Guarantee Scheme ಟೀಕಿಸಿ ಸ್ಟೇಟಸ್; ಶಿಕ್ಷಕ- ಶಿಕ್ಷಕಿಗೆ ನೋಟಿಸ್
Team Udayavani, Jun 10, 2023, 7:53 PM IST
ಗಂಗಾವತಿ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪ ವ್ಯಕ್ತಪಡಿಸಿ ಸ್ಟೇಟಸ್ ಹಾಕಿದ್ದ ಗಂಗಾವತಿ ನಗರದ ಇಂದಿರಾನಗರ ಶಾಲೆಯ ಶಿಕ್ಷಕಿ ನಳಿನಾಕ್ಷಿ ಮತ್ತು ಅಮರ ಭಗತ್ ಸಿಂಗ್ ನಗರದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಪತ್ರೆಪ್ಪ ಇವರಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕಾರಣ ಕೇಳಿ ನೋಟಿಸ್ ನೀಡಿದ್ದಾರೆ.
ರಾಜ್ಯ ಸರ್ಕಾರ ಚುನಾವಣಾ ಪೂರ್ವದಲ್ಲಿ ಭರವಸೆ ನೀಡಿದಂತೆ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡಿದ ಕುರಿತು ಇಂದಿರಾನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ನಳಿನಾಕ್ಷಿ ಹಾಗೂ ಅಮರ್ ಭಗತ್ ಸಿಂಗ್ ನಗರದ ಮುಖ್ಯ ಶಿಕ್ಷಕ ಪತ್ರೆಪ್ಪ ಇವರು ಆಕ್ಷೇಪ ವ್ಯಕ್ತಪಡಿಸಿ ಟೀಕಿಸಿ ಸಾಮಾಜಿಕ ಜಾಲತಾಣಗಳಲ್ಲಿ ಸ್ಟೇಟಸ್ ನ್ನು ಹಾಕಿಸಿ ಗ್ಯಾರಂಟಿ ಹಠವು ದೇಶ ಬಚಾವ್ ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ದೇಶಕ್ಕಾಗಿ ಮಾಡಿದ ಕೆಲಸ ಕಾರ್ಯಗಳನ್ನು ಯಾರು ಪ್ರಶ್ನಿಸುತ್ತಾರೋ ಅವರನ್ನು ಕುಳ್ಳಿರಿಸಿಕೊಂಡು ಮಾಹಿತಿ ನೀಡುವಂತೆ 200 ಯೋಜನೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬಿಜೆಪಿ ಪರವಾಗಿ ತಮ್ಮ ನಿಲುವನ್ನು ವ್ಯಕ್ತಪಡಿಸಿದ್ದರು.
ಶಿಕ್ಷಕ ಶಿಕ್ಷಕಿ ಸಾಮಾಜಿಕ ಜಾಲತಾಣದ ಹಾಕಿರುವ ಸ್ಟೇಟಸ್ ಕುರಿತು ಸಾರ್ವಜನಿಕ ವಲಯದಲ್ಲಿ ಟೀಕೆ ವ್ಯಕ್ತವಾಗಿದ್ದವು.ಇದನ್ನು ಗಮನಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಡಿಡಿಪಿಐ ಕೊಪ್ಪಳ ಇವರು ಮುಖ್ಯ ನಳಿನಾಕ್ಷಿ ಹಾಗೂ ಪತ್ರೆಪ್ಪ ಇವರಿಗೆ ಕೆ ಸಿ ಎಸ್ ಆರ್ ನಿಯಮ ಉಲ್ಲಂಘಿಸಿದ ಕುರಿತು ನಿಮಗೆ ಯಾಕೆ ನೋಟಿಸ್ ನೀಡಬಾರದು ಎಂದು ಕಾರಣ ಕೇಳಿ ನೋಟಿಸ್ ನೀಡಲಾಗಿದೆ.
ಕೂಡಲೇ ನೋಟಿಸ್ ಗೆ ಉತ್ತರ ಕೊಡಬೇಕು ಇಲ್ಲದಿದ್ದರೆ ಏಕಮುಖವಾಗಿ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಿಕ್ಷಣ ಇಲಾಖೆಯ ನೊಟೀಸ್ ನಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ