ಕುಸ್ತಿ ಪಟುಗಳಿಗೆ ಈಗಲಾದರೂ ನ್ಯಾಯ ಸಿಗಲಿ


Team Udayavani, Jun 6, 2023, 6:10 AM IST

inಕುಸ್ತಿ ಪಟುಗಳಿಗೆ ಈಗಲಾದರೂ ನ್ಯಾಯ ಸಿಗಲಿ

ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್‌ಭೂಷಣ್‌ ಸಿಂಗ್‌ ಅವರ ಬಂಧನ ಮತ್ತು ರಾಜೀನಾಮೆಗೆ ಆಗ್ರಹಿಸಿ ಕಳೆದ ಒಂದೂವರೆ ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿ ಪಟುಗಳು, ಸೋಮವಾರದಿಂದ ರೈಲ್ವೇಯಲ್ಲಿನ ಕೆಲಸಕ್ಕೆ ಹಾಜರಾಗಿದ್ದಾರೆ. ಇಡೀ ವಿವಾದ ಆರಂಭವಾದ ಬಳಿಕ ಶನಿವಾರ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಕುಸ್ತಿ ಪಟುಗಳ ಜತೆ ಸುದೀರ್ಘ‌ ಚರ್ಚೆ ನಡೆಸಿ, ನ್ಯಾಯ ಸಿಗುವ ಭರವಸೆ ಪಡೆದ ಮೇಲೆ ಕೆಲಸಕ್ಕೆ ಹಾಜರಾಗಿದ್ದಾರೆ. ಆರಂಭದಿಂದಲೂ ಬ್ರಿಜ್‌ಭೂಷಣ್‌ ವಿರುದ್ಧ ಕ್ರಮಕ್ಕೆ ಪಟ್ಟು ಹಿಡಿದು ಪ್ರತಿಭಟನೆ ನಡೆಸಿದ್ದ ಕುಸ್ತಿ ಪಟುಗಳು ಈಗ ಕೆಲಸಕ್ಕೆ ತೆರಳಿರುವುದು ಸದ್ಯ ಉತ್ತಮ ನಡೆಯಂತೆ ಕಂಡು ಬರುತ್ತಿದೆ.

ಆದರೆ ಕೆಲಸಕ್ಕೆ ತೆರಳಿದ ಮಾತ್ರಕ್ಕೆ ನಾವು ಪ್ರತಿಭಟನೆ ಬಿಟ್ಟಿದ್ದೇವೆ ಎಂದರ್ಥವಲ್ಲ ಎಂದು ಹೇಳುವ ಮೂಲಕ ವಿನೇಶ್‌ ಪೊಗಟ್‌, ಸಾಕ್ಷಿ ಮಲಿಕ್‌ ಮತ್ತು ಭಜರಂಗ್‌ ಪೂನಿಯ ತಮ್ಮ ಪಟ್ಟು ಸಡಿಲಿಸಿಲ್ಲ ಎಂಬ ವಿಚಾರವೂ ಮನದಟ್ಟಾಗಿದೆ. ಇಲ್ಲಿ ಗೃಹ ಸಚಿವರಿಂದಲೇ ಭರವಸೆ ಸಿಕ್ಕಿರುವುದರಿಂದ ಕೆಲಸಕ್ಕೆ ಆಗಮಿಸಿದ್ದಾರೆ ಅಷ್ಟೇ. ಆದರೆ ಗೃಹ ಸಚಿವರ ಭರವಸೆಯೂ ಸುಳ್ಳಾದರೆ, ಒಂದೊಮ್ಮೆ ಬ್ರಿಜ್‌ ಭೂಷಣ್‌ ಸಿಂಗ್‌ ವಿರುದ್ಧ ಕ್ರಮ ತೆಗೆದುಕೊಳ್ಳದೇ ಇದ್ದರೆ ಮತ್ತೆ ಕುಸ್ತಿ ಪಟುಗಳು ಪ್ರತಿಭಟನೆಗೆ ಇಳಿಯುವುದು ಖಂಡಿತ ಎಂಬುದು ಸ್ಪಷ್ಟ.

ಸಾಮಾನ್ಯವಾಗಿ ಲೈಂಗಿಕ ಕಿರುಕುಳದಂಥ ಕೇಸುಗಳಲ್ಲಿ ಪೊಲೀಸರ ಕ್ರಮ ತ್ವರಿತವಾಗಿರಬೇಕು ಎಂಬುದನ್ನು ಹಲವಾರು ಬಾರಿ ಸುಪ್ರೀಂ ಕೋರ್ಟ್‌ ಹೇಳಿದೆ. ಆದರೆ ಇಲ್ಲಿ ಈ ನಿಯಮ ಪಾಲನೆಯಾಗಿಲ್ಲ ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ದಿಲ್ಲಿ ಪೊಲೀಸರು ಇಷ್ಟು ದಿನವಾದರೂ ಏಕೆ ಬ್ರಿಜ್‌ಭೂಷಣ್‌ ವಿಚಾರಣೆ ನಡೆಸಿಲ್ಲ, ತನಿಖೆಗೆ ಒಳಪಡಿಸಿಲ್ಲ ಎಂಬ ಸಂಗತಿ ಇನ್ನೂ ಪ್ರಶ್ನಾರ್ಹವಾಗಿಯೇ ಉಳಿದಿದೆ. ಅಲ್ಲದೆ ಬ್ರಿಜ್‌ಭೂಷಣ್‌ ವಿರುದ್ಧ ಎಫ್ಐಆರ್‌ ದಾಖಲಾಗಿದ್ದು ಕುಸ್ತಿ ಪಟುಗಳ ಪ್ರತಿಭಟನೆ ಆರಂಭವಾದ ಅನಂತರ. ಇದಾದ ಮೇಲೆ ಕೇಸಿನ ಪ್ರಗತಿ ಎಲ್ಲಿದೆ ಎಂಬುದು ಕುಸ್ತಿ ಪಟುಗಳಿಗೆ ಗೊತ್ತಾಗಬೇಕಾಗಿದೆ. ಒಂದೊಮ್ಮೆ ಬ್ರಿಜ್‌ಭೂಷಣ್‌ ವಿಚಾರಣೆ ನಡೆಸಿದ್ದರೆ, ತನಿಖೆಯ ಪ್ರಗತಿ ಬಗ್ಗೆಯಾದರೂ ಗೊತ್ತಾಗುತ್ತಿತ್ತು. ಹೀಗಾಗಿಯೇ ಅಮಿತ್‌ ಶಾ ಭೇಟಿ ವೇಳೆ ಕುಸ್ತಿ ಪಟುಗಳು ತ್ವರಿತವಾಗಿ ಚಾರ್ಜ್‌ಶೀಟ್‌ ಸಲ್ಲಿಸಬೇಕು ಎಂಬ ಬೇಡಿಕೆ ಇಟ್ಟಿದ್ದಾರೆ. ಹೀಗಾಗಿ ದಿಲ್ಲಿ ಪೊಲೀಸರು ತ್ವರಿತವಾಗಿ ವಿಚಾರಣೆ ನಡೆಸಿ, ಆರೋಪಪಟ್ಟಿ ನಿಗದಿ ಪಡಿಸಬೇಕು.

ದೇಶದ ಕಾನೂನುಗಳು ಒಬ್ಬರ ಅಥವಾ ಆಳುವವರ ಪರ ಇದೆ ಎಂಬ ಭಾವನೆ ಜನರಲ್ಲಿ ಬರದಂತೆ ಮಾಡುವುದು ಸರಕಾರಗಳ ಆದ್ಯ ಕರ್ತವ್ಯ. ಬ್ರಿಜ್‌ಭೂಷಣ್‌ ವಿರುದ್ಧ ಕ್ರಮ ತೆಗೆದುಕೊಳ್ಳುವುದು ವಿಳಂಬವಾದಷ್ಟು ಕುಸ್ತಿ ಪಟುಗಳಲ್ಲಿ ಅಥವಾ ಜನರಲ್ಲಿ ಇಂಥ ಭಾವನೆ ಹೆಚ್ಚಾಗುವುದು ಸಾಮಾನ್ಯ. ಈಗಾಗಲೇ ಮೇ 28ರಂದು ಕುಸ್ತಿ ಪಟುಗಳ ಪ್ರತಿಭಟನೆ ವೇಳೆ ದಿಲ್ಲಿ ಪೊಲೀಸರು ನಡೆದುಕೊಂಡ ಕ್ರಮ ಜಗತ್ತಿನಾದ್ಯಂತ ಆಕ್ರೋಶಕ್ಕೂ ಕಾರಣವಾಗಿದೆ. ಹೀಗಾಗಿ ಜನರ ನಂಬಿಕೆ ಮತ್ತು ಕುಸ್ತಿ ಪಟುಗಳ ನಂಬಿಕೆ ಉಳಿಸಿಕೊಳ್ಳುವುದು ದಿಲ್ಲಿ ಪೊಲೀಸರ ಸದ್ಯದ ಆದ್ಯತೆಯಾಗಿದ್ದು, ಅವರಿಗೆ ನ್ಯಾಯ ಕೊಡಬೇಕಾಗಿದೆ. ತ್ವರಿತಗತಿಯಲ್ಲಿ ಆರೋಪ ಪಟ್ಟಿ ದಾಖಲಿಸಿ ಬ್ರಿಜ್‌ಭೂಷಣ್‌ ಅವರಿಗೆ ಶಿಕ್ಷೆಯಾಗುವಂತೆ ಮಾಡಬೇಕಾಗಿದೆ. ಆಗಷ್ಟೇ ಕೇಂದ್ರ ಸರಕಾರವೂ ತನ್ನ ಮಾತು ಉಳಿಸಿಕೊಂಡಂತಾಗುತ್ತದೆ.

ಟಾಪ್ ನ್ಯೂಸ್

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.