ದರ್ಗಾ ತೆರವಿಗೆ ನೋಟಿಸ್: ಖಾಕಿ ಮೇಲೆ ಕಲ್ಲು ತೂರಾಟ ನಡೆಸಿ, ವಾಹನಕ್ಕೆ ಬೆಂಕಿ; ಓರ್ವ ಸಾವು
Team Udayavani, Jun 17, 2023, 9:33 AM IST
ಗುಜರಾತ್: ಅಕ್ರಮವಾಗಿ ದರ್ಗಾ ಕಟ್ಟಡವನ್ನು ಕಟ್ಟಿದ ಹಿನ್ನೆಲೆ ತೆರವುಗೊಳಿಸಲು ನೋಟಿಸ್ ನೀಡಲು ಬಂದ ಸ್ಥಳೀಯ ಆಡಳಿತ ಅಧಿಕಾರಿಗಳು ಹಾಗೂ ಪೊಲೀಸರ ಮೇಲೆ ಕಲ್ಲು ತೂರಾಟ ನಡೆದಿರುವ ಘಟನೆ ಗುಜರಾತ್ ನ ಜುನಾಗಢ್ ನಲ್ಲಿ ಶುಕ್ರವಾರ (ಜೂ.16 ರಂದು) ರಾತ್ರಿ ನಡೆದಿರುವುದು ವರದಿಯಾಗಿದೆ.
ಜುನಾಗಢ್ ಮುನ್ಸಿಪಲ್ ಕಾರ್ಪೊರೇಶನ್ ಅಧಿಕಾರಿಗಳು ದರ್ಗಾವನ್ನು ಅಕ್ರಮವಾಗಿ ಕಟ್ಟಲಾಗಿದೆ. ತೆರವುಗೊಳಿಸಲು ಗಡುವು ನೀಡುವ ನೋಟಿಸ್ ನ್ನು ಅಂಟಿಸಲು ಬಂದಿದ್ದಾರೆ. ಈ ವೇಳೆ ಪೊಲೀಸರು ಜೊತೆಯಾಗಿ ಬಂದಿದ್ದಾರೆ. ವಿಚಾರ ತಿಳಿದು ಸುಮಾರು 200-300 ಜನರು ದರ್ಗಾಕ್ಕೆ ಬಂದಿದ್ದಾರೆ.
ಇದನ್ನೂ ಓದಿ: Hot News: ಬಿಗ್ ಬಾಸ್ ಓಟಿಟಿ-2 ನಲ್ಲಿ ಸ್ಪರ್ಧಿಯಾಗಿ ಮಾಜಿ ನೀಲಿ ಚಿತ್ರತಾರೆ ಮಿಯಾ ಖಲೀಫಾ?
ಅಧಿಕಾರಿಗಳು ನೋಟಿಸ್ ನೀಡಲು ಬರುವ ವೇಳೆ ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ದರ್ಗಾ ತೆರವಿಗೆ ವಿರೋಧ ವ್ಯಕ್ತಪಡಿಸಿ ಜನ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಆಕ್ರೋಶಗೊಂಡು ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ. ಕಲ್ಲು ತೂರಾಟದಿಂದ ಡಿಎಸ್ ಪಿ ಸೇರಿದಂತೆ ಹಲವು ಪೊಲೀಸ್ ಸಿಬ್ಬಂದಿಗಳು ಗಾಯಗೊಂಡಿದ್ದಾರೆ.
ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, 174 ಮಂದಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ವರದಿ ತಿಳಿಸಿದೆ.
ದರ್ಗಾ ತೆರವು ವಿಚಾರ ಹಿಂಸೆಗೆ ತಿರುಗಿದ್ದು, ಘಟನಾ ಸ್ಥಳಕ್ಕೆ ಇನ್ನಷ್ಟು ಪೊಲೀಸ್ ಪಡೆ ಬಂದು ಆಶ್ರುವಾಯುಗಳನ್ನು ಬಳಸಿ ಪರಿಸ್ಥಿತಿಯನ್ನು ನಿಯಂತ್ರಿಸಿದೆ.
ದರ್ಗಾ ಕಟ್ಟಡವನ್ನು ಅಕ್ರಮವಾಗಿ ಕಟ್ಟಲಾಗಿದೆ. ಸರಿಯಾದ ರೀತಿಯಲ್ಲಿ ನಿರ್ಮಾಣ ಮಾಡಿದ್ದರೆ ಅದಕ್ಕೆ ಸಂಬಂಧಪಟ್ಟ ಸೂಕ್ತ ದಾಖಲೆಗಳನ್ನು ನೀಡಲು 5 ದಿನಗಳ ಗಡುವನ್ನು ಸ್ಥಳೀಯ ಆಡಳಿತ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mass sick leave; ವಜಾಗೊಂಡ ಎಲ್ಲಾ ಏರ್ ಇಂಡಿಯಾ ಎಕ್ಸ್ಪ್ರೆಸ್ ಕ್ಯಾಬಿನ್ ಸಿಬಂದಿ ಮರುನೇಮಕ
Goa; ಚುನಾವಣೆ ಸಂದರ್ಭ ಪ್ರವಾಸೋದ್ಯಮಕ್ಕೆ ಭಾರಿ ಹೊಡೆತ
PoK ಭಾರತದ ಭಾಗ; ಮರಳುವಿಕೆ ಖಚಿತಪಡಿಸಿಕೊಳ್ಳಲು ಎಲ್ಲಾ ಪಕ್ಷಗಳು ಬದ್ಧವಾಗಿವೆ: ಜೈಶಂಕರ್
Sivakasi ಪಟಾಕಿ ಘಟಕದಲ್ಲಿ ಸ್ಪೋಟ; ಐವರು ಮಹಿಳೆಯರು ಸೇರಿ 8 ಮಂದಿ ಸಾವು
Pitroda’s remarks; ದೆಹಲಿ ಕಾಂಗ್ರೆಸ್ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Parappana Agrahara Central Prison; ಸಾಮಾನ್ಯರಂತೆ ದಿನ ಕಳೆದ ರೇವಣ್ಣ
Saudi Arabia; ಭೂಮಿ ನೀಡಲು ಒಪ್ಪದಿದ್ದರೆ ಹತ್ಯೆ: ಬಿಬಿಸಿ ವರದಿ
Hate speech ಪ್ರಚಾರ: ಮೋದಿ ವಿರುದ್ಧ ಕ್ರಮಕ್ಕೆ ಸುಪ್ರೀಂನಲ್ಲಿ ರಿಟ್ ಅರ್ಜಿ
Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್
BJP ಗೆದ್ದರೆ 5 ಲಕ್ಷ ಜನರಿಗೆ ಅಯೋಧ್ಯೆ ರಾಮನ ದರ್ಶನ: ಹಿಮಂತ್ ಬಿಸ್ವಾ