Opposition ಮೈತ್ರಿ ಕೂಟದಿಂದ ದೂರ ಉಳಿಯುವ ಸೂಚನೆ ನೀಡಿದ ಒಮರ್ ಅಬ್ದುಲ್ಲಾ
ಅವರಿಗೆ ಬೇಕಾದಾಗ ನಮ್ಮ ಬಾಗಿಲು ಬಡಿಯುತ್ತಾರೆ...
Team Udayavani, Jun 10, 2023, 6:18 PM IST
ಶ್ರೀನಗರ : ಮುಂದಿನ ವರ್ಷದ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ವಿರುದ್ಧದ ಮಹಾಮೈತ್ರಿಕೂಟದಿಂದ ದೂರ ಉಳಿಯುವ ಬಗ್ಗೆ ನ್ಯಾಶನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಶನಿವಾರ ಸುಳಿವು ನೀಡಿದ್ದಾರೆ, 370 ನೇ ವಿಧಿಯನ್ನು ರದ್ದುಪಡಿಸಿದಾಗ ಹೆಚ್ಚಿನ ಪಕ್ಷಗಳು ಮೌನವಾಗಿದ್ದವು ಎಂದು ಮೈತ್ರಿಕೂಟದ ಪಕ್ಷಗಳ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.
ಗಡಿ ಜಿಲ್ಲೆ ರಜೌರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ,2024ರ ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ ವಿರುದ್ಧ ನ್ಯಾಷನಲ್ ಕಾನ್ಫರೆನ್ಸ್ ಇತರೆ ಪಕ್ಷಗಳೊಂದಿಗೆ ಕೈಜೋಡಿಸುವ ಸಾಧ್ಯತೆ ಕುರಿತು ಕೇಳಿದ ಪ್ರಶ್ನೆಗೆ ಮಾಜಿ ಮುಖ್ಯಮಂತ್ರಿ ಪ್ರತಿಕ್ರಿಯಿಸಿ, ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣಾ ಪೂರ್ವ ಮೈತ್ರಿ ಕುರಿತ ಚರ್ಚೆಯು ಕೇಂದ್ರಾಡಳಿತ ಪ್ರದೇಶದಲ್ಲಿನ ವಿಧಾನಸಭಾ ಚುನಾವಣೆ ಮಾಡುವ ಮೊದಲು ಅಕಾಲಿಕವಾಗಿರುತ್ತದೆ ಎಂದು ಹೇಳಿದರು.
“ಜಮ್ಮು ಮತ್ತು ಕಾಶ್ಮೀರದ ಹೊರಗೆ ಕೊಡಲು ನಾವು ಏನು ಹೊಂದಿದ್ದೇವೆ? ನಮಗೆ ಒಟ್ಟು ಐದು ಲೋಕಸಭೆ ಸ್ಥಾನಗಳಿವೆ ಮತ್ತು ಈ ಸ್ಥಾನಗಳು ಯಾವ ಬಿರುಗಾಳಿಯನ್ನು ಸೃಷ್ಟಿಸಬಹುದು? ನಾವು ಈ ಸ್ಥಾನಗಳಲ್ಲಿ ಬಿಜೆಪಿ ವಿರುದ್ಧ ಹೋರಾಡಬೇಕಾಗಿದೆ ಮತ್ತು ಜೆ & ಕೆ ಹೊರಗೆ ಏನು ನಡೆಯುತ್ತಿದೆ ಎಂಬ ಪ್ರಶ್ನೆ ಎರಡನೇಯದ್ದಾಗಿದೆ” ಎಂದರು.
“ಬಲವಂತಗಳನ್ನು ಬದಿಗಿಟ್ಟು, ಪಕ್ಷ ಮತ್ತು ಜಮ್ಮು ಮತ್ತು ಕಾಶ್ಮೀರಕ್ಕೆ ಅಂತಹ ಮೈತ್ರಿಯಿಂದ ಯಾವುದೇ ಪ್ರಯೋಜನವನ್ನು ನಾನು ಕಾಣುವುದಿಲ್ಲ. ಅವರಿಗೆ ಬೇಕಾದಾಗ ನಮ್ಮ ಬಾಗಿಲು ಬಡಿಯುತ್ತಾರೆ ಎಂದು ನಾನು ಪದೇ ಪದೇ ಹೇಳುತ್ತಿದ್ದೇನೆ. ಕೇಜ್ರಿವಾಲ್ ತೊಂದರೆಯಲ್ಲಿದ್ದಾಗ, ಅವರಿಗೆ ನಮ್ಮ ಬೆಂಬಲ ಬೇಕು ಆದರೆ 2019 ರಲ್ಲಿ ನಾವು ದೊಡ್ಡ ಮೋಸವನ್ನು ಎದುರಿಸಿದಾಗ ಈ ನಾಯಕರು ಎಲ್ಲಿದ್ದರು, ”ಎಂದು ಅವರು ಕೇಂದ್ರ ಸರ್ಕಾರ ಆರ್ಟಿಕಲ್ 370 ರ ರದ್ದತಿ ಮತ್ತು ಜೆ & ಕೆ ಅನ್ನು ಕಾಶ್ಮೀರ ಮತ್ತು ಲಡಾಖ್ ಆಗಿ ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವ ಬಗ್ಗೆ ಉಲ್ಲೇಖಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ