ಮಾರಕ ಪ್ಲಾಸ್ಟಿಕ್‌ ವಿರುದ್ಧ ಹೋರಾಟ


Team Udayavani, Jun 5, 2023, 3:33 PM IST

tdy-11

ದೊಡ್ಡಬಳ್ಳಾಪುರ: ಜೂನ್‌ 5 ವಿಶ್ವ ಪರಿಸರ ದಿನಾಚರಣೆ. ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್‌ ಮಾಲಿನ್ಯ ನಿಯಂತ್ರಣದ ಪರಿಹಾರ ಗಳ ಮೇಲೆ ಕೇಂದ್ರೀಕರಿ ಸುವ ದೃಷ್ಟಿಯಿಂದ ಪ್ಲಾಸ್ಟಿಕ್‌ ಮಾಲಿನ್ಯ ಸೋಲಿಸಿ ಈ ಬಾರಿಯ ಧ್ಯೇಯವಾಕ್ಯವಾಗಿದೆ.ಒಂದೆಡೆ ಕೈಗಾರಿಕೆಗಳ ತ್ಯಾಜ್ಯಗಳಿಂದ ಉಂಟಾಗುತ್ತಿರುವ ಮಾಲಿನ್ಯ ಒಂದೆಡೆಯಾದರೆ, ನಗರ ಪ್ರದೇಶಗಳಲ್ಲಿ ಪ್ಲಾಸ್ಟಿಕ್‌ನಿಂದಾಗುತ್ತಿರುವ ಮಾಲಿನ್ಯ ಗಂಭೀರ ವಿಚಾರವಾಗಿದೆ.

ಕೈಗಾರೀಕರಣದ ವರ ಹಾಗೂ ಶಾಪ: ದೊಡ್ಡ ಬಳ್ಳಾಪುರ ತಾಲೂಕಿನಲ್ಲಿ 80ರ ದಶಕದಲ್ಲಿ ಆರಂಭ ವಾದ ಕೈಗಾರಿಕಾ ಪ್ರದೇಶ ದಲ್ಲಿ ಕೈಗಾರಿಕೆಗಳಿಂದಾಗಿ ಸಹಸ್ರಾರು ಉದ್ಯೋಗಗಳು ಸೃಷ್ಟಿಯಾಗಿವೆ. ಆದರೆ ಇದು ಶಾಪವಾಗಿಯೂ ಪರಿಣಮಿಸಿದೆ. ಕಸಬಾ ಹೋಬಳಿ ಬಾಶೆಟ್ಟಿಹಳ್ಳಿ ಗ್ರಾಮದ ವ್ಯಾಪ್ತಿ ಯಲ್ಲಿ ಪ್ರಥಮ ಹಂತದಲ್ಲಿ ಕೆಐಡಿಬಿ ಭೂ ಸ್ವಾಧೀನ ಮಾಡಿ ಕೊಂಡಿತು. ನಂತರ ಇಲ್ಲಿನ ಸುತ್ತಮುತ್ತಲ ಗ್ರಾಮ ಗಳಲ್ಲಿ 4 ಹಂತಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆ ನಡೆದು ನೂರಾರು ಕೈಗಾರಿಕೆಗಳು ಸ್ಥಾಪನೆಯಾಗಿವೆ. 90ರ ದಶಕದಲ್ಲಿಯೇ ಇಲ್ಲಿನ ಶ್ರೀಷ್ಮ ಕೆಮಿ ಕಲ್ಸ್‌ ಕಾರ್ಖಾನೆಯಿಂದ ಉಂಟಾಗಿದ್ದ ಪರಿಸರ ಮಾಲಿನ್ಯ ದಿಂದಾಗಿ ಕೈಗಾರಿಕೆಗಳಿಂದಾಗುವ ಮಾಲಿನ್ಯದ ಬಿಸಿ ತಟ್ಟಿತು. ಕಾರ್ಖಾನೆ ಸ್ಥಗಿತ ಗೊಳಿಸುವಂತೆ ನಡೆದ ಹಲ ವಾರು ಹೋರಾಟಗಳಾಗಿ ಕಂಪನಿ ಬಾಗಿಲು ಮುಚ್ಚಿತು.

ನಂತರದ ವರ್ಷಗಳಲ್ಲಿ ಕೈಗಾರಿ ಕೆಗಳ ತ್ಯಾಜ್ಯ ನೀರು ಬಾಶೆಟ್ಟಿಹಳ್ಳಿ ,ವೀರಾಪುರ ,ಚಿಕ್ಕತುಮ ಕೂರು ಸೇರಿದಂತೆ ಸುತ್ತಮುತ್ತಲ ಗ್ರಾಮದ ಕೆರೆಗಳಿಗೆ ಹರಿಸಲಾಗುತ್ತಿದೆ ಎಂದು ಗ್ರಾಮಸ್ಥರು ಪ್ರತಿಭಟನೆ ಗಳನ್ನು ಇಂದಿಗೂ ನಡೆಸುತ್ತಿದ್ದಾರೆ. ಕಾರ್ಖಾನೆಗಳಲ್ಲಿನ ತ್ಯಾಜ್ಯ ಗಳನ್ನು ನಿಷ್ಟ್ರಿಯವಾಗಿರುವ ಕೊಳವೆ ಬಾವಿ ಗಳಿಗೆ ಹರಿಸಿರುವ ನಿದರ್ಶನಗಳಿವೆ. ಪ್ರಸ್ತುತ ಅರ್ಕಾ ವತಿ ನದಿ ಪಾತ್ರದ ಕರೆಗಳ ಸಂರಕ್ಷಣಾ ವೇದಿಕೆಯಿಂದ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ತ್ಯಾಜ್ಯ ನೀರು ಹಾಗೂ ನಗರಸಭೆಯ ಒಳಚರಂಡಿ ನೀರು ಕೆರೆಗೆ ಹರಿದು ಮಲಿನವಾಗುತ್ತಿದೆ ಎಂದು ಹೋರಾ ಟಗಳು ನಡೆಯುತ್ತಿದ್ದು, ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸಲು ಗ್ರಾಮಸ್ಥರು ಸಿದ್ಧತೆ ನಡೆಸಿದ್ದರು. ವೀರಾಪುರ ಹಾಗೂ ಚಿಕ್ಕತುಮಕೂರು ಕೆರೆಗಳಲ್ಲಿ ಕಲುಷಿತ ನೀರಿನಿಂದ ಮೀನುಗಳು ಸಾವನ್ನಪ್ಪುವ ಸಂಗತಿ ಸಾಮಾನ್ಯವಾಗಿದೆ.

ಕೈಗಾರಿಕೆಗಳ ಕಲುಷಿತ ನೀರಿನಿಂದಿನ ಇಲ್ಲಿನ ಅಂತರ್ಜಲ ಮಲಿನವಾಗಿದೆ. ಈ ಹಿಂದೆ ಇಲ್ಲಿನ ನೀರಿನ ಮಾದರಿಗಳನ್ನು ಪ್ರಯೋಗಾಲಕ್ಕೆ ಕಳುಹಿಸಿರುವ ವರದಿಗಳಲ್ಲಿ ನೀರಿನಲ್ಲಿ ರಾಸಾಯನಿಕ ಅಂಶಗಳಿರುವುದು ದೃಢವಾಗಿದೆ. ಈ ದಿಸೆ ಯಲ್ಲಿ ಸಂಬಂಧಪಟ್ಟವರ ಮೇಲೆ ಕ್ರಮ ಕೈಗೊಳ್ಳ ಬೇಕಿದೆ ಎನ್ನುತ್ತಾರೆ ಅರ್ಕಾವತಿ ನದಿ ಪಾತ್ರದ ಕರೆಗಳ ಸಂರಕ್ಷಣಾ ವೇದಿಕೆಯ ಮುಖಂಡ ವಸಂತ್‌ ಕುಮಾರ್‌.

ನಗರದ ಜೀವನಾಡಿಯಾದ ನಾಗರಕೆರೆಯಲ್ಲಿ ಒಳಚರಂಡಿಯ ತ್ಯಾಜ್ಯ ನೀರು ಹರಿದು ಕೆರೆ ಮಲಿನ ವಾಗುತ್ತಿದ್ದರೂ ಸಂಬಂಧಪಟ್ಟವರು ಗಮನ ಹರಿ ಸುತ್ತಿಲ್ಲ. ಇಲ್ಲಿನ ಒಳಚರಂಡಿ ಚೇಂಬರ್‌ಗಳನ್ನು ಕೂಡಲೇ ಸ್ಥಳಾಂತರಗೊಳಿಸಬೇಕಿದೆ ಎನ್ನುತ್ತಾರೆ ಪರಿಸರ ಪ್ರೇಮಿ ದೇವರಾಜ್‌.

ಪರಿಸರ ಮಾಲಿನ್ಯ : ದೊಡ್ಡಬಳ್ಳಾಪುರ ತಾಲೂಕಿನಲ್ಲಿ 3.5 ಲಕ್ಷಕ್ಕೂ ಮೀರಿದ ಜನಸಂಖ್ಯೆಯಿದೆ. ಕೈಗಾರಿಕೆ ಗಳಿಂದ ಆಗುವ ಮಾಲಿನ್ಯದಿಂದ ಅಂತರ್ಜಲ ಕಲು ಷಿತವಾಗುತ್ತಿದೆ. ನಗರದಲ್ಲಿ ಮೂಲ ಸೌಕರ್ಯ ಗಳಿಲ್ಲದೇ ಬಡಾವಣೆಗಳು ಮಿತಿಮೀರಿ ಬೆಳೆಯುತ್ತಿವೆ. ನಗರ ದಲ್ಲಿ ಸಹಸ್ರಾರು ವಾಹನ ಗಳಿಂದಾಗಿ ವಾಹನ ದಟ್ಟಣೆ ಹೆಚ್ಚಾಗುತ್ತಿದೆ. ವಾಯು ಮಾಲಿನ್ಯ, ಎಲ್ಲೆಂದರಲ್ಲಿ ಕಸ ಹಾಕುವುದು, ಗಿಡ ಮರಗಳಿಗೆ ಕೊಡಲಿ ಹಾಕುವುದು ಅವ್ಯಾಹತವಾಗಿ ನಡೆಯುತ್ತಿದೆ. ತಾಲೂಕಿನ ಚಿಗರೇನಹಳ್ಳಿಯಲ್ಲಿನ ಎಂಎಸ್‌ಜಿಪಿ ಕಸ ವಿಲೇವಾರಿ ಘಟಕಕ್ಕೆ ಬಿಬಿಎಂಪಿ ವ್ಯಾಪ್ತಿಯಿಂದ ಕಸ ತಂದು ಸುರಿಯುತ್ತಿರುವುದು ಇಲ್ಲಿನ ಸುತ್ತಮುತ್ತಲ ಪರಿಸರಕ್ಕೆ ಹಾನಿಯಾಗುತಿದ್ದು , ಘಟಕವನ್ನು ಸ್ಥಗಿತಗೊಳಿಸಬೇಕು ಎನ್ನುವ ಕೂಗುಗಳು ಕೇಳಿ ಬರುತ್ತಿವೆ. ಎತ್ತಿನ ಹೊಳೆ ಯೋಜನೆಗಾಗಿ ನಿರ್ಮಿ ಸುತ್ತಿರುವ ಬೈರಗೊಂಡ್ಲು ಜಲಾಶಕ್ಕೆ ಎಂಎಸ್‌ಜಿಪಿ ಯಿಂದ ಹೊರ ಬರುವ ತ್ಯಾಜ್ಯ ನೀರು ಸೇರುವ ಅಪಾಯವಿದೆ.

ಇನ್ನು ಇಲ್ಲಿನ ಕಸ ರಾಶಿಯಲ್ಲಿ ಪ್ಲಾಸ್ಟಿಕ್‌ ತ್ಯಾಜ್ಯದ ಪಾತ್ರ ಹೆಚ್ಚಾಗಿದೆ. ಈ ಹಿಂದೆ ಟೆರ್ರಾಫರ್ಮಾ ಘಟಕದಲ್ಲಿಯೂ ಸಹ ಕಸದ ರಾಶಿಗೆ ಬೆಂಕಿ ಬಿದ್ದು , ಸುತ್ತಮುತ್ತಲಿನ ಪ್ರದೇಶದಲ್ಲಿ ಮಾಲಿನ್ಯ ಉಂಟಾಗಿ ದ್ದನ್ನು ಸ್ಮರಿಸಬಹುದು.

ಮಾಲಿನ್ಯದಲ್ಲಿ ಪ್ಲಾಸ್ಟಿಕ್‌ ಪಾತ್ರ:  ಸುಪ್ರೀಂ ಕೋರ್ಟ್‌ ಆದೇಶದಂತೆ ಘನತ್ಯಾಜ್ಯ ವಸ್ತುಗಳ ನಿಯಮ 2000 ದನ್ವಯ ಸ್ಥಳೀಯ ಸಂಸ್ಥೆಗಳ ಆಡಳಿತಗಳು ವೈಜ್ಞಾನಿಕವಾಗಿ ಕಸ ವಿಲೇವಾರಿ ಮಾಡಬೇಕು. ನಗರದಲ್ಲಿ ಒಂದು ದಿನಕ್ಕೆ 35 ಟನ್‌ ಕಸ ಉತ್ಪತ್ತಿಯಾಗುತ್ತಿದೆ. ಇದರಲ್ಲಿ ಮನೆಗಳಿಂದ ಉತ್ಪತ್ತಿಯಾಗುವ ಕಸದ ಪ್ರಮಾಣ ದಿನಕ್ಕೆ 20 ಟನ್‌. ಬೇರ್ಪಡಿಸಿ ಸಂಗ್ರಹಿಸಿದ ಕಸವನ್ನು ನಗರದ ಹೊರವಲಯ ದಲ್ಲಿರುವ ವಡ್ಡರಪಾಳ್ಯದ ಸಮೀಪದ ನಗರಸಭೆ ತ್ಯಾಜ್ಯ ವಿಲೇವಾರಿ ಹಾಗೂ ಸಂಗ್ರಹಣಾ ಪ್ರದೇಶಕ್ಕೆ ವಿಲೇವಾರಿ ಮಾಡಲಾಗುತ್ತಿದೆ.

ಹಲವು ಪ್ರದೇಶಗಳಲ್ಲಿ ಕಸ ಸಂಗ್ರಹಣೆ ವಾಹನಕ್ಕೆ ನೀಡದೇ, ಬೀದಿ ಬದಿ ಅಥವಾ ಖಾಲಿ ನಿವೇಶನ ದಲ್ಲಿ ಸುರಿಯಲಾಗುತ್ತಿದ್ದು, ಇದನ್ನು ನಿಯಂತ್ರಿಸು ವಲ್ಲಿ ನಗರಸಭೆ ವಿಫಲವಾಗುತ್ತಿದೆ. ಕಸದಿಂದ ಸಮೀಪದ ಮನೆಗಳಲ್ಲಿನ ನಾಗರಿಕರಿಗೆ ತೊಂದರೆ ಯಾಗುತ್ತಿದೆ ಜೊತೆಗೆ ಇಲ್ಲಿನ ಕಸ ರಸ್ತೆಗೆ ಹರಡಿ ಜಾನುವಾರುಗಳು ಸಹ ಕಸ ತಿನ್ನುತ್ತಿರುತ್ತವೆ ಎನ್ನುವುದು ಸ್ಥಳೀಯ ನಾಗರಿಕರ ದೂರು.

ಪ್ಲಾಸ್ಟಿಕ್‌ ವಿರುದ್ಧ ಸಮರ: ಈ ಬಾರಿಯ ಪರಿಸರ ದಿನಾಚರಣೆಯ ಧ್ಯೇಯ ವಾಕ್ಯ ಪ್ಲಾಸ್ಟಿಕ್‌ ವಿರುದ್ದ ಸಮರವಾಗಿದೆ. ನಗರದಲ್ಲಿ ಪರಿಸರಕ್ಕೆ ಮಾರಕವಾಗಿರುವ ಏಕ ಬಳಕೆಯ ಪ್ಲಾಸ್ಟಿಕ್‌ ಬಳಕೆ ಹಾಗೂ ಮಾರಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಆದರೆ ನಗರ ಸೇರಿದಂತೆ ಗ್ರಾಮೀಣ ಪ್ರದೇಶ ಗಳಲ್ಲಿಯೂ ಸಹ ಪ್ಲಾಸ್ಟಿಕ್‌ ಬಳಕೆ ಕಡಿಮೆಯಾಗಿಲ್ಲ. ನಗರಸಭೆಯಿಂದ ಅಂಗಡಿಗಳ ಮೇಲೆ ದಾಳಿ ನಡೆಸಿ, ನಿಷೇಧಿತ ಪ್ಲಾಸ್ಟಿಕ್‌ ವಶಪಡಿಸಿ ಕೊಂಡು, ದಂಡ ವಿಧಿಸಲಾಗುತ್ತಿದ್ದರೂ ಇದನ್ನು ನಿಯಂತ್ರಣ ಮಾಡಲು ಸಾಧ್ಯವಾಗುತ್ತಿಲ್ಲ. ಈಗ ಸರ್ಕಾರದ ಕಟ್ಟುನಿಟ್ಟಿನ ನಿಷೇಧವಿರುವುದರಿಂದ ನಗರಸಭೆ ಹೆಚ್ಚಿನ ಗಮನ ಹರಿಸಬೇಕಿದೆ. ಬೀದಿ ಬದಿಗಳಲ್ಲಿ ಕಸ ಹಾಕುವವರಿಗೆ ದಂಡ ವಿಧಿಸ ಬೇಕಿದೆ ಎನ್ನುತ್ತಾರೆ ಪರಿಸರಾಸಕ್ತರು.

– ಡಿ. ಶ್ರೀಕಾಂತ

ಟಾಪ್ ನ್ಯೂಸ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.