ಮನೆ ಯಜಮಾನಿ ಯಾರು ಎಂದು ಮನೆಯವರೇ ತೀರ್ಮಾನ ಮಾಡಬೇಕು: ಡಿ.ಕೆ.ಶಿವಕುಮಾರ್
Team Udayavani, Jun 7, 2023, 1:24 PM IST
ಬೆಂಗಳೂರು: ಸರ್ಕಾರದಿಂದ ಯಾರಿಗೆ ಒಂದು ರೂಪಾಯಿ ಹಣ ಕೊಟ್ಟರೂ ಅದಕ್ಕೆ ಲೆಕ್ಕ, ಹೊಣೆಗಾರಿಕೆ ಇರಬೇಕು. ಫಲಾನುಭವಿ ಆಗುವವರು ಮತದಾರರ ಗುರುತಿನ ಚೀಟಿ, ಬ್ಯಾಂಕ್ ಖಾತೆ, ಆಧಾರ್ ಕಾರ್ಡ್ ಹೊಂದಿರಬೇಕು. ಬೇರೆಯವರ ಬ್ಯಾಂಕ್ ಖಾತೆಗೆ ಹಣ ನೀಡಲಾಗುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಸದಾಶಿವನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮನೆ ಯಜಮಾನಿ ಯಾರು ಎಂದು ಮನೆಯವರೇ ತೀರ್ಮಾನ ಮಾಡಬೇಕು. ಅವರ ಮನೆ ವಿಚಾರದಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ. ಮತದಾರರ ಗುರುತಿನಿ ಚೀಟಿ, ಎಪಿಎಲ್, ಬಿಪಿಎಲ್ ಕಾರ್ಡ್ ಗಳಲ್ಲಿ ಯಾವ ಮನೆಯಲ್ಲಿ ಯಾರೆಲ್ಲಾ ಇದ್ದಾರೆ ಎಂದು ಮಾಹಿತಿ ಇದೆ ಎಂದರು.
ಬಿಜೆಪಿ, ಜನತಾ ದಳದವರಿಗೆ ಈ ಯೋಜನೆ ಜಾರಿಯನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ. ಅವರ ಅಸೂಯೆಗೆ ಮದ್ದಿಲ್ಲ. ನಮ್ಮ ಯೋಜನೆ ಬಗ್ಗೆ ಮಾತನಾಡುವವರು ಮೊದಲು ಬಿಜೆಪಿಯವರ ಉದ್ಯೋಗ ಭರವಸೆ ಬಗ್ಗೆ ಮಾತಾಡಲಿ. ಎಲ್ಲರ ಖಾತೆಗೆ 15 ಲಕ್ಷ ಹಾಕಿಸಲಿ. ಆ ಬಗ್ಗೆ ಯಾಕೆ ಯಾರೂ ಕೇಳುತ್ತಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವವರನ್ನು ಬೇಡ ಎನ್ನಲು ಸಾಧ್ಯವೇ? ಎಂದು ಹೇಳಿದರು.
ತೆರಿಗೆ ಪಾವತಿದಾರರು ನಿಮಗೆ ಮತ ಹಾಕಿಲ್ಲವೇ ಎಂದು ಕೇಳಿದಾಗ, ‘ನಾವು ಬಡವರಿಗೆ ನೆರವು ನೀಡಲು ನಿರ್ಧರಿಸಿದ್ದೇವೆ. ತೆರಿಗೆ, ಜಿಎಸ್ಟಿ ಪಾವತಿದಾರರು ಈ ಯೋಜನೆ ಬೇಕು ಎಂದು ಕೇಳುತ್ತಿಲ್ಲ. ಅನೇಕರು ಈ ಯೋಜನೆ ಬೇಡ ಎಂದು ನಮಗೆ ಪತ್ರ ಬರೆದಿದ್ದಾರೆ. ವಿದ್ಯುತ್ ಗ್ಯಾರಂಟಿ ವಿಚಾರದಲ್ಲಿ ಬಾಡಿಗೆ ಮನೆಯವರ ಬಗ್ಗೆ ಅಧಿಕಾರಿಗಳು ಒಂದು ಆಯಾಮ ನೀಡಿದ್ದರು. ಆದರೆ ನಾವು ಆ ಬಗ್ಗೆ ಸ್ಪಷ್ಟನೆ ನೀಡಿದ್ದೇವೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್ಗೆ ಕಳುಹಿಸಿ: B.Y. ರಾಘವೇಂದ್ರ
Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ
Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು
ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು
Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್ ಸೂಚನೆ
MUST WATCH
ಹೊಸ ಸೇರ್ಪಡೆ
Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು
Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ
Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ
Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್ ಮನೆಗೆ ಕನ್ನ
Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ