ವಸತಿ ವಿದ್ಯಾಲಯದಲ್ಲಿ ಬಾಲಕಿ ಆಕಸ್ಮಿಕ ಸಾವು; ಸೂಕ್ತ ತನಿಖೆಗೆ ಬೇಳೂರು ಸೂಚನೆ


Team Udayavani, Jun 8, 2023, 10:44 PM IST

1-asds-dsad

ಸಾಗರ: ಇಲ್ಲಿನ ಖಾಸಗಿ ವಸತಿ ವಿದ್ಯಾಲಯವೊಂದರಲ್ಲಿ ಗುರುವಾರ 13 ವರ್ಷದ ಬಾಲಕಿ ಆಕಸ್ಮಿಕವಾಗಿ ಮೃತಪಟ್ಟ ಘಟನೆಗೆ ಸಂಬಂಧಪಟ್ಟಂತೆ ಸೂಕ್ತ ತನಿಖೆ ನಡೆಸಲು ಶಾಸಕ ಗೋಪಾಲಕೃಷ್ಣ ಬೇಳೂರು ಸೂಚನೆ ನೀಡಿದ್ದಾರೆ.

ಖಾಸಗಿ ವಸತಿ ವಿದ್ಯಾಲಯವೊಂದರಲ್ಲಿ ಸೊರಬ ತಾಲೂಕಿನ ಶಿವಪುರದ ತೇಜಸ್ವಿನಿ ಎಂಬ ಎಂಟನೇ ತರಗತಿ ವಿದ್ಯಾರ್ಥಿನಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಬೆಳಗ್ಗೆ ವಿದ್ಯಾರ್ಥಿನಿ ವಸತಿ ಶಾಲೆಯಲ್ಲಿ ತೀವ್ರ ಅಸ್ವಸ್ಥಗೊಂಡಿದ್ದಾರೆ. ತಕ್ಷಣ ಅವರನ್ನು ಶಾಲಾ ವಾಹನದಲ್ಲಿ ಉಪವಿಭಾಗೀಯ ಆಸ್ಪತ್ರೆಗೆ ಕರೆದುಕೊಂಡು ಬರಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ವಿದ್ಯಾರ್ಥಿನಿಯ ಶವ ಪರೀಕ್ಷೆಯನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ.

ವಿದ್ಯಾರ್ಥಿನಿ ಸಾವಿನ ಬಗ್ಗೆ ಮಾತನಾಡಿದ ಶಾಲಾ ಮುಖ್ಯಸ್ಥ ಎಚ್.ಪಿ.ಮಂಜಪ್ಪ, ಐದು ದಿನಗಳ ಹಿಂದೆ 8ನೇ ತರಗತಿಗೆ ತೇಜಸ್ವಿನಿ ಅವರನ್ನು ದಾಖಲಿಸಿಕೊಳ್ಳಲಾಗಿತ್ತು. ತೇಜಸ್ವಿನಿ ಜೊತೆಗೆ ಇತರರನ್ನು ಉಚಿತ ಶಿಕ್ಷಣ ನೀಡಲು ದಾಖಲಿಸಿಕೊಳ್ಳಲಾಗಿದೆ. ಬುಧವಾರ ರಾತ್ರಿ ವಿದ್ಯಾರ್ಥಿನಿ ಸುಸ್ತು ಎಂದು ಹೇಳಿದಾಗ ಸೂಕ್ತ ಚಿಕಿತ್ಸೆ ನೀಡಲಾಗಿತ್ತು. ಗುರುವಾರ ಬೆಳಿಗ್ಗೆ ವಿದ್ಯಾರ್ಥಿನಿ ರೂಮಿನಲ್ಲಿ ವಾಂತಿ ಮಾಡಿಕೊಂಡಿದ್ದಾಳೆ. ತಕ್ಷಣ ಅವಳನ್ನು ಉಪವಿಭಾಗೀಯ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದುಕೊಂಡು ಬರಲಾಗಿದೆ. ವಿದ್ಯಾರ್ಥಿನಿ ಬಂದು ಐದು ದಿನವಾಗಿರುವುದರಿಂದ ಅವಳ ಬಗ್ಗೆ ಹೆಚ್ಚಿನ ಮಾಹಿತಿ ನಮ್ಮ ಬಳಿ ಇಲ್ಲ. ಸಾವಿಗೆ ನಿಖರ ಕಾರಣ ಏನೆಂದು ತಿಳಿದುಕೊಳ್ಳಲು ವೈದ್ಯರು ಪೋಸ್ಟ್‌ಮಾರ್ಟಂ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆಸುವುದಾಗಿ ತಿಳಿಸಿದ್ದಾರೆ. ಪೊಲೀಸರ ತನಿಖೆಗೆ ನಮ್ಮ ಸಂಸ್ಥೆ ಎಲ್ಲ ರೀತಿಯ ಸಹಕಾರ ನೀಡುತ್ತದೆ. ನಮ್ಮ ವಿದ್ಯಾರ್ಥಿ ನಿಲಯದಲ್ಲಿ ಯಾವುದೇ ಲೋಪವಾಗಿಲ್ಲ. ಪೋಸ್ಟ್‌ಮಾರ್ಟ ವರದಿ ನಂತರ ಸತ್ಯಾಂಶ ಗೊತ್ತಾಗಲಿದೆ ಎಂದು ತಿಳಿಸಿದ್ದಾರೆ.

ತನಿಖೆಗೆ ಆದೇಶ: ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಗೋಪಾಲಕೃಷ್ಣ ಬೇಳೂರು ಮೃತ ವಿದ್ಯಾರ್ಥಿನಿ ಕುಟುಂಬಕ್ಕೆ ಸಾಂತ್ವನ ಹೇಳಿ, ೧೩ ವರ್ಷದ ಹೆಣ್ಣುಮಗಳು ಮೃತಪಟ್ಟಿರುವುದರಿಂದ ಪೋಷಕರು ಮತ್ತವರ ಸಂಬಂಧಿಕರು ತೀವ್ರ ದುಃಖದಲ್ಲಿದ್ದಾರೆ. ಪೋಷಕರು ಈ ಸಂಬಂಧ ಪ್ರಕರಣ ದಾಖಲಿಸುತ್ತೇವೆಂದು ತಿಳಿಸಿದ್ದಾರೆ. ಪೊಲೀಸರಿಗೆ ಸಾವಿನ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಿವಿಲ್ ಸರ್ಜನ್ ಡಾ. ಪರಪ್ಪ ಕೆ., ಡಾ. ಪ್ರಕಾಶ್ ಬೋಸ್ಲೆ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.