ಪ್ರತಿಗ್ರಾಮದಲ್ಲೂ ಕಲ್ಯಾಣಿ ನಿರ್ಮಿಸಲು ಸಾಲುಮರದ ತಿಮ್ಮಕ್ಕ ಮನವಿ

ಸರ್ಕಾರ ಕಳೆನಾಶಕ ನಿಷೇಧಕ್ಕೆ ಮುಂದಾಗಬೇಕು ಉಮೇಶ್ ಒತ್ತಾಯ

Team Udayavani, Jun 5, 2023, 10:28 PM IST

1-asdadsa

ಹುಣಸೂರು: ಪರಿಸರ ಸಂರಕ್ಷಣೆ ಎಂದರೆ ಸಸಿನೆಡುವುದು ಮಾತ್ರವಲ್ಲದೆ ಪ್ರತಿ ಗ್ರಾಮಗಳಲ್ಲಿ ಮೂಕ ಪ್ರಾಣಿಗಳಿಗಾಗಿ ಕಲ್ಯಾಣಿ ನಿರ್ಮಿಸಬೇಕು, ಗಿಡ-ಮರ ಬೆಳೆಸುವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕೆಂದು ಸಾಲುಮರದ ತಿಮ್ಮಕ್ಕ ಸೂಚಿಸಿದರು.

ತಾಲೂಕಿನ ಬಿಳಿಕೆರೆಯಲ್ಲಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ಇಲ್ಲಿನ ಫ್ರೌಢಶಾಲೆಯಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಪರಿಸರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಸಮಾರಂಭವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಹಿಂದೆ ಹಳ್ಳಿಗಳಲ್ಲಿ ಕಲ್ಯಾಣಿ, ಕೆರೆ-ಕಟ್ಟೆಗಳಿದ್ದವು, ಅಭಿವೃದ್ದಿ ನೆಪದಲ್ಲಿ ಮುಚ್ಚಿ ಹೋಗಿವೆೆ. ಇನ್ನಾದರೂ ಕಲ್ಯಾಣಿಗಳನ್ನು ನಿರ್ಮಿಸಿ, ಮೂಕಪ್ರಾಣಿಗಳ ದಾಹ ತಣಿಸಲು ಮುಂದಾಗಿ. ಬೋರ್‌ವೆಲ್ ಬದಲು ಹೆಚ್ಚು ತೆರೆದ ಬಾವಿಗಳನ್ನು ನಿರ್ಮಿಸಿಕೊಳ್ಳಿ, ಶಾಲಾ ಮಕ್ಕಳು ಹಾಗೂ ಸಂಘ-ಸAಸ್ಥೆಗಳು, ಸಾರ್ವಜನಿಕರು ಮರಗಳನ್ನು ಬೆಳೆಸುವ ಮೂಲಕ ಪರಿಸರಕ್ಕೆ ನಿಮ್ಮದೇ ಆದ ಕೊಡುಗೆ ನೀಡುವಂತೆ ಆಶಿಸಿದರು.

ವಿಶ್ವಕ್ಕೆ ಸಂಸ್ಕಾರ ಕಲಿಸಿದ ಭಾರತ
ಸಾಲುಮರದ ತಿಮ್ಮಕ್ಕರವರ ದತ್ತುಪುತ್ರ ಉಮೇಶ್ ಮಾತನಾಡಿ ಭೂಮಿಯ ತಾಪಮಾನವೆಂಬುದು ಇಂದು ಜಗತ್ತಿನ ಸಮಸ್ಯೆಯಾಗಿದ್ದು, ಜಗತ್ತಿಗೆ ಸಂಸ್ಕಾರ ಕಲಿಸಿಕೊಟ್ಟ ಭಾರತವು ಪರಿಸರಕ್ಕೆ ಆದ್ಯತೆ ನೀಡುವುದನ್ನು ಕಡೆಗಣಿಸಿದ್ದರಿಂದ ಮಲಿನ ನಗರಗಳೆಂಬ ಹಣೆಪಟ್ಟಿ ಹೊರುವಂತಾಗಿದೆ. ೨೫ವರ್ಷಗಳ ಹಿಂದೆ ಪರಿಸರ ದಿನಾಚರಣೆ ಆಚರಣೆಗೆ ಬಂದಿರಲಿಲ್ಲ. ಅಭಿವೃದ್ದಿ ಹೆಸರಿನಲ್ಲಿ ಪರಿಸರಕ್ಕೆ ಹಾನಿಯಾಗುತ್ತಿದೆ. ಜನರಲ್ಲಿ ಪರಿಸರ ಪ್ರಜ್ಞೆ ಬೆಳೆಯದಿದ್ದಲ್ಲಿ ದೇಶ ದುಸ್ಥಿತಿಗೆ ತಲುಪಲಿದೆ.

ವಿಶ್ವಕ್ಕೆ ಪರಿಸರ ಪಾಠ
ಅನಕ್ಷರಸ್ಥೆ, ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಮರಗಳನ್ನು ಮಕ್ಕಳಂತೆ ಪೋಷಿಸಿದ್ದು, ವಿಶ್ವಕ್ಕೆ ಪರಿಸರಸಂರಕ್ಷಣೆಯ ಪಾಠಕಲಿಸಿದ್ದಾರೆ. ಅವರಂತೆ ಇಂದಿನ ಮಕ್ಕಳು, ಸಾರ್ವಜನಿಕರು ಕನಿಷ್ಟ ೧೦ಸಸಿ ನೆಟ್ಟು ಪೋಷಿಸಬೇಕಿದೆ. ಪ್ಲಾಸ್ಟಿಕ್ ಬಳಕೆಯಿಂದ ದೂರವಾಗಬೇಕಿದೆ. ಸರಕಾರ ರೋಗ ಪೀಡಿತ ಕಳೆನಾಶಕವನ್ನು ನಿಷೇಧಿಸಬೇಕಿದೆ. ಈ ಬಗ್ಗೆ ಶಾಸಕರು ಸದನದಲ್ಲಿ ಚರ್ಚಿಸಬೇಕೆಂದು ಮನವಿ ಮಾಡಿ, ಪರಿಸರ ಸಂರಕ್ಷಣೆಯ ಪ್ರಜ್ಞೆ ಎಲ್ಲರಲ್ಲೂ ಮೂಡಬೇಕಿದೆ ಎಂದರು.

ಪ್ರಕೃತಿ ಆರಾಧಿಸುವ ಏಕೈಕ ದೇಶ
ಶಾಸಕ ಜಿ.ಡಿ.ಹರೀಶ್‌ಗೌಡ ಮಾತನಾಡಿ ಮಕ್ಕಳಂತೆ ಸಸಿನೆಟ್ಟು ಬೆಳೆಸಿ ವಿಶ್ವದ, ಬಿಬಿಸಿಯ ಪ್ರಭಾವಶಾಲಿ ಮಹಿಳೆ ಶತಾಯುಷಿ ಸಾಲುಮರದ ತಿಮ್ಮಕ್ಕ ನಮ್ಮ ನಾಡಿನಹೆಮ್ಮೆ. ಇವರ ಸಾಧನೆಯು ಮಕ್ಕಳಿಗೆ ಪ್ರೇರೇಪಣೆಯಾಗಿ ಇವರಂತೆ ಗಿಡಮರ ಬೆಳೆಸಿ ಪರಿಸರಕ್ಕೆ ದೊಡ್ಡ ಕಾಣಿಕೆ ನೀಡಬೇಕಿದೆ. ಭಾರತ ಮಾತ್ರ ಪ್ರಕೃತಿಯನ್ನು ಆರಾಧಿಸಲಿದೆ. ಅಂತ ಪ್ರಕೃತಿಯನ್ನೇ ಕಲುಷಿತಗೊಳಿಸಿರುವ ಪರಿಣಾಮ ಪ್ರತಿ ಗ್ರಾಮದಲ್ಲೂ ಕನಿಷ್ಟ ೧೦ಮಂದಿಗೆ ಕ್ಯಾನ್ಸರ್, ಸ್ಟೊçÃಕ್, ಹೃದಯ ಕಾಯಿಲೆಗಳು ಹೆಚ್ಚುತ್ತಿದೆ ಎಂದು ಆತಂಕವ್ಯಕ್ತಪಡಿಸಿ, ಪರಿಸರ ಸಂರಕ್ಷಣೆಯಲ್ಲಿ ಸಮುದಾಯದ ಸಹಭಾಗಿತ್ವ ಇದ್ದರೆ ಮಾತ್ರ ಯಶಸ್ಸು ಕಾಣಲು ಸಾಧ್ಯವೆಂದರು.

ಗ್ರಾ.ಪಂ.ಅಧ್ಯಕ್ಷ ಶಿವಶಂಕರ್, ಪದವಿ ಕಾಲೇಜು ಪ್ರಾಚಾರ್ಯ ನಾಗರಾಜ್, ಪಿಡಿಓ ಮಹದೇವಸ್ವಾಮಿ ಮಾತನಾಡಿದರು. ವೇದಿಕೆಯಲ್ಲಿ ತಾ.ಪಂ.ಇಓ ಮನು ಬಿ.ಕೆ, ಆರ್.ಎಫ್.ಓ ರುದ್ರೇಶ್, ಗ್ರಾ.ಪಂ.ಉಪಾಧ್ಯಕ್ಷೆ ಮಂಚಮ್ಮ, ಸದಸ್ಯರಾದ ಯೋಗೇಶ್, ಮಹೇಶ್, ಎಸ್‌ಡಿಎಂಸಿ ಅಧ್ಯಕ್ಷ ದೀಪು, ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಭಾಗವಹಿಸಿದ್ದರು. ಪರಿಸರ ಸಂರಕ್ಷಿಸುವ ಕುರಿತು ಪ್ರತಿಜ್ಞಾವಿಧಿ ಭೋದಿಸಲಾಯಿತು.

ಟಾಪ್ ನ್ಯೂಸ್

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ

ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

1-wewqewq

Belagavi; ಶೆಟ್ಟರ್ ಅವರಿಗೆ ಆಶೀರ್ವಾದ ಮಾಡಿದ ವಿವಿಧ ಮಠಾಧೀಶರು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.