ತೇಜಸ್ವಿ ಕಥೆಯ ‘ಡೇರ್ ಡೆವಿಲ್ ಮುಸ್ತಫಾ’ ಸಿನಿಮಾಗೆ ತೆರಿಗೆ ವಿನಾಯತಿ ಘೋಷಿಸಿದ ಸಿದ್ದರಾಮಯ್ಯ
Team Udayavani, Jun 15, 2023, 11:45 AM IST
ಬೆಂಗಳೂರು: ಪ್ರಸಿದ್ಧ ಲೇಖಕ ಪೂರ್ಣಚಂದ್ರ ತೇಜಸ್ವಿ ಅವರ ಕಥೆ ಆಧಾರಿತ ‘ಡೇರ್ ಡೆವಿಲ್ ಮುಸ್ತಫಾ’ ಸಿನಿಮಾಗೆ ತೆರಿಗೆ ವಿನಾಯತಿ ಘೋಷಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಗ್ಗೆ ಆದೇಶ ಹೊರಡಿಸಿದ್ದಾರೆ.
ಪೂರ್ಣಚಂದ್ರ ತೇಜಸ್ವಿ ಅವರ ಕಥೆಯೊಂದನ್ನು ಆಯ್ದು ನಿರ್ದೇಶಕ ಶಶಾಂಕ್ ಸೋಗಲ್ ಅವರು ‘ಡೇರ್ ಡೆವಿಲ್ ಮುಸ್ತಫಾ’ ಚಿತ್ರವನ್ನು ಮಾಡಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ‘ಡೇರ್ ಡೆವಿಲ್ ಮುಸ್ತಫಾ’ ಸಿನಿಮಾವು ನೋಡುಗರ ವಲಯದಲ್ಲಿ ಮೆಚ್ಚುಗೆ ಗಳಿಸಿದೆ.
ಚಿತ್ರದ ತಂಡವು ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದು ತೆರಿಗೆ ವಿನಾಯತಿಗೆ ಮನವಿ ಮಾಡಿತ್ತು. ಕೋಮುಸಾಮರಸ್ಯ ಮತ್ತು ಭಾವೈಕ್ಯತೆಯ ಸಂದೇಶ ಸಾರುವ ಸಿನಿಮಾವನ್ನು ಇನ್ನಷ್ಟು ಜನರು ಮತ್ತು ಶಾಲಾ ಮಕ್ಕಳು ನೋಡಲು ಸಹಕಾರಿಯಾಗುವಂತೆ ಮಾಡಲು ತೆರಿಗೆ ವಿನಾಯತಿ ಕಲ್ಪಿಸಬೇಕು ಎಂದು ಮನವಿ ಮಾಡಿದ್ದರು. ಇದಕ್ಕೆ ಇದೀಗ ಸಿಎಂ ಸಿದ್ದರಾಮಯ್ಯ ಅವರು ಸಹಮತ ಸೂಚಿಸಿದ್ದಾರೆ.
ಇದನ್ನೂ ಓದಿ:Bollywood: “ಈತನ ಸಿನಿಮಾದಲ್ಲಿ ಸಾವಿನ ದೃಶ್ಯವನ್ನು ಮಾಡಲು ಬಯಸುತ್ತೇನೆ”: ಅನುರಾಗ್ ಕಶ್ಯಪ್
ಚಿತ್ರದಲ್ಲಿ ಆಶಿತ್, ಪೂರ್ಣಚಂದ್ರ ತೇಜಸ್ವಿ, ಆದಿತ್ಯ ಅಶ್ರಿ ಮುಂತಾದ ನಟರು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ
Priyanka Kharge: ಬಿಜೆಪಿ ನಾಯಕರು ಹಾಸನಕ್ಕೆ ಏಕೆ ಕಾಲಿಡುತ್ತಿಲ್ಲ; ಪ್ರಿಯಾಂಕ್ ಪ್ರಶ್ನೆ
Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !
Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್
Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
Chikkaballapur: ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ, ರಕ್ಷಣೆಗೆ ಹೋದವ ಸಾವು
Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ
Priyanka Kharge: ಬಿಜೆಪಿ ನಾಯಕರು ಹಾಸನಕ್ಕೆ ಏಕೆ ಕಾಲಿಡುತ್ತಿಲ್ಲ; ಪ್ರಿಯಾಂಕ್ ಪ್ರಶ್ನೆ
Goa; ಡ್ರಗ್ಸ್ ಜಾಲ ಭೇದಿಸಿದ ಪೊಲೀಸರು: ವಿದೇಶಿ ಯುವತಿ ಬಂಧನ
ಮೀಸಲಾತಿ ವ್ಯವಸ್ಥೆ ರದ್ದು ಮಾಡಲು ಬಿಜೆಪಿ ದೃಢಸಂಕಲ್ಪ: ಲಾಲು