ಯಳಂದೂರು: ಏಳು ಪಶು ಚಿಕಿತ್ಸಾ ಕೇಂದ್ರಗಳಿಗೆ ಒಬ್ಬನೇ ವೈದ್ಯ


Team Udayavani, Jun 7, 2023, 3:39 PM IST

ಯಳಂದೂರು: ಏಳು ಪಶು ಚಿಕಿತ್ಸಾ ಕೇಂದ್ರಗಳಿಗೆ ಒಬ್ಬನೇ ವೈದ್ಯ

ಯಳಂದೂರು: ತಾಲೂಕಿನಲ್ಲಿ ಪಶು ಚಿಕಿತ್ಸಾ ಕೇಂದ್ರಗಳಿದ್ದರೂ ವೈದ್ಯರು, ಸಿಬ್ಬಂದಿ ಕೊರತೆಯಿಂದ ಖಾಲಿ ಕಾಣುತ್ತಿವೆ. ಪಶುಗಳಿಗೆ ಸಮರ್ಪಕ ಚಿಕಿತ್ಸೆ ಇಲ್ಲದೇ ರೈತರು ಪರದಾಡುತ್ತಿದ್ದಾರೆ. ಒಬ್ಬ ವೈದ್ಯ 7 ಕಡೆ ಚಿಕಿತ್ಸಾ ಕೇಂದ್ರಗಳಲ್ಲಿ ಕೆಲಸ ಮಾಡಬೇಕಾದ ಪರಿಸ್ಥಿತಿ ಇದೆ. ಈ ಬಗ್ಗೆ ಇಲಾಖೆ ಮೇಲಧಿಕಾರಿಗಳು ಗಮನ ಹರಿಸುತ್ತಿಲ್ಲ.

ತಾಲೂಕಿನಲ್ಲಿ ದುಗ್ಗಹಟ್ಟಿ, ಹೊನ್ನೂರು, ಕೆಸ್ತೂರು, ಅಗರ-ಮಾಂಬಳ್ಳಿ, ಯರಿಯೂರು, ಮದ್ದೂರು, ಅಂಬಳೆ, ಕಂದಹಳ್ಳಿ, ಉಪ್ಪಿನಮೋಳೆ, ಗೌಡಹಳ್ಳಿ, ಕೊಮಾರನಪುರ ಸೇರಿ ತಾಲೂಕಿನಲ್ಲಿ 10,854 ರಾಸು, 15,985 ಕುರಿ, ಮೇಕೆ, ಹಂದಿ ಸೇರಿ ಇತರೆ ಜಾನುವಾರುಗಳ ಸಂಖ್ಯೆ ಇದೆ.

ವೈದ್ಯರು, ಸಿಬ್ಬಂದಿ ಕೊರತೆ ತೀವ್ರ: ಜಾನು ವಾರುಗಳಿಗೆ ಆರೋಗ್ಯ ಸೇವೆ ನೀಡುವುದು ಸರ್ಕಾರದ ಕರ್ತವ್ಯವಾಗಿದೆ. ಮಳೆಗಾಲದಲ್ಲಿ ಜಾನುವಾರುಗಳಿಗೆ ಕಾಲುಬಾಯಿ ರೋಗ, ಚರ್ಮಗಂಟು ಸೇರಿ ಇತರೆ ಕಾಯಿಲೆಗಳು ಬಾಧಿಸುತ್ತವೆ. ಇದನ್ನು ತಡೆಯಲು ತಾಲೂಕಿನ ಪಶು ಸಂಗೋಪನಾ ಇಲಾಖೆಯ ಅಡಿಯಲ್ಲಿ ಪಶು ಚಿಕಿತ್ಸಾ ಕೇಂದ್ರಗಳಿದ್ದರೂ ಸಿಬ್ಬಂದಿ ಕೊರತೆ ತೀವ್ರವಾಗಿ ಕಾಡುತ್ತಿದೆ. ಇದರಿಂದ ತಾಲೂಕಿನಲ್ಲಿ ಅಗರ, ಕೆಸ್ತೂರು, ಹೊನ್ನೂರು, ಗುಂಬಳ್ಳಿ, ಬಿಳಿಗಿರಿರಂಗನಬೆಟ್ಟ ಸೇರಿ 5 ಪಶು ಚಿಕಿತ್ಸಾ ಕೇಂದ್ರಗಳಲ್ಲಿ ವೈದ್ಯರು, ಸಿಬ್ಬಂದಿ ಕೊರತೆ ತೀವ್ರವಾಗಿ ಕಾಡುತ್ತಿದೆ.

ಸೇವೆಗಳಿಗೆ ತೊಡುಕು: ತಾಲೂಕಿನ ಪಶು ಇಲಾಖೆಯಲ್ಲಿ ವೈದ್ಯರು, ಸಿಬ್ಬಂದಿ ಕೊರತೆಯಿಂದ ರೈತರಿಗೆ ಅಗತ್ಯ ಸೇವೆ ಒದಗಿಸಲು ಸಮಸ್ಯೆ ಆಗಿದೆ. ಕರ್ತವ್ಯದ ಲ್ಲಿರುವ ಸಿಬ್ಬಂದಿ ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದರೂ, ನಿರೀಕ್ಷಿತ ಗುರಿ ಸಾಧಿಸಲು ಸಾಧ್ಯವಾಗುತ್ತಿಲ್ಲ. ಇಲಾಖೆಯಲ್ಲಿ ಅಗತ್ಯ ಮೂಲ ಸೌಕರ್ಯ ಅಭಿವೃದ್ಧಿ ಪಡಿಸುವುದು, ದೇಶಿ ತಳಿಗಳ ಸಂರಕ್ಷಣೆ ಮತ್ತು ಅಭಿವೃದ್ಧಿ, ಪಶು ಆರೋಗ್ಯ ಸೇವೆ ಕಲ್ಪಿಸುವುದು, ಬ್ಯಾಕ್ಟೀರಿಯಾ ಹಾಗೂ ವೈರಸ್‌ ರೋಗಗಳ ಪತ್ತೆ ಹಚ್ಚುವಿಕೆ, ರೋಗಗಳಿಂದ ನರಳುತ್ತಿರುವ ಪ್ರಾಣಿಗಳಿಗೆ ಚಿಕಿತ್ಸೆ ಹಾಗೂ ಪ್ರಾಣಿಗಳಿಗೆ ಉಚಿತ ಲಸಿಕಾ ಕಾರ್ಯಕ್ರಮ, ಸರ್ಕಾರದ ಯೋಜನೆಗಳನ್ನು ಸೇವೆಗಳನ್ನು ಒದಗಿಸಲು ಇಲಾಖೆಗೆ ಸಿಬ್ಬಂದಿ ಕೊರತೆ ತೊಡಕಾಗುತ್ತಿದೆ.

ಖಾಲಿ ಹುದ್ದೆಗಳು: ತಾಲೂಕಿನಲ್ಲಿ 7 ಪಶುವೈದ್ಯಾಧಿಕಾರಿಗೆ ಒಬ್ಬ ವೈದ್ಯರು ಮಾತ್ರ ಇದ್ದಾರೆ. ಹಿರಿಯ ಪಶು ವೈದ್ಯಕೀಯ ಪರೀಕ್ಷಕರು ಸೇರಿ 3 ಹುದ್ದೆ ಇದ್ದು ಎಲ್ಲವೂ ಖಾಲಿಯಾಗಿದೆ. ನಾಲ್ವರು ಕಿರಿಯ ಪಶು ಪರೀಕ್ಷಕರು ಬೇಕಿದೆ. ಒಬ್ಬರು ಮಾತ್ರ ಇದ್ದು ಉಳಿದ ಮೂರು ಹುದ್ದೆ ಖಾಲಿಯಾಗಿವೆ. ಇದರೊಂದಿಗೆ ವಾಹನ ಚಾಲಕರ ಒಂದು ಹುದ್ದೆಯೂ ಖಾಲಿ ಇದೆ. 11 ಮಂದಿ ಡಿ.ದರ್ಜೆ ನೌಕರರ ಹುದ್ದೆ ಇದೆ. ಇದರಲ್ಲಿ 7 ಹುದ್ದೆ ಖಾಲಿಯಾಗಿವೆ. ಒಟ್ಟು 21 ಖಾಲಿ ಹುದ್ದೆ ಇದ್ದು, ಹಾಲಿ ಕೆಲಸ ನಿರ್ವಹಿಸುವ ಒಟ್ಟು 12 ಸಿಬ್ಬಂದಿ ಕೆಲಸ ನಿರ್ವಹಿಸುವ ಅನಿವಾರ್ಯತೆ ಇದೆ.

ತಾಲೂಕಿನಲ್ಲಿ ವೈದ್ಯರ ಕೊರತೆಯಿಂದ ಜಾನುವಾರುಗಳಿಗೆ ಸರಿಯಾಗಿ ಚಿಕಿತ್ಸೆ ದೊರೆಯುತ್ತಿಲ್ಲ. ಹವಾಮಾನ ವೈಪರಿತ್ಯದಿಂದ ಜಾನುವಾರುಗಳಿಗೆ ರೋಗ ಕಾಣಿಸಿಕೊಂಡಾಗ ಸೂಕ್ತ ಚಿಕಿತ್ಸೆಗಾಗಿ ಪರದಾಡುವ ಸ್ಥಿತಿ ಇದೆ. ಈ ಬಗ್ಗೆ ಇಲಾಖೆ ಮೇಲಧಿಕಾರಿಗಳು ಗಮನ ಹರಿಸಿ, ಕೂಡಲೇ ವೈದ್ಯರ ನೇಮಕ ಮಾಡಬೇಕು. ●ಮನು, ರೈತ, ಯಳಂದೂರು.

ಯಳಂದೂರು ತಾಲೂಕಿನ ಪಶು ಇಲಾಖೆಯಲ್ಲಿ ಖಾಲಿ ಇರುವ ಪ್ರಮುಖ ಹುದ್ದೆಗಳ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ವರದಿ ಸಲ್ಲಿಸಲಾಗಿದೆ. ಸಿಬ್ಬಂದಿ ಕೊರತೆ ನಡುವೆಯೂ ಯಾರಿಗೂ ಸಮಸ್ಯೆ ಆಗದಂತೆ ಚಿಕಿತ್ಸೆ ನೀಡಲಾಗುತ್ತಿದೆ. ●ಡಾ.ಶಿವರಾಜು, ಪ್ರಭಾರ ಸಹಾಯಕ ನಿರ್ದೇಶಕ, ಪಶು ಇಲಾಖೆ, ಯಳಂದೂರು.

-ಫೈರೋಜ್‌ಖಾನ್‌

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.