Malpe Main Road : ಸಮರ್ಪಕ ಚರಂಡಿ ಇಲ್ಲ; ಮಳೆಗಾಲದಲ್ಲಿ ರಸ್ತೆಯಲ್ಲೇ ಹರಿಯುತ್ತದೆ ನೀರು


Team Udayavani, Jun 4, 2023, 3:51 PM IST

Malpe Main Road : ಸಮರ್ಪಕ ಚರಂಡಿ ಇಲ್ಲ; ಮಳೆಗಾಲದಲ್ಲಿ ರಸ್ತೆಯಲ್ಲೇ ಹರಿಯುತ್ತದೆ ನೀರು

ಮಲ್ಪೆ: ಇನ್ನೇನು ಮಳೆಗಾಲ ಶುರುವಾಗಲು ದಿನಗಣನೆ ಶುರುವಾಗಿದ್ದು ಆಡಳಿತ ಮಳೆಗಾಲದ ಸ್ವಾಗತಕ್ಕೆ ಮಲ್ಪೆ ನಗರದಲ್ಲಿ ಯಾವುದೇ ಸಿದ್ದತೆಯನ್ನು ಕೈಗೊಂಡಂತೆ ಕಾಣುವುದಿಲ್ಲ. ಮುಖ್ಯವಾಗಿ ಇಲ್ಲಿನ ಹೃದಯ ಭಾಗದಲ್ಲಿನ ಚರಂಡಿಯಲ್ಲಿ ಹೂಳನ್ನು ತೆರವುಗೊಳಿಸಿಲ್ಲ ಎಂದು ನಾಗರಿಕರು ದೂರಿದ್ದಾರೆ.

ಜಿಲ್ಲೆಯ ಪ್ರಮುಖ ವಾಣಿಜ್ಯ ಮತ್ತು ಪ್ರವಾಸಿ ಕೇಂದ್ರವಾದ ಮಲ್ಪೆ ನಗರದ ಹೃದಯ ಭಾಗದಲ್ಲಿರುವ ರಸ್ತೆಯ ಎರಡೂ ಬದಿಯಲ್ಲಿ ನೀರು ಹರಿಯುಲು ಸಮರ್ಪಕವಾದ ಚರಂಡಿ ವ್ಯವಸ್ಥೆ ಇಲ್ಲದೆ ಹಲವು ವರ್ಷಗಳಿಂದ ಮಳೆ ನೀರು ರಸ್ತೆಯಲ್ಲೆ ಹರಿಯುತ್ತಿದೆ. ಇಲ್ಲಿ ನೆಪಕಷ್ಟೇ ಚರಂಡಿ ಇದೆ. ಮಳೆ ಬಂದಾಗ ಮಳೆ ನೀರು ಸರಾಗವಾಗಿ ಮುಂದಕ್ಕೆ ಹರಿದು ಹೋಗುವಂತೆ ಸಂಪರ್ಕ ಜಾಲ ಇಲ್ಲ. ಆದ್ದರಿಂದ ಮಳೆ ನೀರು ಚರಂಡಿ ತುಂಬಿ ರಸ್ತೆಯ ಮೇಲೆ ಹರಿದು ಹೋಗತ್ತದೆ. ಚರಂಡಿ ನೀರು ಇಂಗಿ ಹೋಗಬೇಕಾದ ಸ್ಥಿತಿ ಇದೆ. ಹೂಳು ತುಂಬಿದ ಚರಂಡಿ, ಮಡುಗಟ್ಟಿ ನಿಲ್ಲುವ ಕೊಳಚೆ ಸಹಿತ ಮಳೆ ನೀರು, ಜತೆ ಸೊಳ್ಳೆಗಳ ಕಾಟದಿಂದಾಗಿ ಅಂಗಡಿ ಮುಂಗಟ್ಟುಗಳ ಮಂದಿ ನಿತ್ಯ ಯಾತನೆ ಅನುಭವಿಸುತ್ತಿದ್ದಾರೆ.

ವಿಸ್ತರಣೆಯೇ ಪರಿಹಾರ
ಮುಖ್ಯರಸ್ತೆಯ ಎರಡೂ ಕಡೆ ಅಲ್ಲಲ್ಲಿ ಚರಂಡಿಗಳು ಕಾಣುತ್ತಿವೆ. ಕೆಲವಡೆ ಚರಂಡಿಗಳು ಮಣ್ಣಿನಿಂದ ಮುಚ್ಚಿ ಹೋಗಿ ರಸ್ತೆಯಾಗಿ ಮಾರ್ಪಟ್ಟಿವೆ. ಎಷ್ಟೋ ವರ್ಷಗಳಿಂದ ಇಲ್ಲಿ ಇದೇ ಸ್ಥಿತಿ ಇದೆ. ಮಲ್ಪೆ ನಗರದಲ್ಲಿ
ಸಮರ್ಪಕವಾದ ಚರಂಡಿ ವ್ಯವಸ್ಥೆ ಆಗಬೇಕಾದರೆ ರಸ್ತೆಯ ವಿಸ್ತರಣೆಯಾದರೆ ಮಾತ್ರ ಸಾಧ್ಯ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತದೆ. ಅಲ್ಲಿಯವರೆಗೆ ಮಳೆ ನೀರು ರಸ್ತೆಯಲ್ಲಿ ಹರಿದು ಹೋಗಬೇಕು ಎನ್ನುತ್ತಾರೆ ಶಬರಿ ಪ್ರಿಂಟರ್ ಮಾಲಕ ರಮೇಶ್‌ ತಿಂಗಳಾಯ.

ಕೊಳಚೆ ನೀರನ್ನು ದಾಟಬೇಕು
ಸರಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ (ಫಿಶರೀಸ್‌) ಮುಂಭಾಗದಲ್ಲಿರುವ ಚರಂಡಿಗೆ ಸಮೀಪದ ಸಂಕೀರ್ಣಗಳಿಂದ ಕೊಳಚೆ ನೀರು ಹರಿದು ಬಂದು ಹೂಳಿನೊಂದಿಗೆ ಕಸಕಡ್ಡಿಯಿಂದ ಚರಂಡಿ ಮುಚ್ಚಿ ಹೋಗಿದೆ. ಇದರಿಂದ ಮಳೆ ನೀರು ರಸ್ತೆಯಲ್ಲಿ ಶೇಖರಣೆಗೊಳ್ಳುತ್ತಿದೆ. ಶಾಲಾ ಕಾಲೇಜಿನ ಮಕ್ಕಳು ಈ ಕೊಳಚೆ ನೀರನೇ° ತುಳಿದುಕೊಂಡು ಹೋಗಿ ಶಾಲಾ ಆವರಣವನ್ನು ಪ್ರವೇಶಿಸಬೇಕಾಗಿದೆ.

ಶೀಘ್ರದಲ್ಲಿ ಚರಂಡಿಯಲ್ಲಿರುವ ಮಣ್ಣಿನ ತೆರವು
ರಸ್ತೆಯ ಅಗಲೀಕರಣದ ಯೋಜನೆಯಿಂದಾಗಿ ಮುಖ್ಯರಸ್ತೆಯ ಚರಂಡಿ ನಿರ್ಮಾಣದ ಕಾರ್ಯ ಬಾಕಿ ಉಳಿದಿದೆ. ಹೆಚ್ಚಿನ ಕಡೆ ಚರಂಡಿ ತುಂಬಿರುವ ಹೂಳನ್ನು ತೆರವುಗೊಳಿಸಲಾಗುತ್ತಿದೆ. ಕಾರ್ಮಿಕ ಕೊರತೆಯಿಂದ ಕೆಲಸ ವಿಳಂಭವಾಗುತ್ತಿದೆ. ಅತೀ ಶೀಘ್ರದಲ್ಲಿ ಬಾಕಿ ಕಡೆ ಉಳಿದ ಚರಂಡಿಯಲ್ಲಿರುವ ಮಣ್ಣನ್ನು ತೆರವುಗೊಳಿಸಲಾಗುವುದು.
– ಎಡ್ಲಿನ್‌ ಕರ್ಕಡ,ನಗರಸಭಾ ಸದಸ್ಯರು, ಮಲ್ಪೆ ಸೆಂಟ್ರಲ್‌ ವಾರ್ಡ್‌

 

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.