಳ ಕಾಲ ರಾಜ್ಯ ಪ್ರವಾಸದಲ್ಲಿದ್ದ ಸಚಿವ ಶಾ ಅವರು ಗುರುವಾರವಷ್ಟೇ ಬಂಡುಕೋರರ ಗುಂಪಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದರು. ಶಸ್ತ್ರಾಸ್ತ್ರಗಳನ್ನು ಮರಳಿಸದೇ ಇದ್ದರೆ ಅಂಥವರ ವಿರುದ್ಧ ಕಠಿಣಾತಿಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದರು. ಅದಾದ 24 ಗಂಟೆಗಳಲ್ಲಿ ಮಣಿಪುರದ ವಿವಿಧ ಜಿಲ್ಲೆಗಳಲ್ಲಿ ಒಟ್ಟಾರೆ 140 ಶಸ್ತ್ರಾಸ್ತ್ರಗಳನ್ನು ವಾಪಸ್‌ ಮಾಡಲಾಗಿದೆ. ಈ ಶಸ್ತ್ರಾಸ್ತ್ರಗಳ ಪೈಕಿ ಎಕೆ-47ಗಳು, ಇನ್ಸಾಸ್‌ ರೈಫ‌ಲ್‌ಗಳು, ಅಶ್ರುವಾಯು, ಸ್ಟೆನ್‌ ಗನ್‌ಗಳು, ಗ್ರೆನೇಡ್‌ ಲಾಂಚರ್‌ಗಳು ಮತ್ತು ಹಲವು ಪಿಸ್ತೂಲುಗಳು ಸೇರಿವೆ. ಇದೇ ವೇಳೆ, ಅಮಿತ್‌ ಶಾ ಅವರ ರಾಜ್ಯ ಪ್ರವಾಸ ಪೂರ್ಣಗೊಂಡ ಬಳಿಕವೂ ಮಣಿಪುರದ ಅಲ್ಲಲ್ಲಿ ಶುಕ್ರವಾರ ಹಿಂಸಾಚಾರಗಳು ವರದಿಯಾಗಿವೆ.

ರಾಷ್ಟ್ರಪತಿಯನ್ನು ಭೇಟಿಯಾದ ಸಚಿವ ಶಾ

ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಮಣಿಪುರದಿಂದ ಮರಳಿದ ಮಾರನೇ ದಿನವೇ ಈ ಭೇಟಿ ನಡೆದಿದೆ. ಇದು ಕೇವಲ ಸೌಜನ್ಯದ ಭೇಟಿ ಎಂದು ಶಾ ಹೇಳಿದ್ದಾರೆ. ಆದರೆ, ರಾಷ್ಟ್ರಪತಿ ಭವನಕ್ಕೆ ಆಗಮಿಸಿದ ಶಾ ಅವರು ಮಣಿಪುರ ಗಲಭೆ ಕುರಿತು ಮಾಹಿತಿ ನೀಡಲು ಮುರ್ಮು ಅವರನ್ನು ಭೇಟಿಯಾಗಿರಬಹುದು ಎಂದು ಮೂಲಗಳು ತಿಳಿಸಿವೆ.

ಮಾಹಿತಿ ಸೋರಿಕೆಗೆ ಸೇನೆ ಖಂಡನೆ

ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರ ಇರುವಂತೆಯೇ ವಿವಿಧ ಭಾಗಗಳಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಮೈತೇಯಿ ಸಮುದಾಯದ ಅಧಿಕಾರಿಗಳ ಹೆಸರುಗಳು ಸಾಮಾಜಿಕ ಜಾಲತಾಣಗಳಲ್ಲಿ ಸೋರಿಕೆಯಾಗಿವೆ. ಇದರ ಬಗ್ಗೆ ಭಾರತೀಯ ಸೇನೆಯು ತೀವ್ರ ಕಳವಳ ವ್ಯಕ್ತಪಡಿಸಿದೆ. ಈ ರೀತಿ ಪಟ್ಟಿಯನ್ನು ಹಂಚಿಕೊಂಡಿರುವುದು ಖಂಡನೀಯ. ನಮ್ಮ ಅಧಿಕಾರಿಗಳು ಧರ್ಮ, ಜಾತಿ, ಜನಾಂಗ ಎಂಬ ಭೇದವಿಲ್ಲದೇ ಸಾವಿರಾರು ಮಂದಿಯನ್ನು ರಕ್ಷಿಸಿದ್ದಾರೆ, ನಿರ್ವಸಿತರಿಗೆ ಆಶ್ರಯ ನೀಡಲು ಆಹಾರ, ನಿದ್ರೆಯಿಲ್ಲದೇ ಹಲವು ದಿನಗಳನ್ನು ಕಳೆದಿದ್ದಾರೆ. ಈಗ ಅಧಿಕಾರಿಗಳ ಹೆಸರುಗಳನ್ನು ಸೋರಿಕೆ ಮಾಡುವ ಮೂಲಕ ಅವರ ನೈತಿಕತೆಯನ್ನು ಕುಗ್ಗಿಸುತ್ತಿರುವುದು ದುಷ್ಕೃತ್ಯ ಎಂದು ಸೇನೆ ಟ್ವೀಟ್‌ ಮಾಡಿದೆ.

ಟಾಪ್ ನ್ಯೂಸ್

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

Madikeri ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

IMD

ಮತದಾನಕ್ಕೆ ಬಿಸಿಲು ಅಡ್ಡಿಯಾಗದಿರಲಿ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

1-ewewewqewe

Karkare ಯನ್ನು ಕೊಂದಿದ್ದು ಕಸಬ್‌ ಅಲ್ಲ,RSS ನಂಟಿದ್ದ ಪೊಲೀಸ್‌: ಕಾಂಗ್ರೆಸ್‌ ನಾಯಕ

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Odisha; ಒಂದೇ ವಿಧಾನಸಭಾ ಕ್ಷೇತ್ರಕ್ಕೆ 3 ಪಕ್ಷಗಳಿಂದ ಒಂದೇ ಕುಟುಂಬದ ಅಭ್ಯರ್ಥಿಗಳು!

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

Election Campaign; ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

Madikeri ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

IMD

ಮತದಾನಕ್ಕೆ ಬಿಸಿಲು ಅಡ್ಡಿಯಾಗದಿರಲಿ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.