Goa ದಲ್ಲಿ ಪೋರ್ಚುಗೀಸ್ ಕುರುಹುಗಳು ಇನ್ನೂ ಜೀವಂತ: ಸಿಎಂ ಸಾವಂತ್
ಛಾಪನ್ನು ಅಳಿಸಿ ಹೊಸ ಗೋವಾ ರಚಿಸಲು ಪ್ರಯತ್ನ
Team Udayavani, Jun 7, 2023, 6:05 PM IST
ಪಣಜಿ: ಗೋವಾ ವಿಮೋಚನೆಯ ನಂತರವೂ ಪೋರ್ಚುಗೀಸ್ ಕುರುಹುಗಳು ರಾಜ್ಯದಲ್ಲಿ ಇನ್ನೂ ಜೀವಂತವಾಗಿವೆ. 2047ರ ವೇಳೆಗೆ ಪೋರ್ಚುಗೀಸ್ ಛಾಪನ್ನು ಅಳಿಸಿ ‘ಹೊಸ ಗೋವಾ’ ರಚಿಸಲು ಸರ್ಕಾರ ಪ್ರಯತ್ನಿಸಲಿದೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.
ಬೇತುಲ್ ಕೋಟೆಯಲ್ಲಿ ನಡೆದ 350ನೇ ಶಿವರಾಜ್ಯಾಭಿಷೇಕ ಸಮಾರಂಭದಲ್ಲಿ ಅವರು ಮಾತನಾಡಿ”ಬೇತುಲ್ ಕೋಟೆಯು ಗೋವಾದ ಐತಿಹಾಸಿಕ ಹೆಗ್ಗಳಿಕೆಯಾಗಿದೆ. ಇದನ್ನು ಸಂರಕ್ಷಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ಕೋಟೆಯ ಪರಂಪರೆಯನ್ನು ಉಳಿಸಲು ಸರ್ಕಾರದ ಮಟ್ಟದಲ್ಲಿ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದರು.
ಗೋವಾದ ಮಡಗಾಂವ ಸಮೀಪ ಕೋಟೆಯ ಪಾರಂಪರಿಕತೆಯನ್ನು ಉಳಿಸುವ ಪ್ರಯತ್ನವನ್ನು ನಾವು ಮುಂದುವರಿಸುತ್ತಿದ್ದು, ಅಬಕಾರಿ ಇಲಾಖೆಯಿಂದ ಭೂಮಿಯನ್ನು ಪಡೆದು ಕೋಟೆಯ ಸೌಂದರ್ಯೀಕರಣ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.
ಪಟ್ಟಾಭಿಷೇಕ ಮಹೋತ್ಸವವನ್ನು ಒಂದು ದಿನಕ್ಕೆ ಸೀಮಿತಗೊಳಿಸದೆ ಪ್ರತಿದಿನ ಆಚರಿಸಬೇಕು ಎಂದು ಸಚಿವ ಕಲಾ ಮತ್ತು ಸಂಸ್ಕೃತಿ ಸಚಿವ ಗೋವಿಂದ ಗಾವಡೆ ಹೇಳಿದರು.
ಸಮಾಜ ಕಲ್ಯಾಣ ಸಚಿವ ಸುಭಾಷ್ ಫಲ್ದೇಸಾಯಿ, ಮಾತನಾಡಿ, ನಾವು ನಾಶವಾದ ಸಪ್ತಕೋಟೇಶ್ವರ ದೇವಸ್ಥಾನವನ್ನೂ ಪುನರ್ ನಿರ್ಮಿಸಿದ್ದೇವೆ. ಶಿವಾಜಿ ಮಹಾರಾಜರು 350 ವರ್ಷಗಳ ಹಿಂದೆ ಸ್ವರಾಜ್ಯ ಪರಿಕಲ್ಪನೆಯನ್ನು ಪರಿಚಯಿಸಿದರು ಮತ್ತು ಅದರಂತೆ ನಡೆದುಕೊಂಡರು. ಹಿಂದೂ ಸಂಸ್ಕೃತಿ ಯನ್ನು ಉಳಿಸುವಲ್ಲಿ ಶಿವಾಜಿ ಮಹಾರಾಜ್ ಮತ್ತು ಸಂಭಾಜಿ ಮಹಾರಾಜರ ಪಾಲು ಇದೆ. ಆದ್ದರಿಂದ ಪುರಾತತ್ವ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಜಂಟಿಯಾಗಿ ಶಿವಾಜಿ ಮಹಾರಾಜರ ಕೃತಿಗಳನ್ನು ಆಧರಿಸಿ ಮುಂದಿನ ಒಂದು ವರ್ಷದಲ್ಲಿ ವಿದ್ಯಾರ್ಥಿಗಳಿಗಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.
ಈ ಸಂದರ್ಭದಲ್ಲಿ ಶಾಸಕರಾದ ಎಲ್ಟನ್ ಡಿಕೋಸ್ತಾ, ಬಾಬು ಕವಳೇಕರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ
Arvind Kejriwal ವಿರುದ್ಧ ಎನ್ಐಎ ತನಿಖೆಗೆ ಶಿಫಾರಸು
NEET; ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ!: ಚುನಾವಣಾ ಅಸ್ತ್ರ
Uttarakhand; ಕಾಳ್ಗಿಚ್ಚು ತಡೆಗೆ ಮೋಡ ಬಿತ್ತನೆಗೆ ಮೊರೆ?: ಮೂವರ ಸೆರೆ
Tamilnadu ಗಿರಿಧಾಮ ಪ್ರವೇಶಕ್ಕೆ ಇಂದಿನಿಂದ ಇ-ಪಾಸ್ ಕಡ್ಡಾಯ
MUST WATCH
ಹೊಸ ಸೇರ್ಪಡೆ
Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ
Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…
Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ
ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ
LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ