‘ಯಾವ ಮೋಹನ ಮುರಳಿ ಕರೆಯಿತು…’: ಶ್ವಾನ ಪ್ರೀತಿಯ ಸುತ್ತ ಮತ್ತೊಂದು ಚಿತ್ರ
Team Udayavani, Jun 8, 2023, 2:15 PM IST
ಕವಿ ಗೋಪಾಲಕೃಷ್ಣ ಅಡಿಗರು ಬರೆದಿರುವ ಯಾವ ಮೋಹನ ಮುರಳಿ ಕರೆಯಿತು ಎಂಬ ಹಾಡು ಬಹಳ ಜನಪ್ರಿಯ. ಈಗ ಈ ಹಾಡಿನ ಮೊದಲ ಸಾಲು ಚಿತ್ರದ ಶೀರ್ಷಿಕೆಯಾಗಿದೆ.
ಇತ್ತೀಚಿಗೆ “ಯಾವ ಮೋಹನ ಮುರಳಿ ಕರೆಯಿತು’ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್ ಟೀಸರ್ ಬಿಡುಗಡೆ ಮಾಡಿ, ಚಿತ್ರಕ್ಕೆ ಶುಭ ಕೋರಿದರು.
ಯಾವ ಮೋಹನ ಮುರಳಿ ಕರೆಯಿತು ಮನುಷ್ಯ ಹಾಗೂ ಶ್ವಾನದ ನಡುವಿನ ಪ್ರೀತಿಯ ಕುರಿತಾದ ಚಿತ್ರ. ಭರವಸೆಯ ಹುಡುಕಾಟದಲ್ಲಿರುವ ಅಂಗವಿಕಲ ಹುಡುಗಿಗೆ ಪ್ರೀತಿ ಅರಸಿ ಹೊರಟಿರುವ ಶ್ವಾನ ಸಿಗುತ್ತದೆ. ಇಬ್ಬರ ನಡುವೆ ಉತ್ತಮ ಬಾಂಧವ್ಯವಿರುತ್ತದೆ. ಆ ಸಮಯದಲ್ಲಿ ಇವರಿಬ್ಬರ ನಡುವೆ ಮತ್ತೂಬ್ಬ ವ್ಯಕ್ತಿ ಪ್ರವೇಶಿಸುತ್ತಾನೆ. ನಂತರ ಏನಾಗುತ್ತದೆ ಎಂಬುದೇ ಚಿತ್ರದ ಕಥೆ. ಈಗಾಗಲೇ ಚಿತ್ರೀಕರಣ ಮುಗಿದು ಬಿಡುಗಡೆಗೆ ಸಿದ್ಧವಾಗಿದೆ. ಮೂರು ಹಾಡು ಗಳಿವೆ. ಸದ್ಯದಲ್ಲೇ ಟ್ರೇಲರ್ ಬರಲಿದೆ. ಇದು ನನ್ನ ಮೊದಲ ನಿರ್ದೇಶನದ ಚಿತ್ರವೆಂದರು ನಿರ್ದೇಶಕ ವಿಶ್ವಾಸ್ ಕೃಷ್ಣ.
ನಾನು ಉದ್ಯಮಿ. ಕಿಕ್ ಬಾಕ್ಸಿಂಗ್ ನಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದೇನೆ. ಸಿನಿಮಾ ಬಗ್ಗೆ ಅಷ್ಟು ಗೊತ್ತಿಲ್ಲ. ಸಾಹಿತಿ ಗೌಸ್ ಫೀರ್ ಅವರ ಮೂಲಕ ನಿರ್ದೇಶಕರ ಪರಿಚಯವಾಯಿತು. ಕಥೆ ಇಷ್ಟವಾಯಿತು. ನಿರ್ಮಾಣಕ್ಕೆ ಮುಂದಾದೆ ಎಂದು ನಿರ್ಮಾಪಕ ಶರಣಪ್ಪ ಗೌರಮ್ಮ ತಿಳಿಸಿದರು. ಚಿತ್ರದ ಪ್ರಮುಖ ಪಾತ್ರಧಾರಿ ಬೇಬಿ ಪ್ರಕೃತಿ, ನಾಯಕ ಮಾಧವ, ನಾಯಕಿ ಸ್ವಪ್ನಾ ಶೆಟ್ಟಿಗಾರ್, ಪಟೇಲ್ ವರುಣ್ ರಾಜ್ ಹಾಗೂ ಸಂಗೀತ ನಿರ್ದೇಶಕ ಅನಿಲ್ ಸಿ.ಜೆ ಚಿತ್ರದ ಕುರಿತು ಮಾತನಾಡಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ