ಆಕ್ಸಿಜನ್‌ ದುರಂತ: 50 ಲಕ್ಷ ರೂ. ಪರಿಹಾರಕ್ಕೆ ಒತ್ತಾಯ


Team Udayavani, Jun 6, 2023, 2:38 PM IST

ಆಕ್ಸಿಜನ್‌ ದುರಂತ: 50 ಲಕ್ಷ ರೂ. ಪರಿಹಾರಕ್ಕೆ ಒತ್ತಾಯ

ಚಾಮರಾಜನಗರ: ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ ನಡೆದ ಆಕ್ಸಿಜನ್‌ ದುರ್ಘ‌ಟನೆಯಲ್ಲಿ ಸಾವಿಗೀಡಾ ದವರ ಕುಟುಂಬಸ್ಥರಿಗೆ 50 ಲಕ್ಷ ಪರಿಹಾರ, ಸಂತ್ರಸ್ತ ಕುಟುಂಬಸ್ಥರಲ್ಲಿ ಒಬ್ಬರಿಗೆ ಸರ್ಕಾರಿ ಉದ್ಯೋಗ ಹಾಗೂ ಈ ದುರ್ಘ‌ಟನೆಗೆ ಕಾರಣಕರ್ತರಾದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ನಗರದಲ್ಲಿ ನಡೆದ ಸಂತ್ರಸ್ತ ಕುಟುಂಬಗಳ ಸಮಾಲೋಚನಾ ಸಭೆಯಲ್ಲಿ ಎಸ್‌ ಡಿಪಿಐ ಒತ್ತಾಯಿಸಿತು.

ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್‌ ಮಜಿದ್‌ ಅವರ ಅಧ್ಯಕ್ಷತೆಯಲ್ಲಿ ಸಂತ್ರಸ್ತ ಕುಟುಂಬಸ್ಥರೊಂದಿಗೆ ಸೋಮವಾರ ನಗರದ ಪ್ರವಾಸಿ ಮಂದಿರದಲ್ಲಿ ಸಮಾಲೋಚನಾ ಸಭೆ ಮಾಡಲಾಯಿತು.

ಚಾಮರಾಜನಗರ ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ 2021ರ ಮೇ 2 ರಂದು ಮಧ್ಯರಾತ್ರಿ ಆಕ್ಸಿಜನ್‌ ಪೂರೈಕೆಯಾಗದೆ 37 ಮಂದಿ ಮೃತರಾದರು. ಈ ಘಟನೆ ನಡೆದು ಎರಡು ವರ್ಷಗಳಾಗಿವೆ. ಘಟನೆಗೆ ಸಂಬಂಧಿಸಿದಂತೆ, ಈಗಾಗಲೇ ನ್ಯಾಯ ಮೂರ್ತಿ ವೇಣುಗೋಪಾಲಗೌಡ ಅವರು, ತಮ್ಮ ಪ್ರಾಥಮಿಕ ತನಿಖಾ ವರದಿಯಲ್ಲಿ ಘಟನೆಗೆ ಆಕ್ಸಿಜನ್‌ ಕೊರತೆಯೇ ಪ್ರಮುಖ ಕಾರಣವಾಗಿದ್ದು, ಅಂದಿನ ಜಿಲ್ಲಾಧಿಕಾರಿಯವರ ಕಾರ್ಯವೈಖರಿ ಕುರಿತು ಸಂದರ್ಭಕ್ಕೆ ತಕ್ಕಂತೆ ನಾಯಕತ್ವ ಮತ್ತು ಕ್ರಿಯಾಶೀಲತೆ ತೋರಿಸುವಲ್ಲಿ ಜಿಲ್ಲಾಧಿಕಾರಿಗಳು ವಿಫ‌ಲರಾಗಿದ್ದಾರೆ ಎಂದು ತಮ್ಮ ವರದಿಯಲ್ಲಿ ಉಲ್ಲೇಖೀಸಿದ್ದರು. ಇಷ್ಟಾದರೂ ಸಹ ಜಿಲ್ಲಾಧಿಕಾರಿ ಸೇರಿದಂತೆ ಯಾವ ಒಬ್ಬ ಅಧಿಕಾರಿಯ ವಿರುದ್ಧವೂ ಸಹ ಸರ್ಕಾರ ಇಲ್ಲಿಯವರೆಗೂ ಸೂಕ್ತ ಕ್ರಮ ತೆಗೆದುಕೊಂಡಿಲ್ಲ. ಇದು ದುರದೃಷ್ಟಕರ ಎಂದು ರಾಜ್ಯಾಧ್ಯಕ್ಷ ಅಬ್ದುಲ್‌ ಮಜೀದ್‌ ಹೇಳಿದರು.

ಪ್ರಸ್ತುತ ಸಿದ್ದರಾಮಯ್ಯರವರ ನೇತೃತ್ವದಲ್ಲಿರುವ ಸರ್ಕಾರ ಆಕ್ಸಿಜನ್‌ ದುರ್ಘ‌ಟನೆ ಸಂಬಂಧ ಮರು ತನಿಖೆ ಮಾಡುವ ಕುರಿತು ಪ್ರಸ್ತಾಪ ಮಾಡಿರುವುದು ಸ್ವಾಗತಾರ್ಹ. ತನಿಖೆ ಪ್ರಾರಂಭ ಮಾಡುವ ಮುಂಚೆ ದುರ್ಘ‌ಟನೆ ಸಂದರ್ಭದಲ್ಲಿದ್ದ ಅಧಿಕಾರಿಗಳು ಹಾಗೂ ವೈದ್ಯಾಧಿಕಾರಿಗಳನ್ನು ತಕ್ಷಣ ಅಮಾನತ್ತು ಮಾಡಿ ತನಿಖೆ ಪ್ರಾರಂಭಿಸಬೇಕು, ಬಹಳ ಮುಖ್ಯ ವಾಗಿ ನ್ಯಾಯಮೂರ್ತಿ ಎ.ಎನ್.ವೇಣು ಗೋಪಾಲ್‌ ಗೌಡರವರ ಪ್ರಾಥಮಿಕ ವರದಿಯಲ್ಲಿ ಪ್ರಸ್ತಾಪಿಸಿರುವಂತೆ ಸಾವಿಗೀಡಾದ 37 ಮಂದಿಯ ಕುಟುಂಬಸ್ಥರಿಗೆ ತಲಾ 50 ಲಕ್ಷ ಪರಿಹಾರ ಹಾಗೂ ಸಂತ್ರಸ್ತ ಕುಟುಂಬಸ್ಥರಲ್ಲಿ ಒಬ್ಬರಿಗೆ ಸರ್ಕಾರಿ ಉದ್ಯೋಗ ನೀಡಬೇಕು, ಏಕೆಂದರೆ ಈಗಾಗಲೇ ಈ ದುರ್ಘ‌ಟನೆಯಾಗಿ 2 ವರ್ಷಗಳು ಕಳೆದು ಹೋಗಿದೆ. ಇನ್ನು ಮತ್ತೂಮ್ಮೆ ಹೊಸ ತನಿಖೆ ಮಾಡಿ ಸಂತ್ರಸ್ತರಿಗೆ ಪರಿಹಾರ ನೀಡುವುದಾದರೆ ಸುದೀರ್ಘ‌ ವಾದ ಕಾಲಹರಣವಾಗುತ್ತದೆ. ಆದುದರಿಂದ ಸಂತ್ರಸ್ತರಿಗೆ ನೆರವು ನೀಡುವ ನಿಟ್ಟಿನಲ್ಲಿ ತಕ್ಷಣ ಪರಿಹಾರ ಘೋಷಿಸಬೇಕೆಂದು ಅಬ್ದುಲ್‌ ಮಜೀದ್‌ ಆಗ್ರಹಿಸಿದರು.

ಜಿಲ್ಲಾಧ್ಯಕ್ಷ ಅಬ್ರಾರ್‌ ಅಹ್ಮದ್‌, ರಾಜ್ಯ ಸಮಿತಿ ಸದಸ್ಯ ಅಮ್ಜದ್‌ ಖಾನ್‌, ಜಿಲ್ಲಾ ಉಪಾಧ್ಯಕ್ಷ ಸಯ್ಯದ್‌ ಆರೀಫ್, ಜಿಲ್ಲಾ ಉಪಾಧ್ಯಕ್ಷ ಎಂ. ಮಹೇಶ್‌, ಖಜಾಂಚಿ ನಯಾಜ್‌ ಉಲ್ಲಾ, ನಗರ ಸಭಾ ಸದಸ್ಯರಾದ ಕಲೀಲ್‌ ಉಲ್ಲಾ, ಮೊಹ ಮ್ಮದ್‌ ಅಮೀಕ್‌, ಮುಖಂಡರಾದ ಇಸ್ರಾರ್‌ ಪಾಷಾ, ಸಂತ್ರಸ್ತ ಕುಟುಂಬದ ಸದಸ್ಯರು ಇದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.