ರಾಮಚಂದ್ರನ್ ವಿಶ್ವನಾಥನ್ ದೇಶಭ್ರಷ್ಟ ಆರ್ಥಿಕ ಅಪರಾಧಿ; ಸಿಬಿಐ ವಿಶೇಷ ನ್ಯಾಯಾಲಯ
ದೇವಾಸ್ ಹಾಗೂ ಆಂತರಿಕ್ಸ್ ಒಡಂಬಡಿಕೆಯಲ್ಲಿ ಭ್ರಷ್ಟಾಚಾರ ನಡೆದಿತ್ತು.
Team Udayavani, Jun 10, 2023, 4:30 PM IST
ಬೆಂಗಳೂರು: ದೇವಾಸ್ ಮಲ್ಟಿಮೀಡಿಯಾ ಪ್ರೈ.ಲಿ.ನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಾಮಚಂದ್ರನ್ ವಿಶ್ವನಾಥನ್ರನ್ನು ದೇಶಭ್ರಷ್ಟ ಆರ್ಥಿಕ ಅಪರಾಧಿ ಎಂದು ಸಿಬಿಐ ವಿಶೇಷ ನ್ಯಾಯಾಲಯ ಘೋಷಣೆ ಮಾಡಿದೆ.
ಸೆಕ್ಷನ್ 12(2)ರ ಅಡಿ ರಾಮಚಂದ್ರನ್ ಆಸ್ತಿ ಜಪ್ತಿ ಮಾಡಲು ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಲಾಗಿದೆ. ಪ್ರಕರಣದ ವಿಚಾರಣೆಯನ್ನು ಜೂ.26ಕ್ಕೆ ನ್ಯಾಯಾಲಯ ಮುಂದೂಡಿದೆ. ಜಾರಿ ನಿರ್ದೇಶಾಲಯ (ಇಡಿ) ಪರವಾಗಿ ಎಸ್ಪಿಪಿ ಪಿ.
ಪ್ರಸನ್ನ ಕುಮಾರ್ ವಾದ ಮಂಡಿಸಿದ್ದಾರೆ.
ಏನಿದು ಪ್ರಕರಣ ?: 2004ರಲ್ಲಿ ರಾಮ ಚಂದ್ರನ್ ವಿಶ್ವನಾಥನ್ ಬೆಂಗಳೂರಿನಲ್ಲಿ ಉಪಗ್ರಹ ಆಧಾರಿತ ದೇವಾಸ್ ಮಲ್ಟಿ ಮೀಡಿಯಾ ಸೇವೆಗಳ ಕಂಪನಿ ಪ್ರಾರಂಭಿಸಿದ್ದರು. ಈ ಕಂಪನಿ ಭಾರತೀಯ ಮೊಬೈಲ್ ಬಳಕೆದಾರರಿಗೆ ಎಸ್-ಬ್ಯಾಂಡ್ ಟ್ರಾನ್ಸ್ಟಾಂಡರ್ಸ್ ಸಂವಹನ ಉಪಗ್ರಹದ ಮೂಲಕ ಮಲ್ಟಿಮೀಡಿಯಾ ಸೇವೆ ನೀಡಲು ಮುಂದಾಗಿತ್ತು. ಆಂತರಿಕ್ಷ್
ಕಾರ್ಪೊರೇಶನ್ ಜೊತೆ ಉಪಗ್ರಹ ನಿರ್ಮಿಸಬೇಕಾದ ಒಪ್ಪಂದ ಮಾಡಲಾಗಿತ್ತು. ದೇವಾಸ್ ಹಾಗೂ ಆಂತರಿಕ್ಸ್ ಒಡಂಬಡಿಕೆಯಲ್ಲಿ ಭ್ರಷ್ಟಾಚಾರ ನಡೆದಿತ್ತು. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿ ಆಗಿರುವ ರಾಮಚಂದ್ರನ್ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ತನಿಖೆ ನಡೆಸಿತ್ತು.
ಆದರೆ, ರಾಮಚಂದ್ರನ್ ವಿಶ್ವನಾಥನ್ ನ್ಯಾಯಾಲಯದ ವಿಚಾರಣೆಗೆ ಹಾಜರಾಗಿರಲಿಲ್ಲ. ಹೀಗಾಗಿ ರಾಮಚಂದ್ರನ್ ಅವರನ್ನು ದೇಶಭ್ರಷ್ಟ ಆರ್ಥಿಕ ಅಪರಾಧಿ ಎಂದು ಘೋಷಿಸಲು ಇಡಿ ಅಧಿಕಾರಿಗಳು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಮನವಿ ಮಾಡಿತ್ತು. ಇದನ್ನು ಪುರಸ್ಕರಿಸಿದ ನ್ಯಾಯಾಲಯವು ರಾಮಚಂದ್ರನ್ ವಿಶ್ವನಾಥನ್ರನ್ನು ದೇಶಭ್ರಷ್ಟ ಆರ್ಥಿಕ ಅಪರಾಧಿ ಎಂದು ನ್ಯಾಯಾಲಯವು ಘೋಷಿಸಿದೆ. ಅಮೆರಿಕದ ನಿವಾಸಿಯಾಗಿರುವ ರಾಮಚಂದ್ರನ್ ಭಾರತ ಮೂಲದವರಾಗಿದ್ದು, ಈಗಾಗಲೇ ದೇಶ ಬಿಟ್ಟು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ