ವ್ಯಸನ ಮುಕ್ತಿ ಕೇಂದ್ರದ ಮುಖ್ಯಸ್ಥನೇ ಡ್ರಗ್ಸ್‌ ವ್ಯಸನಿ!  


Team Udayavani, Jun 4, 2023, 2:42 PM IST

ವ್ಯಸನ ಮುಕ್ತಿ ಕೇಂದ್ರದ ಮುಖ್ಯಸ್ಥನೇ ಡ್ರಗ್ಸ್‌ ವ್ಯಸನಿ!  

ಬೆಂಗಳೂರು: ಮದ್ಯ ಅಥವಾ ಮಾದಕ ವಸ್ತು ವ್ಯಸನಿಯಾಗಿದ್ದರೆ ಅಂತಹ ವ್ಯಕ್ತಿಯನ್ನು ವ್ಯಸನ ಮುಕ್ತ ಕೇಂದ್ರಕ್ಕೆ ದಾಖಲಿಸುವುದು ಸಾಮಾನ್ಯ. ಆದರೆ, ಇಲ್ಲೊಬ್ಬ ವ್ಯಸನ ಮುಕ್ತ ಕೇಂದ್ರದ ಹೆಸರಿನಲ್ಲೇ ಡ್ರಗ್ಸ್‌ ದಂಧೆ ನಡೆಸುತ್ತಿರುವುದು ಬೆಳಕಿಗೆ ಬಂದಿದ್ದು, ಗಿರಿನಗರ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಶ್ರೀನಿವಾಸ ನಗರದ ನಿವಾಸಿ ಸುಹಾಸ್‌ಗೌಡ ಅಲಿಯಾಸ್‌ ಸೂರಜ್‌ಗೌಡ (32) ಬಂಧಿತ. ಆರೋಪಿಯಿಂದ 11.3 ಗ್ರಾಂ ಎಂಡಿಎಂಎ, 3.5 ಗ್ರಾಂ ಎಕ್ಸೈಸಿ ಮಾತ್ರೆಗಳು ವಶಪಡಿಸಿಕೊಳ್ಳಲಾಗಿದೆ. ಆರೋಪಿ ಇತ್ತೀಚೆಗೆ ಹೊಸಕೆರೆಹಳ್ಳಿಯ ಕಾಲೇಜುವೊಂದರ ಬಳಿ ಡ್ರಗ್ಸ್‌ ಮಾರಾಟ ಮಾಡುತ್ತಿದ್ದ. ಈ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.

ಬಳಿಕ ಆರೋಪಿಯ ವಿಚಾರಣೆಯಲ್ಲಿ ತಾನು ವ್ಯಸನ ಮುಕ್ತ ಕೇಂದ್ರ ನಡೆಸುತ್ತಿರುವುದು ಗೊತ್ತಾಗಿದೆ. ಕೆಂಗೇರಿಯಲ್ಲಿರುವ ಪೂರ್ಣ ಪ್ರಜ್ಞಾ ಫೌಂಡೇಷನ್‌ ಹೆಸರಿನಲ್ಲಿ ಆರೋಪಿ ಮದ್ಯ ಮತ್ತು ಮಾದಕವಸ್ತು ವ್ಯಸನ ಮುಕ್ತ ಕೇಂದ್ರವನ್ನು ನಡೆಸುತ್ತಿದ್ದು, ಈತ ಅವಿವಾಹಿತನಾಗಿದ್ದಾನೆ. ರೈಲ್ವೆ ಇಲಾಖೆಯಲ್ಲಿ ಕೆಲಸಕ್ಕೆ ಸೇರುತ್ತೇನೆ. ಅದಕ್ಕಾಗಿ ಹಣದ ಅಗತ್ಯವಿದೆ ಎಂದು ಹೇಳಿ ಮನೆಯರ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದ. ಆದರಿಂದ ಮನೆಯವರು ಸುಮಾರು 40 ಲಕ್ಷ ರೂ. ಸಾಲ ಮಾಡಿಕೊಟ್ಟಿದ್ದರು. ಆದರೆ, ಈ ಹಣವನ್ನು ಮೋಜು-ಮಸ್ತಿ ಮಾಡಿಕೊಂಡು ಕಾಲ ಕಳೆಯುತ್ತಿದ್ದು, ಐಷಾರಾಮಿ ಹೋಟೆಲ್‌ಗ‌ಳಲ್ಲಿ ವಾಸವಾಗಿ ಮಾದಕ ವಸ್ತು ಸೇವಿಸಿಕೊಂಡು ಜೀವನ ಕಳೆಯುತ್ತಿದ್ದ. ಅದರಿಂದ ಆತನ ಪೋಷಕರು ಆರೋಪಿಯನ್ನು ಮನೆಯಿಂದ ಹೊರ ಹಾಕಿದ್ದರು ಎಂಬುದು ವಿಚಾರಣೆಯಲ್ಲಿ ಗೊತ್ತಾಗಿದೆ ಎಂದು ಪೊಲೀಸರು ಹೇಳಿದರು.

ಗಿರಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವ್ಯಸನ ಮುಕ್ತ ಕೇಂದ್ರದ ಮುಖ್ಯಸ್ಥನಾಗಿದ್ದು ಹೀಗೆ… : ಅತಿಯಾದ ಮಾದಕ ವಸ್ತು ವ್ಯಸನಿಯಾಗಿದ್ದ ಸುಹಾಸ್‌ ಗೌಡ, ಸುಮಾರು 6 ವರ್ಷಗಳ ಕಾಲ ಕೆಂಗೇರಿಯಲ್ಲಿರುವ ಪೂರ್ಣ ಪ್ರಜ್ಞಾ ಫೌಂಡೇಷನ್‌ ಮದ್ಯ ಮತ್ತು ಮಾದಕವಸ್ತು ವ್ಯಸನ ಮುಕ್ತಿ ಕೇಂದ್ರದಲ್ಲಿ ರೋಗಿಯಾಗಿದ್ದ. ಬಳಿಕ ಕೆಲ ದಿನಗಳ ಕಾಲ ವ್ಯಸನ ಮುಕ್ತನಾಗಿದ್ದ. ಈ ವೇಳೆ ಕೇಂದ್ರದ ಮಾಲೀಕರ ಜತೆ ಮಾತುಕತೆ ನಡೆಸಿ, ತಾನೂ ಕೂಡ ಕೇಂದ್ರದ ಮೇಲೆ ಹಣ ಹೂಡಿಕೆ ಮಾಡುತ್ತೇನೆ ಎಂದು ಶೇ.25ರಷ್ಟು ಹೂಡಿಕೆ ಮಾಡಿದ್ದ. ಬಳಿಕ ಅದರ ವ್ಯವಸ್ಥಾಪಕ ನಿರ್ದೇಶಕನಾಗಿದ್ದು, ಎರಡ್ಮೂರು ವರ್ಷಗಳಿಂದ ಈತನೇ ಕೇಂದ್ರ ನಡೆಸುತ್ತಿದ್ದಾನೆ. ಈ ಮಧ್ಯೆ ಕಳೆದ ಎರಡು ತಿಂಗಳ ಹಿಂದೆ ಈತನ ತಂದೆ ತೀರಿಕೊಂಡಿದ್ದರು. ಈ ವೇಳೆ ಖಿನ್ನತೆಗೊಳಗಾಗಿ ಆತ್ಮಹತ್ಯೆಗೂ ಯತ್ನಿಸಿದ್ದ. ಆಗಿನಿಂದಲೂ ಮತ್ತೆ ಮಾದಕ ವಸ್ತು ವ್ಯಸನಿಯಾಗಿದ್ದು, ಕೇಂದ್ರದಲ್ಲಿರುವ ರೋಗಿಗಳಿಗೂ ಎಂಡಿಎಂಎ, ಗಾಂಜಾ, ಕೋಕೇನ್‌ ನೀಡುತ್ತಿದ್ದ. ಹೀಗೆ ಮೈಸೂರಿನಿಂದ ಮಾದಕ ವಸ್ತು ತಂದು ಕಳೆದ 6 ತಿಂಗಳಿನಿಂದ ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ಎಂಬುದು ಗೊತ್ತಾಗಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.