ಇಂದು ನಾಡಿಗೆ ದೊಡ್ಡಣ್ಣರಾಗಿ ಮೆರೆದ ಕಿಂಞಣ್ಣ ರೈ ಜನ್ಮದಿನ

ಅವರ ಸಾಹಿತ್ಯಿಕ, ಹೋರಾಟದ ಬದುಕಿನ ಸಂಕ್ಷಿಪ್ತ ಚಿತ್ರಣ ಇಲ್ಲಿದೆ

Team Udayavani, Jun 8, 2023, 8:09 AM IST

KAYYARA KINNANNA RAI

ಇಂದು (ಜೂ. 8) , ಗಡಿನಾಡ ಕವಿ ಕಯ್ನಾರ ಕಿಂಞಣ್ಣ ರೈ ಅವರ ಜನ್ಮ ದಿನ. ಬಹುಭಾಷಾ ವಿದ್ವಾಂಸರಾಗಿದ್ದ ಕಯ್ನಾರರು ಕನ್ನಡ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲೂ ಕೈಯಾಡಿಸಿ ತಮ್ಮದೇ ಆದ ಛಾಪು ಮೂಡಿಸಿದವರು. ಸ್ವಾತಂತ್ರ್ಯ ಹೋರಾಟ, ಕರ್ನಾಟಕ ಏಕೀಕರಣ ಹೋರಾಟಗಳಲ್ಲಿ ಮುಂಚೂಣಿಯಲ್ಲಿ ತೊಡಗಿಸಿಕೊಂಡವರು. ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಅವರ ಗರಡಿಯಲ್ಲಿಯೇ ಪಳಗಿ ಅವರಿಗೆ ಸರಿಸಮಾನರಾಗಿ ಬೆಳೆದು ನಿಂತವರು. 101 ವರ್ಷಗಳ ಕಾಲ ಸಾರ್ಥಕ ಬದುಕು ಬಾಳಿದ ಮೇರು ಕವಿ ಕಯ್ನಾರ ಕಿಂಞಣ್ಣ ರೈ ಅವರ ಸಾಹಿತ್ಯಿಕ, ಹೋರಾಟದ ಬದುಕಿನ ಸಂಕ್ಷಿಪ್ತ ಚಿತ್ರಣ ಇಲ್ಲಿದೆ.

“ದುಡಿತವೇ ನನ್ನ ದೇವರು, ಲೋಕ ದೇವಕುಲ
ಬೆವರೆ ಹೂ, ಹಣ್ಣು, ಕಾಯ್‌, ಕಣ್ಣೀರೇ ತೀರ್ಥಂ
ಎನ್ನೊಂದಿಗರ ಬಾಳ ಸಾವುನೋವಿನ ಗೋಳ
ಉಂಡಿಹೆನು ಸಮಪಾಲ – ನನಗದೆ ಪ್ರಸಾದಂ”

ಇದು ನಾಡೋಜ ಡಾ| ಕಯ್ನಾರ ಕಿಂಞಣ್ಣ ರೈ ಅವರ ಕವನದ ಒಂದೆರಡು ಸಾಲು.

ಇಳಿವಯಸ್ಸಿನಲ್ಲೂ ಕಾಸರಗೋಡಿನ ಬಗ್ಗೆ ಗಟ್ಟಿ ಧ್ವನಿ ಎಬ್ಬಿಸಿ ಈ ಪ್ರದೇಶವನ್ನು ಕರ್ನಾಟಕಕ್ಕೆ ಸೇರಿಸಬೇಕು ಎಂದು ಆಗ್ರಹಿಸುತ್ತಿದ್ದ ಅವರು, ದೇಹ ಸ್ಪಂದಿಸದಿದ್ದರೂ ವೇದಿಕೆಯಲ್ಲಿ ಕುಳಿತು ಮಾತಾಡಿದವರಲ್ಲ. ಒಂದು ವೇದಿಕೆಯಲ್ಲಿ ಅವರೇ ಇದಕ್ಕೆ ಕಾರಣವನ್ನು ಹೇಳುತ್ತಾರೆ – “ನಾನು ನಿಂತು ಪಾಠ ಮಾಡಿದ್ದಕ್ಕೆ ನನಗೆ ರಾಷ್ಟ್ರಪ್ರಶಸ್ತಿ ಸಿಕ್ಕಿದೆ. ಆದ್ದರಿಂದ ನಾನು ಯಾವತ್ತೂ ಕುಳಿತುಕೊಂಡು ವೇದಿಕೆಯಲ್ಲಿ ಮಾತನಾಡಲಾರೆ’ ಎಂದು.

ಶಿಕ್ಷಕನಾಗಿ, ಸ್ವಾತಂತ್ರ್ಯ ಹೋರಾಟಗಾರರಾಗಿ, ಕೃಷಿಕನಾಗಿ, ಸಾಹಿತಿಯಾಗಿ ನಮ್ಮ ನಡುವೆ ಸುದೀರ್ಘ‌ ಬಾಳ್ವೆ ನಡೆಸಿದ ಡಾ| ಕಯ್ನಾರ ಕಿಂಞಣ್ಣ ರೈ ಅವರ ಅಪ್ಪಟ ಗಾಂಧಿವಾದಿಯಾಗಿದ್ದರು. ಮಹಾತ್ಮಾ ಗಾಂಧೀಜಿಯವರ ಸೂಚನೆಗೆ ಮನ್ನಣೆ ಕೊಟ್ಟು ನಗರದಿಂದ ಹಳ್ಳಿಗೆ ಬಂದು ಗ್ರಾಮೋದ್ಧಾರದಲ್ಲಿ ತೊಡಗಿಸಿಕೊಂಡು ಬದಿಯಡ್ಕ ಗ್ರಾಮ ಪಂಚಾಯತ್‌ ಅಧ್ಯಕ್ಷರಾದವರು. ತಮ್ಮ ಜೀವಿತಾವಧಿಯ ಕೊನೆಯವರೆಗೂ ಅದೇ ಬದಿಯಡ್ಕದ ಹಳ್ಳಿಯಲ್ಲೇ ಜೀವನ ನಡೆಸಿದವರು.

ಒಂದೊಮ್ಮೆ ಇವರು ಬೆಂಗಳೂರಿನಂಥ ಮಹಾನಗರಗಳಲ್ಲಿ ಇದ್ದಿದ್ದರೆ ರಾಷ್ಟ್ರಕವಿ ಬಿರುದಿಗೆ ಮಾನ್ಯರಾಗುತ್ತಿದ್ದರು ಎಂಬ ಮಾತು ಸಾಹಿತ್ಯ ವಲಯದಿಂದಲೇ ಕೇಳಿಬಂದಿತ್ತು. ಆದರೆ ಡಾ| ಕಯ್ನಾರರು ಯಾವತ್ತೂ ಪ್ರಚಾರದ ಹಿಂದೆ ಬಿದ್ದವರೇ ಅಲ್ಲ. ನೇರ ನಡೆ ನುಡಿ, ಸರಳತೆಯನ್ನು ಕೊನೆಯ ವರೆಗೂ ಉಳಿಸಿಕೊಂಡವರು. ಅದೇ ಕಾರಣಕ್ಕೆ ಇವರು ಇತರೆಲ್ಲ ಸಾಹಿತಿಗಳಿಗಿಂತ ಭಿನ್ನವಾಗಿ ನಿಲ್ಲುತ್ತಾರೆ ಹಾಗೂ ಹೆಚ್ಚು ಆಪ್ತರಾಗುತ್ತಾರೆ.

1915 ಜೂನ್‌ 8ರಂದು ದುಗ್ಗಪ್ಪ ರೈ – ದೈಯಕ್ಕೆ ದಂಪತಿಯ ಪುತ್ರನಾಗಿ ಜಗತ್ತಿನ ಬೆಳಕು ಕಂಡಿದ್ದ ಡಾ| ಕಯ್ನಾರ ಕಿಂಞಣ್ಣ ರೈ ಅವರು ಎಂ.ಎ. ಪದವೀಧರರು. ಕನ್ನಡ ಮತ್ತು ಸಂಸ್ಕೃತದಲ್ಲಿ ಅಪಾರ ಜ್ಞಾನ ಸಂಪಾದಿಸಿಕೊಂಡಿರುವ ಅವರು ರಾಷ್ಟ್ರಕವಿ ಗೋವಿಂದ ಪೈಗಳಿಗೆ ಸಮಾನರಾಗಿ ನಿಲ್ಲಬಹುದಾದ ಸಾಹಿತಿ.

ಕಾಸರಗೋಡಿನ ಯೋಧ: ಡಾ| ಕಯ್ನಾರರು “ಕಾಸರಗೋಡಿನ ಯೋಧ’ ಎಂದೇ ಗುರುತಿಸಿಕೊಂಡವರು. ಅದಕ್ಕೆ ಕಾರಣ ಅವರು ಕಾಸರಗೋಡನ್ನು ಕರ್ನಾಟಕಕ್ಕೆ ಸೇರಿಸಬೇಕು, ಮಹಾಜನ ವರದಿ ಜಾರಿಯಾಗಬೇಕು ಎಂದು ತಮ್ಮ ಜೀವನದುದ್ದಕ್ಕೂ ಆಗ್ರಹಿಸುತ್ತಲೇ ಬಂದಿದ್ದರು ಮತ್ತು ಅದಕ್ಕಾಗಿ ಅವರು ಮಾಡಿರುವ ಹೋರಾಟ ಅಷ್ಟಿಷ್ಟಲ್ಲ. ಬೆಂಗಳೂರಿನಲ್ಲಿ ಧರಣಿ ಸತ್ಯಾಗ್ರಹ ಮಾಡಿ, ಕರ್ನಾಟಕದ ಹಲವಾರು ಮುಖ್ಯಮಂತ್ರಿಗಳನ್ನು ಅವರ ಅಧಿಕಾರಾ ವಧಿಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿ ಕಾಸರಗೋಡನ್ನು ಕರ್ನಾಟಕಕ್ಕೆ ಸೇರಿಸಬೇಕು ಎಂದು ಕೇಳಿಕೊಂಡಿದ್ದರು. ಆದರೆ ಇವರಿಗೆ ಸಿಕ್ಕಿದ್ದು ಕೇವಲ ಭರವಸೆ ಮಾತ್ರವಾಗಿತ್ತು. ನಾನು ಸಾಯುವ ಮೊದಲಾದರೂ ಕಾಸರಗೋಡನ್ನು ಕರ್ನಾಟಕದ ಭಾಗವಾಗಿ ನೋಡಬೇಕಿತ್ತು ಎಂದು ಎಷ್ಟೋ ವೇದಿಕೆಯಲ್ಲಿ ಹೇಳಿಕೊಂಡು ಕಣ್ಣೀರು ಸುರಿಸಿದ್ದರು.

ಕಾಸರಗೋಡನ್ನು ಕರ್ನಾಟಕಕ್ಕೆ ಸೇರಿಸಲು ಆಗ್ರಹಿಸಿ ಭಾಷಾವಾರು ರಾಜ್ಯ ವಿಭಜನೆ ಸಂದರ್ಭ ನಡೆಸಿದ್ದ ಹೋರಾಟಕ್ಕೆ ಇವರು ಮುಂಚೂಣಿ ನಾಯಕರಾಗಿದ್ದರು. ಕಾಸರಗೋಡಿನ ಬಗ್ಗೆ ಡಾ| ಕಯ್ನಾರರು ಬರೆದಿರುವ “ಬೆಂಕಿ ಬಿದ್ದಿದೆ ಮನೆಗೆ ಓ ಬೇಗ ಬನ್ನಿ’ ಕವನವು ಅವರಿಗೆ ಅತೀವ ಖ್ಯಾತಿಯನ್ನು ತಂದು ಕೊಟ್ಟಿದೆ.

ಅಪ್ಪಟ ಕೃಷಿಕ: ಡಾ| ಕಯ್ನಾರರು ಎಷ್ಟು ಎತ್ತರಕ್ಕೆ ಏರಿದರೂ, ಜನಪ್ರಿಯತೆ ಪಡೆದುಕೊಂಡರೂ ಕೃಷಿಯನ್ನು ಕೈಬಿಟ್ಟವರಲ್ಲ. ಕೃಷಿಯೇ ನನ್ನ ದೇವರು. ಕೃಷಿಯಿಂದಲೇ ನೆಮ್ಮದಿಯ ಬದುಕು, ಗ್ರಾಮೀಣಾಭಿವೃದ್ಧಿ ಸಾಧ್ಯ ಎಂದು ನಂಬಿಕೊಂಡವರು. ಗಾಂಧೀಜಿಯ ಕರೆಗೆ ಓಗೊಟ್ಟು ಹಳ್ಳಿಗೆ ಬಂದು ಕೃಷಿ ಕಾರ್ಯದಲ್ಲಿ ತೊಡಗಿಸಿಕೊಂಡವರು. ಆರೋಗ್ಯ ವಂತರಾಗಿರಲು ಕೃಷಿ ಮತ್ತು ಗ್ರಾಮೀಣ ವಾಸ ಒಂದು ಸೂಕ್ತ ದಾರಿ ಎಂಬ ನಿಲುವು ಅವರದ್ದಾಗಿತ್ತು. ಕೃಷಿ ಕುರಿತು ಹಲವಾರು ಕೃತಿಗಳನ್ನು ಬರೆದಿದ್ದಾರೆ. ಸ್ವಾತಂತ್ರ್ಯ ದ ಬಗ್ಗೆಯೂ ಸಾಕಷ್ಟು ಕವನಗಳನ್ನು, ಲೇಖನಗಳನ್ನು ಬರೆದಿರುವ ಮೇರು ಸಾಹಿತಿ ಇವರು.

ಕಯ್ನಾರರ ಮತ್ತೂಂದು ವಿಶೇಷ ಗುಣ ಎಂದರೆ ಯಾರು ಪತ್ರ ಬರೆದರೂ ಅದಕ್ಕೆ ಕೂಡಲೇ ಉತ್ತರಿ ಸುತ್ತಿದ್ದುದು. ಪತ್ರ ಕೈಗೆ ತಲುಪಿದ ಕೂಡಲೇ “ನಿಮ್ಮ ಪತ್ರ ತಲುಪಿದೆ’ ಎಂಬ ಒಂದು ವಾಕ್ಯದ ಮರುಪತ್ರ ಬರೆಯುವುದನ್ನು ರೂಢಿಸಿಕೊಂಡಿರುವುದು ಅವರ ಸರಳತೆಯನ್ನು ತೋರಿಸುತ್ತದೆ.

ದುಡಿತವೇ ನನ್ನ ದೇವರು: ಡಾ| ಕಯ್ನಾರ ಕಿಂಞಣ್ಣ ರೈ ಅವರು ಬರೆದಿರುವ ಅವರ ಆತ್ಮಕಥೆ ದುಡಿತವೇ ನನ್ನ ದೇವರು ಕೃತಿ 1995ರಲ್ಲಿ ಮೊದಲ ಆವೃತ್ತಿಯಾಗಿ ಪ್ರಕಟಗೊಂಡು, 1997ರಲ್ಲಿ ಮರು ಮುದ್ರ ಣಗೊಂಡಿತು. ಅವರ ಜೀವನದ ಏರಿಳಿತಗಳು, ಸಾಧನೆಗಳು, ಅವುಗಳ ಹಿಂದಿರುವ ಶಕ್ತಿ, ಹೋರಾಟದ ದಿನಚರಿ, ಸಾಹಿತ್ಯದ ವ್ಯಾಪ್ತಿ, ಹುಟ್ಟೂರು… ಹೀಗೆ ಎಲ್ಲವನ್ನೂ ಅವರು ಈ ಕೃತಿಯಲ್ಲಿ ಪಡಿಮೂಡಿಸಿದ್ದಾರೆ. ಸರಳ ಕನ್ನಡದಲ್ಲಿ ಎಲ್ಲರಿಗೂ ಅರ್ಥವಾಗುವ ರೀತಿಯಲ್ಲಿ, ಜತೆಗೆ ಓದಿಸಿಕೊಂಡು ಹೋಗುವ ಸಾಮಾನ್ಯ ಶೈಲಿಯಲ್ಲಿ ಅವರು ಬರೆದಿರುವ ಈ ಕೃತಿಯು ಈ ಮಹಾನ್‌ ಶಕ್ತಿಯ ಬಗ್ಗೆ ತಿಳಿದುಕೊಳ್ಳಲು ನಮಗೆ ತುಂಬಾ ಸಹಕಾರಿಯಾಗಿದೆ.

ಪ್ರಮುಖ ಪ್ರಶಸ್ತಿಗಳು: 1969ರಲ್ಲಿ ಶ್ರೇಷ್ಠ ಅಧ್ಯಾಪಕ ರಾಷ್ಟ್ರ ಪ್ರಶಸ್ತಿ, ಡಾಕ್ಟರೆಟ್‌, 1970ರಲ್ಲಿ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸ್ಥಾನ, 1985ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, 1990ರಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ಗೌರವ ಪ್ರಶಸ್ತಿ, ನಾಡೋಜ ಪ್ರಶಸ್ತಿ, ಕರ್ನಾಟಕ ರತ್ನ ಪ್ರಶಸ್ತಿ… ಇತ್ಯಾದಿ.

ಡಾ| ಕಯ್ನಾರ ಕಿಂಞಣ್ಣ ರೈ ಅವರು ಶತಾಯುಷಿಯಾಗಿ 101 ವರ್ಷಗಳ ಸಾರ್ಥಕ ಬದುಕನ್ನು ಕಂಡು 2015ರ ಆಗಸ್ಟ್‌ 9ರಂದು ಇಹಲೋಕವನ್ನು ತ್ಯಜಿಸಿದರು. ಈ ಮೂಲಕ ಕಾಸರಗೋಡಿನ ಕನ್ನಡ ಹೋರಾಟದ ಪ್ರಮುಖ ಕೊಂಡಿಯೊಂದು ಕಳಚಿಕೊಂಡಿತು. ಅಷ್ಟು ಮಾತ್ರವಲ್ಲದೆ ಕನ್ನಡ ಸಾಹಿತ್ಯ ಲೋಕ ಅಪ್ರತಿಮ ಸವ್ಯಸಾಚಿ ಬರಹಗಾರರೋರ್ವರನ್ನು ಕಳೆದುಕೊಂಡಿತು.

ಪುತ್ತಿಗೆ ಪದ್ಮನಾಭ ರೈ

ಟಾಪ್ ನ್ಯೂಸ್

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.