ಮಾಗಡಿಯಲ್ಲಿ ಕಡ್ಡಾಯವಾಗಿ ಪ್ಲಾಸ್ಟಿಕ್‌ ಬ್ಯಾನ್‌ ಆಗಲಿ


Team Udayavani, Jun 15, 2023, 4:14 PM IST

ಮಾಗಡಿಯಲ್ಲಿ ಕಡ್ಡಾಯವಾಗಿ ಪ್ಲಾಸ್ಟಿಕ್‌ ಬ್ಯಾನ್‌ ಆಗಲಿ

ಮಾಗಡಿ: ಪಟ್ಟಣವನ್ನು ಪ್ಲಾಸ್ಟಿಕ್‌ ಮುಕ್ತವಾಗಿಸಬೇಕು ಎಂದು ಪುರಸಭೆ ಅಧಿಕಾರಿಗಳಿಗೆ ಶಾಸಕ ಎಚ್‌.ಸಿ.ಬಾಲಕೃಷ್ಣ ತಾಕೀತು ಮಾಡಿದರು.

ಪಟ್ಟಣದ ಪುರಸಭೆಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಪಟ್ಟಣದಲ್ಲಿ ಎಲ್ಲಂದರಲ್ಲಿ ಪ್ಲಾಸ್ಟಿಕ್‌ ಕವರ್‌ಗಳ ರಾಶಿಗಳು ಕಂಡು ಬರುತ್ತಿದೆ. ಹೀಗಾಗಿ ಪಟ್ಟಣದಲ್ಲಿ ಕಡ್ಡಾಯವಾಗಿ ಪ್ಲಾಸ್ಟಿಕ್‌ ಬ್ಯಾನ್‌ ಆಗಬೇಕು. ಸ್ವತ್ಛತೆ ಕಾಪಾಡುವ ಮೂಲಕ ತಿಂಗಳೊಳಗೆ ಪ್ಲಾಸ್ಟಿಕ್‌ ಮುಕ್ತ ಮಾಗಡಿಯನ್ನಾಗಿಸಲು ಅಧಿಕಾರಿಗಳು, ಸಿಬ್ಬಂದಿ ವರ್ಗ ಕಾರ್ಯೋನ್ಮಕರಾಗಬೇಕು ಎಂದರು.

ಪಟ್ಟಣದಲ್ಲಿ ಎಷ್ಟು ಮನೆಗಳಿವೆ ಎಂಬುದನ್ನು ಪಟ್ಟಿ ಮಾಡಿ ನಂಬರ್‌ ಪ್ಲೇಟ್‌ ಅಳವಡಿಸಲು ಕ್ರಮ ವಹಿಸಬೇಕು. ಮನಸ್ಸಿಲ್ಲದೆ ಕೆಲಸ ನಿರ್ವಹಿಸಿದರೆ ಕೆಲಸ ಸಮರ್ಪಕವಾಗಿರುವುದಿಲ್ಲ, ಒಳ್ಳೆ ಮನಸ್ಸಿನಿಂದ ಕೆಲಸ ಮಾಡಬೇಕು. ಇಲ್ಲದಿದ್ದರೆ ಅಮಾನತು ಎದುರಿಸಲು ಸಿದ್ಧರಾಗಿ ಎಂದರು.

ಕೆಎಂಆರ್‌ಪಿಯಲ್ಲಿ ಭ್ರಷ್ಟಾಚಾರ: ಪಟ್ಟಣದಲ್ಲಿ ಸುಮಾರು 28 ಕೋಟಿರೂ ವೆಚ್ಚದಲ್ಲಿ ದಿನದ 24/7 ಕುಡಿವ ನೀರಿನ ಪೂರೈಕೆಗೆ ಕಾಮಗಾರಿ ಕೈಗೊಳ್ಳಲಾಗಿದೆ. ಈ ಯೋಜನೆ ಕುರಿತು ಪುರಸಭೆಯಲ್ಲಿ ಮಾಹಿತಿಯೇ ಇಲ್ಲ. ಎಂಜಿನಿಯರ್‌ ಮತ್ತು ಗುತ್ತಿಗೆದಾರರು ಸೇರಿ ನೀರು ಕುಡಿದಂತೆ ಹಣ ನುಂಗಿದ್ದಾರೆಯೇ ಹೊರೆತು, ಮಾಗಡಿ ಜನ ಮಾತ್ರ ದಿನಪೂರ್ತಿ ನೀರು ಕುಡಿಯಲು ಸಾಧ್ಯವಾಗಿಲ್ಲ, ಈ ಯೋಜನೆಯ ಭ್ರಷ್ಟಾಚಾರ ಕುರಿತು ಪುರಸಭೆ ಕಚೇರಿಗೆ ಮುಂದಿನ ಮಂಗಳವಾರ ಆಗಮಿಸಿ ಸಂಪೂರ್ಣ ವರದಿ ನೀಡುವಂತೆ ಉನ್ನತ ಅಧಿಕಾರಿಗಳಿಗೆ ದೂರವಾಣಿ ಮೂಲಕವೇ ಶಾಸಕರು ತರಾಟೆಗೆ ತೆಗೆದುಕೊಂಡರು.

ಪುರಸಭೆ ಅಂಗಡಿ ಮಳಿಗೆ ಬಹಿರಂಗ ಹರಾಜು: ಪಟ್ಟಣದಲ್ಲಿ ಇರುವ ಪುರಸಭೆ ಅಂಗಡಿ ಮಳಿಗೆ ಬಾಡಿಗೆಯ ಅವಧಿ ಮುಗಿದಿದ್ದು, ಬಹಿರಂಗ ಹರಾಜು ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಾಧಿಕಾರಿಗಳಿಗೆ ಶಾಸಕರು ಸೂಚಿಸಿದರು. ಇರುವವರನ್ನೇ ಮುಂದುವರಿಸಲು ಅವಕಾಶವಿಲ್ಲ, ಬಹಿರಂಗ ಹರಾಜು ಮೂಲಕವೇ ಮಳಿಗೆ ಪಡೆಯಬಹುದು ಎಂದರು.

ಆಶ್ರಯ ನಿವೇಶನ ಹಂಚಿಕೆ: ಪುರಸಭೆ ನಿರ್ಮಿಸಿರುವ ಸುಮಾರು 500 ಆಶ್ರಯ ನಿವೇಶನಗಳಿದ್ದು, ಹಲವು ವರ್ಷಗಳಿಂದ ಇರುವ ಜನರಿಗೆ ಪಟ್ಟಿ ಮಾಡಿ ಅರ್ಹತೆ ಆಧಾರದ ಮೇಲೆ ನಿವೇಶನ ಹಂಚಿಕೆ ಮಾಡಲು ಕ್ರಮ ವಹಿಸುವಂತೆ ಮುಖ್ಯಾಧಿಕಾರಿಗೆ ಶಾಸಕರು ಸೂಚಿಸಿದರು. ಕುರಿ ಕೋಳಿ ಮಾಂಸದ ಅಂಗಡಿಗಳು ಎಲ್ಲಂದರಲ್ಲಿ ತಲೆ ಎತ್ತುತ್ತಿವೆ ಎಂದು ಸದಸ್ಯರು ಶಾಸಕರ ಗಮನಕ್ಕೆ ತಂದರು.

ಎಲ್ಲ ಒಂದೆಡೆ ಸಿಗುವಂತೆ ಖಸಾಯಿಖಾನೆ ಸ್ಥಾಪಿಸಲು ಕ್ರಮ ವಹಿಸಲು ಯೋಜನೆ ರೂಪಿಸಲಾಗುವುದು. ಕೊಳಚೆ ನಿರ್ಮೂಲನೆ ಮಂಡಲಿ ನಿರ್ಮಿಸಿರುವ ಮನೆ ಇನ್ನೂ ಪೂರ್ಣಗೊಂಡಿಲ್ಲ, ಈಗಾಗಲೇ ಬಹುತೇಕ ಬಡವರಿಗೆ ಮನೆ ಹಂಚಿಕೆಯಾಗಿವೆ. ಆದರೂ, ಪೂರ್ಣಗೊಳ್ಳದ ಕಾರಣ ಬಡವರ ಬದುಕು ಡೋಲಾಯಮಾನವಾಗಿದೆ ಎಂದು ಹತ್ತಾರು ಪಲಾನುಭವಿಗಳು ಶಾಸಕರ ಗಮನಕ್ಕೆ ತಂದರು. ಶೀಘ್ರದಲ್ಲಿಯೇ ಮನೆಗಳನ್ನು ಪೂರ್ಣಗೊಳಿಸುವಂತೆ ಶಾಸಕರು ಮಂಡಳಿ ಅಧಿಕಾರಿ ಕುಮಾರ್‌ ಈಶ್ವರ್‌ಗೆ ತಾಕೀತು ಮಾಡಿದರು.

ಸಿಬ್ಬಂದಿಗಳ ಕೊರತೆಯಿದೆ: ಮುಖ್ಯಾಧಿಕಾರಿ ಕೃಷ್ಣಪ್ರಸಾದ್‌ ಮಾತನಾಡಿ, ಪುರಸಭೆಯಲ್ಲಿ ಎಂಜಿನಿಯರ್‌ ಹಾಗೂ ಸಿಬ್ಬಂದಿಗಳ ಕೊರತೆಯಿದೆ. ಹುದ್ದೆ ಭರ್ತಿಗೆ ಸರ್ಕಾರದಲ್ಲಿ ಚರ್ಚಿಸುವಂತೆ ಶಾಸಕರಲ್ಲಿ ಮನವಿ ಮಾಡಿದರು. ಇದಕ್ಕೆ ಸಿಬ್ಬಂದಿಗಳಿಲ್ಲದಿದ್ದರೆ ಹೊರಗುತ್ತಿಗೆ ಆದಾರದ ಮೇಲೆ ಸಿಬ್ಬಂದಿ ನೇಮಕ ಮಾಡಿಕೊಳ್ಳಲು ಅವಕಾಶವಿದ್ದರೆ ಕ್ರಮ ಜರುಗಿಸಿ ಮೇಲಾಧಿಕಾರಿಗಳಿಗೆ ಶಿಪಾರಸು ಮಾಡಿದರೆ ಚರ್ಚಿಸುವುದಾಗಿ ಶಾಸಕರು ಪ್ರತಿಕ್ರಿಯಿಸಿದರು. ಪುರಸಭಾ ಸದಸ್ಯ ರಂಗಹನುಮಯ್ಯ, ಎಚ್‌. ಜೆ.ಪುರುಷೋತ್ತಮ್‌, ಶಿವಕುಮಾರ್‌,ರಿಯಾಜ್‌, ಭಾಗ್ಯಮ್ಮ ಹೇಮಲತಾ, ಮಮತಾ, ಶಿವರುದ್ರಮ್ಮ, ಅನಿಲ್‌ಕುಮಾರ್‌,ರೇಖಾ, ಎಂಜಿನಿಯರ್‌ ಪ್ರಶಾಂತ್‌ ಹಾಗೂ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Revanna 2

Parappana Agrahara Central Prison; ಸಾಮಾನ್ಯರಂತೆ ದಿನ ಕಳೆದ ರೇವಣ್ಣ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

1-wqeeqw

K. Vasantha Bangera; ಬೆಳ್ತಂಗಡಿಯ ಬಂಗಾರ ಕೇದೆಯ ಮಣ್ಣಲ್ಲಿ ಲೀನ; ಸಕಲ ಸರಕಾರಿ ಗೌರವ

1-qwewqwqe

IPL;ಪಂಜಾಬ್ ವಿರುದ್ಧ 60 ರನ್ ಗಳ ಗೆಲುವು ಸಾಧಿಸಿದ ಆರ್ ಸಿಬಿ: ಪ್ಲೇ ಆಫ್ ಆಸೆ ಜೀವಂತ

suicide

Heatstroke; ಬಸವಕಲ್ಯಾಣದಲ್ಲಿ ಬಿಸಿಲಿನ ಝಳಕ್ಕೆ ಕಾರ್ಮಿಕ‌ ಸಾವು‌?

1-ww-ewq

SSLC Result; ಜ್ಞಾನಸುಧಾ ಕಾರ್ಕಳ ಶೇ. 100 ಫ‌ಲಿತಾಂಶ: ಸಹನಾ ರಾಜ್ಯಕ್ಕೆ ತೃತೀಯ

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಾಸಕ ಇಕ್ಬಾಲ್ ಹುಸೇನ್ ವಿಡಿಯೋ ವೈರಲ್ ಕೇಸ್: ಇಬ್ಬರ ಬಂಧನ

Ramanagara ಶಾಸಕ ಇಕ್ಬಾಲ್ ಹುಸೇನ್ ವಿಡಿಯೋ ವೈರಲ್ ಕೇಸ್: ಇಬ್ಬರ ಬಂಧನ

ಕನಕಪುರದಿಂದ ಬೆಂಗಳೂರಿಗೆ ಹೊರಟಿದ್ದ KSRTC ಬಸ್ ಪಲ್ಟಿ; ನಾಲ್ವರಿಗೆ ಗಾಯ

ಕನಕಪುರದಿಂದ ಬೆಂಗಳೂರಿಗೆ ಹೊರಟಿದ್ದ KSRTC ಬಸ್ ಪಲ್ಟಿ; ನಾಲ್ವರಿಗೆ ಗಾಯ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

1-wqeqweqeqw

Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Revanna 2

Parappana Agrahara Central Prison; ಸಾಮಾನ್ಯರಂತೆ ದಿನ ಕಳೆದ ರೇವಣ್ಣ

1-wqewee

Saudi Arabia; ಭೂಮಿ ನೀಡಲು ಒಪ್ಪದಿದ್ದರೆ ಹತ್ಯೆ: ಬಿಬಿಸಿ ವರದಿ

MOdi (3)

Hate speech ಪ್ರಚಾರ: ಮೋದಿ ವಿರುದ್ಧ ಕ್ರಮಕ್ಕೆ ಸುಪ್ರೀಂನಲ್ಲಿ ರಿಟ್‌ ಅರ್ಜಿ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

Himanth-Bisw

BJP ಗೆದ್ದರೆ 5 ಲಕ್ಷ ಜನರಿಗೆ ಅಯೋಧ್ಯೆ ರಾಮನ ದರ್ಶನ: ಹಿಮಂತ್‌ ಬಿಸ್ವಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.