Movie Review: ದರ್ಬಾರ್‌ ಒಳಗೊಂದು ನಗೆಹಬ್ಬ


Team Udayavani, Jun 10, 2023, 11:51 AM IST

Kannada movie darbar review

ರಾಜಕೀಯದ ಚದುರಂಗದಾಟವನ್ನು ದೂರದಿಂದ ನೋಡುವುದೇ ಒಂದು ಮಜ. ಅಭ್ಯರ್ಥಿಯನ್ನುಸೋಲಿಸಲು, ಗೆಲ್ಲಿಸಲು ನಡೆಯುವ “ಗೇಮ್‌’ಗಳು, ಸ್ಕೆಚ್‌ಗಳು ಚಿತ್ರ-ವಿಚಿತ್ರವಾಗಿರುತ್ತವೆ. ಅದರಲ್ಲೂಹಳ್ಳಿ ರಾಜಕೀಯದ “ರಂಗು’ ಇನ್ನೂ ಜೋರು. ಇಂತಹ ಹಳ್ಳಿ ರಾಜಕೀಯದ ಆಟವನ್ನು ತೆರೆಮೇಲೆ ತಂದಿರುವ ಸಿನಿಮಾ “ದರ್ಬಾರ್‌’. ಇದು ನಿರ್ದೇಶಕ ವಿ.ಮನೋಹರ್‌ ಅವರ ಕನಸು ಕೂಡಾ.

ಸುಮಾರು 23 ವರ್ಷಗಳ ನಂತರ ಮನೋಹರ್‌ ನಿರ್ದೇಶಿಸಿರುವ ಸಿನಿಮಾ “ದರ್ಬಾರ್‌’. ಒಂದು ಔಟ್‌ ಅಂಡ್‌ ಔಟ್‌ ಕಾಮಿಡಿ ಸಿನಿಮಾವನ್ನು ಹಳ್ಳಿ ಹಿನ್ನೆಲೆಯಲ್ಲಿ ಕಟ್ಟಿಕೊಡಬೇಕೆಂಬುದು ಮನೋಹರ್‌ ಅವರ ಕನಸು. ಅದನ್ನು ತೆರೆಮೇಲೆ ಅಚ್ಚುಕಟ್ಟಾಗಿ ತರುವಲ್ಲಿ ಮನೋಹರ್‌ ಯಶಸ್ವಿಯಾಗಿದ್ದಾರೆ.

ಜಬರ್ದಸ್ತ್ ನಾಯಕ, ಆತನದ್ದೇ ಆದ ಸ್ಟೈಲ್‌, ಜೊತೆಗೊಂದು ಲವ್‌.. ಆದರೆ, ಹೃದಯವಂತ… ಈ ನಡುವೆಯೇ ನಾಯಕನ ಅಹಂಕಾರ ಇಳಿಸಬೇಕೆಂಬುದು ಸ್ಕೆಚ್‌ ಹಾಕಿ ಚುನಾವಣೆಗೆ ನಿಲ್ಲಿಸುವ “ಜೊತೆಗಾರರು’ ಹಾಗೂ ಆತನ ವಿರುದ್ಧ ಅವರ ಸ್ಕೆಚ್‌.. ಇಂತಹ ಅಂಶದೊಂದಿಗೆ ಇಡೀ ಸಿನಿಮಾ ಸಾಗುತ್ತದೆ. ಆರಂಭದಲ್ಲಿ ಎಲ್ಲಾ ಸಿನಿಮಾಗಳಂತೆ ನಾಯಕನ ಇಂಟ್ರೋಡಕ್ಷನ್‌, ಆತನ ಗುಣಗಾನ, ಲವ್‌… ಹೀಗೆ ಸಾಗುವ ಸಿನಿಮಾ ನಿಜವಾಗಿಯೂ ಟೇಕಾಫ್ ಆಗೋದು ಚುನಾವಣಾ ಪ್ರಕ್ರಿಯೆ ಅಖಾಡಕ್ಕಿಳಿದ ಮೇಲೆ. ಇಲ್ಲಿನ ತರಹೇವಾರಿ ಪ್ರಚಾರ, ಗಿಮಿಕ್‌… ಎಲ್ಲವೂ ಪ್ರೇಕ್ಷಕರಿಗೆ ಖುಷಿ ಕೊಡುತ್ತವೆ. ಜೊತೆಗೆ ನಗುವಿನೊಂದಿಗೆ ಪ್ರೇಕ್ಷಕ ಸಿನಿಮಾ ಎಂಜಾಯ್‌ ಮಾಡುವಂತಹ ಹಲವು ಸನ್ನಿವೇಶಗಳು ಸಿನಿಮಾದಲ್ಲಿವೆ. ಆ ಮಟ್ಟಿಗೆ ವಿ.ಮನೋಹರ್‌ ಸಿನಿಮಾವನ್ನು ನೀಟಾಗಿ ಕಟ್ಟಿಕೊಟ್ಟಿದ್ದಾರೆ.

ಅಂದಹಾಗೆ, ನಾಯಕರಾಗಿ ನಟಿಸಿರುವ ಸತೀಶ್‌ ಅವರೇ ಈ ಸಿನಿಮಾದ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದು, ಇವತ್ತಿನ ರಾಜಕೀಯ ಸನ್ನಿವೇಶಗಳಿಗೆ ಹಿಡಿದ ಕೈಗನ್ನಡಿಯಂತಿದೆ. ಇಡೀ ಸಿನಿಮಾ ಹಳ್ಳಿಯಲ್ಲೇ ನಡೆದಿದ್ದು, ಒಂದಷ್ಟು ವಿಚಿತ್ರ, ವಿಭಿನ್ನ ಮ್ಯಾನರಿಸಂನ ಪಾತ್ರಗಳು ನಗುತರಿಸುತ್ತವೆ.

ಮೊದಲ ಬಾರಿಗೆ ನಾಯಕರಾಗಿ ನಟಿಸಿರುವ ಸತೀಶ್‌ ಅವರು ಆ್ಯಕ್ಷನ್‌ ಇಮೇಜ್‌ ಇರುವ ಹೀರೋ ಆಗಿ ಮಿಂಚಿದ್ದಾರೆ. ಸೆಂಟಿಮೆಂಟ್‌ಗಿಂತ ಖಡಕ್‌ ಲುಕ್‌ನಲ್ಲೇ ಗಮನ ಸೆಳೆದಿರುವ ಸತೀಶ್‌ ಸಿನಿಮಾದ ಕಥೆ, ಚಿತ್ರಕಥೆ, ಸಂಭಾಷಣೆಯಲ್ಲೂ ಮೆಚ್ಚುಗೆ ಗಳಿಸುತ್ತಾರೆ. ನಾಯಕಿ ಜಾಹ್ನವಿಗೆ ಇಲ್ಲಿನ ಹೆಚ್ಚಿನ ಅವಕಾಶವಿಲ್ಲ.

ಆದರೆ, ಹುಲಿ ಕಾರ್ತಿಕ್‌ ತಾನೊಬ್ಬ ಪ್ರತಿಭಾವಂತ ಕಲಾವಿದ ಎನ್ನುವುದನ್ನು ಹಿರಿತೆರೆ ಮೇಲೂ ಸಾಬೀತು ಮಾಡಿದ್ದಾರೆ. “ನಾಗ’ ಎಂಬ ಪಾತ್ರದ ವಿವಿಧ ಶೇಡ್‌ಗಳಲ್ಲಿ ಕಾರ್ತಿಕ್‌ ಗಮನ ಸೆಳೆಯುತ್ತಾರೆ. ಒಂದು ಹಳ್ಳಿ ಕಾಮಿಡಿಯನ್ನು ಕಣ್ತುಂಬಿಕೊಳ್ಳುವ ಆಸೆ ಇರುವವರಿಗೆ “ದರ್ಬಾರ್‌’ ಒಳ್ಳೆಯ ಆಯ್ಕೆಯಾಗಬಹುದು

 ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.