ಪರಾಭವ ಬಳಿಕವೂ ನಾಯಕರ ಕೆಸರೆರೆಚಾಟ!
Team Udayavani, Jun 12, 2023, 4:03 PM IST
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ವಿಧಾನಸಭಾ ಚುನಾವಣೆ ಮುಗಿದು ಫಲಿತಾಂಶ ಪ್ರಕಟವಾಗಿ ಬರೋಬ್ಬರಿ ತಿಂಗಳು ಸಮೀಪಿಸುತ್ತಿದೆ. ಆದರೆ ರಾಜಕೀಯ ಪಕ್ಷಗಳ ನಾಯಕರ ಮಧ್ಯೆ ಮಾತ್ರ ಮಾತಿನ ಸಮರ ನಿಲ್ಲದೇ ಮುಂದುವರೆದಿದೆ.
ಹೌದು, ವಿಧಾನಸಭೆ ಚುನಾವಣೆ ಬಳಿಕ ಕ್ಷೇತ್ರದಲ್ಲಿ ಬೀಡುಬಿಟ್ಟು ತಮ್ಮ ತಮ್ಮ ಸೋಲಿನ ಬಗ್ಗೆ ಕಾರಣಗಳನ್ನು ಹುಡುಕುತ್ತಿರುವ ಪಕ್ಷಗಳ ನಾಯಕರು, ಈಗ ಪರಸ್ಪರ ಆರೋಪ ಪ್ರತ್ಯಾರೋಪದಲ್ಲಿ ತೊಡಗಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಯಾರು ನಿರೀಕ್ಷಿಸದ ಫಲಿತಾಂಶ ಹೊರ ಬಿದ್ದು ಕಾಂಗ್ರೆಸ್ ಗೆಲುವಿನ ಕೇಕೆ ಹಾಕಿದರೆ, ಜೆಡಿಎಸ್ ಇದೇ ಮೊದಲ ಬಾರಿಗೆ ಕಳೆದ 4 ಬಾರಿ ಚುನಾವಣೆಯಲ್ಲಿ ಪಡೆದ ಮತದಾನಕ್ಕೆ ಹೋಲಿಸಿದರೆ ಈ ಬಾರಿ ಕಳಪೆ ಸಾಧನೆ ತೋರಿರುವುದು ಚರ್ಚೆಗೆ ಗ್ರಾಸವಾಗಿದೆ.
ಜೆಡಿಎಸ್-ಬಿಜೆಪಿ ಟಾಕ್ ವಾರ್: ಇದರ ಮಧ್ಯೆ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ನಾಯಕರು ಪರಸ್ಪರ ನಿಂದನೆಯಲ್ಲಿ ತೊಡಗಿ ಕೆಸರೆರೆಚಾಟದಲ್ಲಿ ತೊಡಗಿರುವುದು ಎದ್ದು ಕಾಣುತ್ತಿದೆ. ಮಾಜಿ ಸಚಿವ ಸುಧಾಕರ್ ತಂದೆ ಕೇಶವರೆಡ್ಡಿ ನಮ್ಮ ಸೋಲಿಗೆ ಜೆಡಿಎಸ್ ನಾಯಕರು ಕಾರಣ, ಅವರ ಷಡ್ಯಂತ್ರ ಎಂದು ಆರೋಪಿಸಿದರೆ, ಜೆಡಿಎಸ್ ಅದಕ್ಕೆ ಪ್ರತಿರೋಧವಾಗಿ ಸುಧಾಕರ್ ಅಧಿಕಾರದಲ್ಲಿದ್ದಾಗ ನಮ್ಮ ಕಾರ್ಯಕರ್ತರ ಮೇಲೆ ಹೆಚ್ಚು ಪೊಲೀಸ್ ಕೇಸ್, ರೌಡಿಶೀಟರ್ ಕೇಸ್ ದಾಖಲು ಮಾಡಿಸುತ್ತಿದ್ದರು. ಅದಕ್ಕೆ ಸ್ಥಳೀಯ ಕಾರ್ಯಕರ್ತರು ಸುಧಾಕರ್ರನ್ನು ಸೋಲಿಸಲು ಕಾಂಗ್ರೆಸ್ಗೆ ಮತ ಹಾಕಿರಬಹುದೆಂದು ಹೇಳುವ ಮೂಲಕ ಬಿಜೆಪಿ ನಾಯಕರಿಗೆ ಟಾಂಗ್ ನೀಡುತ್ತಿದ್ದಾರೆ. ಉಳಿದ ಕ್ಷೇತ್ರಗಳಲ್ಲಿ ಕೂಡ ಸೋತ ಅಭ್ಯರ್ಥಿಗಳು ಸೋಲಿನ ಹುಡುಕಾಟದಲ್ಲಿ ತೊಡಗಿ ಗೆದ್ದ ಅಭ್ಯರ್ಥಿಗಳ ವಿರುದ್ಧ ಆರೋಪ, ಪ್ರತ್ಯಾರೋಪದಲ್ಲಿ ತೊಡಗಿದ್ದಾರೆ. ಚಿಂತಾವಣಿಯಲ್ಲಿ ಜೆಡಿಎಸ್ ಮಾಜಿ ಶಾಸಕ ಜೆ.ಕೆ. ಕೃಷ್ಣಾರೆಡ್ಡಿ ಕೂಡ ಅಲ್ಪಸಂಖ್ಯಾತರು ನಮ್ಮ ಕೈ ಹಿಡಿಯಲಿಲ್ಲ ಎಂದು ಪರೋಕ್ಷವಾಗಿ ಹೇಳಿಕೆ ಕೊಟ್ಟಿದ್ದಾರೆ.
ಗೌರಿಬಿದನೂರಲ್ಲಿ ಹಣದ ಹೊಳೆ ಹರಿಯಿತು ಎಂದು ಶಾಸಕ ಪುಟ್ಟಸ್ವಾಮಿಗೌಡರ ಗೆಲುವಿನ ಬಗ್ಗೆ ಪರಾಜಿತ ಅಭ್ಯರ್ಥಿ ಎನ್.ಎಚ್. ಶಿವಶಂಕರರೆಡ್ಡಿ ಹೇಳುತ್ತಿದ್ದಾರೆ. ಶಿಡ್ಲಘಟ್ಟದಲ್ಲಿ ನಾಯಕರ ನಡುವೆ ಶೀತಲಸಮರ ತಾರಕಕ್ಕೇರಿದೆ. ಆತ್ಮಾವಲೋಕನ ಸಭೆ ರಣಾಂಗಣವಾಗಿ ಮಾರ್ಪಟ್ಟು ಕೈ ಕಾರ್ಯಕರ್ತರ ನಡುವೆ ಕುರ್ಚಿ ಎಸೆಯುವ ಹಂತಕ್ಕೆ ಗಲಾಟೆ ನಡೆದಿದೆ. ಹೀಗೆ ಜಿಲ್ಲೆಯಲ್ಲಿ ಚುನಾವಣೆ ಮುಗಿದರೂ ಸೋತ, ಗೆದ್ದ ನಾಯಕರ ನಡುವೆ ಮಾತಿನ ಸಮರ ಮುಂದುವರೆದಿವೆ.
ಸುಧಾಕರ್ ವಿರುದ್ಧ ಎಂಟಿಬಿ ನಾಗರಾಜ್ ವಾಗ್ಧಾಳಿ: ಇತ್ತೀಚೆಗೆ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಪಕ್ಷದ ಆಂತರಿಕ ಸಭೆಯಲ್ಲಿ ನನ್ನ ಸೋಲಿಗೆ ಚಿಕ್ಕಬಳ್ಳಾಪುರ ಡಾ.ಕೆ.ಸುಧಾಕರ್ ಕಾರಣ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ಆರೋಪಿಸಿದ್ದಾರೆ. ಅಲ್ಲದೇ ಹೊಸಕೋಟೆಯಲ್ಲಿ ನಡೆದ ಆತ್ಮಾವಲೋಕನ ಸಭೆಯಲ್ಲಿ ನೇರವಾಗಿ, ಆರೋಗ್ಯ ಸಚಿವರಾಗಿದ್ದ ಡಾ.ಕೆ.ಸುಧಾಕರ್ ಮೇಲೆ ಬಾಣ ಬಿಟ್ಟು ತಮ್ಮ ಸೋಲಿಗೆ ಸುಧಾಕರ್ ಕಾರಣ ಹಾಗೂ ಬೊಮ್ಮಾಯಿ ಕಾರಣ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಆ ಮೂಲಕ ತಮ್ಮ ಸೋಲಿನ ಬಗ್ಗೆ ಮೌನ ಮುದಿರು ಮಾತನಾಡಿರುವ ಎಂಟಿಬಿ ನಾಗರಾಜ್, ಒಂದು ಕಾಲಕ್ಕೆ ತುಂಬ ಆಪ್ತರಾಗಿದ್ದ ಡಾ.ಕೆ. ಸುಧಾಕರ್ ವಿರುದ್ಧ ಕೆಂಡಮಂಡಲ ಆಗಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್
Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್
Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ