Sharad Pawar : ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್, ರಾವತ್ ಸಹೋದರರಿಗೆ ಜೀವ ಬೆದರಿಕೆ
Team Udayavani, Jun 9, 2023, 12:19 PM IST
ಮಹಾರಾಷ್ಟ್ರ: ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರಿಗೆ ಜೀವ ಬೆದರಿಕೆ ಬಂದಿದೆ ಎಂದು ಸಂಸದೆ ಸುಪ್ರಿಯಾ ಸುಳೆ ಅವರು ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು, “ಶರದ್ ಪವಾರ್ ಅವರಿಗೆ ಜೀವ ಬೆದರಿಕೆ ಬಂದಿದೆ. ನನ್ನ ವಾಟ್ಸಾಪ್ ಗೆ ಅಪರಿಚಿತರು ವೆಬ್ ಸೈಟ್ ವೊಂದರ ಮೂಲಕ ಜೀವ ಬೆದರಿಕೆಯನ್ನು ಹಾಕಿರುವ ಸಂದೇಶಗಳು ಬಂದಿದೆ. ಪೊಲೀಸರ ಬಳಿ ಕ್ರಮಕೈಗೊಳ್ಳಿ ಎಂದು ಕೇಳಲು ಬಂದಿದ್ದೇನೆ” ಎಂದು ಎಎನ್ ಐಗೆ ಸುಪ್ರಿಯಾ ಸುಳೆ ಅವರು ತಿಳಿಸಿದ್ದಾರೆ.
“ನಾನು ಮಹಾರಾಷ್ಟ್ರ ಗೃಹ ಸಚಿವರು ಮತ್ತು ಕೇಂದ್ರ ಗೃಹ ಸಚಿವರನ್ನು ಒತ್ತಾಯಿಸುತ್ತೇನೆ. ಇದು ಕೀಳುಮಟ್ಟದ ರಾಜಕೀಯವಾಗಿದ್ದು, ಇದು ನಿಲ್ಲಬೇಕು,” ಎಂದು ಸುಪ್ರಿಯಾ ಸುಳೆ ಹೇಳಿರುವುದಾಗಿ ಎಎನ್ಐ ವರದಿ ಮಾಡಿದೆ.
ಇದನ್ನೂ ಓದಿ: ಇದು ಯಾವ ರೀತಿಯ ಪ್ರೀತಿ? ರಾಹುಲ್ ‘ಮೊಹಬ್ಬತ್ ಕಿ ದುಕಾನ್’ ಹೇಳಿಕೆಗೆ ಸ್ಮೃತಿ ತಿರುಗೇಟು
“ಶರದ್ ಪವಾರ್ ಅವರ ಭದ್ರತೆಯ ಜವಾಬ್ದಾರಿ ಗೃಹ ಸಚಿವಾಲಯದ ಮೇಲಿದೆ. ಈ ಪ್ರಕರಣದಲ್ಲಿ ಗೃಹ ಸಚಿವರು ಮಧ್ಯ ಪ್ರವೇಶಿಸಬೇಕು. ಶರದ್ ಪವಾರ್ ದೇಶದ ನಾಯಕ. ಎನ್ಸಿಪಿ ಮುಖ್ಯಸ್ಥರಿಗೆ ಬೆದರಿಕೆ ಇದೆ ಎಂದು ನಾನು ಪೊಲೀಸರಿಗೆ ಹೇಳಿದ್ದೇನೆ. ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ” ಎಂದು ವರದಿ ತಿಳಿಸಿದೆ.
ಇನ್ನೊಂದೆಡೆ ಲೋಕಸಭಾ ಸದಸ್ಯ ಸಂಜಯ್ ರಾವತ್ ಹಾಗೂ ಅವರ ಸಹೋದರ ಶಾಸಕ ಸುನಿಲ್ ರಾವತ್ ಅವರಿಗೆ ಅಪರಿಚಿತರಿಂದ ಜೀವ ಬೆದರಿಕೆ ಕರೆ ಬಂದಿವೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ