Muddebihal; 45 ಗೋವುಗಳ ರಕ್ಷಣೆ; ಲಾರಿ ವಶ; ಎಫ್ಐಆರ್ ದಾಖಲು
Team Udayavani, Jun 17, 2023, 2:20 PM IST
ಮುದ್ದೇಬಿಹಾಳ: ಕುಷ್ಠಗಿ ಭಾಗದಿಂದ ಕಲಬುರ್ಗಿಯತ್ತ ಲಾರಿಗಳಲ್ಲಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಸಂಶಯದ ಮೇಲೆ 45 ಗೋವು(ಆಕಳು) ಲಾರಿ ಸಮೇತ ವಶಪಡಿಸಿಕೊಂಡಿರುವ ಇಲ್ಲಿನ ಪೊಲೀಸರು ಲಾರಿ ಚಾಲಕರು, ಲಾರಿಯಲ್ಲಿದ್ದ ಗೋವು ಸಾಗಾಣಿಕೆದಾರ ಮೇಲೆ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಕೃಷ್ಣಾ ನದಿಯ ಸೇತುವೆ ದಾಟಿ ತಂಗಡಗಿ ಗ್ರಾಮದ ಮೂಲಕ ಇವುಗಳನ್ನು ಸಾಗಿಸುತ್ತಿರುವ ಮಾಹಿತಿ ಅರಿತ ವಿಶ್ವ ಹಿಂದು ಪರಿಷತ್, ಭಜರಂಗ ದಳ ಸೇರಿದಂತೆ ಹಿಂದು ಪರ ಸಂಘಟನೆಗಳ ಕಾರ್ಯಕರ್ತರು ವಾಹನ ತಡೆದು ವಿಚಾರಣೆ ನಡೆಸಿದಾಗ ಇವುಗಳನ್ನು ಕಸಾಯಿ ಖಾನೆಗೆ ಸಾಗಿಸುತ್ತಿದ್ದ ಮಾಹಿತಿ ಗೊತ್ತಾಗಿ ಕಾರ್ಯಕರ್ತರ ಆಗ್ರಹದ ಮೇರೆಗೆ ಈ ಪ್ರಕರಣ ದಾಖಲಾಗಿದೆ.
ಗದ್ದಲ ವಾಗ್ವಾದ:
ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದನ್ನು ತಿಳಿದ ಒಂದು ಕೋಮಿನ ಹಲವು ಯುವಕರು ಗುಂಪಾಗಿ ಪೊಲೀಸ್ ಠಾಣೆಗೆ ಬಂದು ತಕರಾರು ತೆಗೆದರು. ಪಿಎಸೈ ಅವರು ಎಲ್ಲರಿಗೂ ಬುದ್ದಿವಾದ ಹೇಳಿ, ಕಾನೂನಿನ ತಿಳಿವಳಿಕೆ ನೀಡಿದ ಮೇಲೆ ಅವರೆಲ್ಲ ಗೊಣಗುತ್ತಲೇ ಠಾಣೆಯಿಂದ ನಿರ್ಗಮಿಸಿದರು.
ಮಾನವೀಯತೆ:
ಗೋವುಗಳನ್ನು ತಂಗಡಗಿ, ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಇಳಿಸಿ ಹಿಂದು ಪರ ಸಂಘಟನೆಗಳ ಮುಖಂಡರು, ಪೊಲೀಸರು ಅವುಗಳಿಗೆ ಮೇವು, ನೀರು ಕೊಟ್ಟು ಮಾನವೀಯತೆ ತೋರಿದರು. ಸಧ್ಯ ಎಲ್ಲ ಗೋವುಗಳನ್ನು ಯಲಗೂರದಲ್ಲಿರುವ ಗೋಶಾಲೆಗೆ ಸಾಗಿಸಲು ವ್ಯವಸ್ಥೆ ಮಾಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura;ದೌರ್ಜನ್ಯದಿಂದ ನೊಂದು ದಯಾ ಮರಣಕ್ಕೆ ಮನವಿ ಸಲ್ಲಿಸಿದ ನಾಲ್ವರ ಕಟುಂಬ
Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್
Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ ಹತ್ಯೆ; ಆಪ್ತರ ಮೇಲೆ ಶಂಕೆ
Vijayapura;ದಲಿತರ ಭವನ ನಿರ್ಮಾಣಕ್ಕೆ ಮುಸ್ಲಿಮರ ವಿರೋಧ:ಪೊಲೀಸರ ಮಧ್ಯಸ್ಥಿಕೆ
ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ
MUST WATCH
ಹೊಸ ಸೇರ್ಪಡೆ
YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…
ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ
Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ
ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ
Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ