Kolhapur : ಸಹಜ ಸ್ಥಿತಿಯತ್ತ ಕೊಲ್ಹಾಪುರ- 36 ಮಂದಿ ಬಂಧನ
Team Udayavani, Jun 9, 2023, 6:59 AM IST
ಪುಣೆ: ಭಾರೀ ಹಿಂಸಾಚಾರಕ್ಕೆ ಸಾಕ್ಷಿಯಾದ ಮಹಾರಾಷ್ಟ್ರದ ಕೊಲ್ಹಾಪುರ ಗುರುವಾರ ಸಹಜ ಸ್ಥಿತಿಗೆ ಬಂದಿದೆ. ಪ್ರಕರಣ ಸಂಬಂಧ ಒಟ್ಟು 36 ಮಂದಿಯನ್ನು ಬಂಧಿಸಲಾಗಿದ್ದು, ನಗರದಾದ್ಯಂತ ಬಿಗಿಭದ್ರತೆ ಕೈಗೊಳ್ಳಲಾಗಿದೆ.
ಟಿಪ್ಪು ಸುಲ್ತಾನ್ ಮತ್ತು ಔರಂಗಜೇಬ್ ಫೋಟೋ ಹಾಗೂ ಆಡಿಯೋವುಳ್ಳ ವಾಟ್ಸ್ಆ್ಯಪ್ ಸ್ಟೇಟಸ್ ವಿರುದ್ಧ ಬುಧವಾರ ಹಿಂದೂ ಸಂಘಟನೆಗಳು ಕರೆ ನೀಡಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಈ ಹಿನ್ನೆಲೆಯಲ್ಲಿ ಕೊಲ್ಹಾಪುರದಲ್ಲಿ ಕರ್ಫ್ಯೂ ವಿಧಿಸಲಾಗಿತ್ತು.
ಗುರುವಾರ ಪರಿಸ್ಥಿತಿ ಶಾಂತವಾಗಿದ್ದು, ಅಂಗಡಿ ಮುಂಗಟ್ಟುಗಳು ತೆರೆದಿವೆ. ಜನಸಂಚಾರವೂ ಶುರುವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಚಿವರ ಸಭೆ:
ಮಹಾರಾಷ್ಟ್ರ ಶಾಲಾ ಶಿಕ್ಷಣ ಮತ್ತು ಮರಾಠಿ ಭಾಷೆ ಸಚಿವ ದೀಪಕ್ ಕೇಸರ್ಕರ್ ಅವರು ಗುರುವಾರ ಕೊಲ್ಹಾಪುರದ ವಿವಿಧ ಸಾಮಾಜಿಕ ಸಂಸ್ಥೆಗಳೊಂದಿಗೆ ಸಭೆ ನಡೆಸಿದ್ದಾರೆ. ನಾಗರಿಕ ಸಮಾಜದ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಇದರಲ್ಲಿ ಭಾಗಿಯಾಗಿದ್ದರು. ಶಾಂತಿ ಕಾಪಾಡಲು ಸಹಕರಿಸುವಂತೆ ಸಚಿವರು ಎಲ್ಲರಿಗೂ ಮನವಿ ಮಾಡಿªದಾರೆ.
ಪವಾರ್ ಮನವಿ:
ಪೋಸ್ಟರ್ಗಳು, ಸ್ಟೇಟಸ್ಗಳ ವಿಚಾರದಲ್ಲಿ ನಡೆದ ಹಿಂಸಾಚಾರವು ಮಹಾರಾಷ್ಟ್ರದ ಸಂಸ್ಕೃತಿಗೆ ತಕ್ಕುದಲ್ಲ. ಮಹಾರಾಷ್ಟ್ರವು ಶಾಂತಿ ಬಯಸುವ ರಾಜ್ಯವಾಗಿದೆ. ಮುಂದೆಂದೂ ಇಂತಹ ಘಟನೆಗಳು ನಡೆಯದಂತೆ ನೋಡಿಕೊಳ್ಳಿ ಎಂದು ರಾಜ್ಯದ ಜನರಿಗೆ ಎನ್ಸಿಪಿ ವರಿಷ್ಠ ಶರದ್ ಪವಾರ್ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ