ಪಠ್ಯಕ್ಕೆ ಕೊಕ್…ನ್ಯೂಟನ್ ನ 3ನೇ ನಿಯಮ ಉಲ್ಲೇಖಿಸಿ ʼಕೈʼ ಗೆ ಸಾವರ್ಕರ್ ಮೊಮ್ಮಗ ತಿರುಗೇಟು!
ಸಾಮಾಜಿಕ ಜಾಲತಾಣದಲ್ಲಿ ಸಾವರ್ಕರ್ ಕುರಿತು ಬೇಕಾದಷ್ಟು ಲೇಖನಗಳು ಲಭ್ಯವಿದೆ.
Team Udayavani, Jun 17, 2023, 2:58 PM IST
ಪಣಜಿ: ಹಿಂದುತ್ವ ಸಿದ್ಧಾಂತ ಪ್ರತಿಪಾದಕ ವೀರ ಸಾವರ್ಕರ್ ಅವರ ಕುರಿತ ಪಠ್ಯವನ್ನು ತೆಗೆದುಹಾಕಲು ನಿರ್ಧರಿಸಿರುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಸಾವರ್ಕರ್ ಮೊಮ್ಮಗ ರಂಜಿತ್ ಸಾವರ್ಕರ್, ಇದು ಕಾಂಗ್ರೆಸ್ ಗೆ ತಿರುಗುಬಾಣವಾಗಲಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:‘ದೇವರ ಆಟ ಬಲ್ಲವರಾರು…’; 30 ದಿನಗಳಲ್ಲಿ ಎಲ್ಲಾ ಪ್ರಕ್ರಿಯೆ ಮುಗಿಸಿ ಬಿಡುಗಡೆ ಪ್ಲ್ರಾನ್
ಪಿಟಿಐ ಜತೆ ಮಾತನಾಡಿರುವ ರಂಜಿತ್ ಸಾವರ್ಕರ್ ಅವರು, ವೀರ ಸಾವರ್ಕರ್ ಕುರಿತ ಅಧ್ಯಾಯವನ್ನು ತೆಗೆದುಹಾಕುವ ಮೂಲಕ ಸಾವರ್ಕರ್ ಬಗ್ಗೆ ಕಲಿಯುವ ವಿದ್ಯಾರ್ಥಿಗಳ ಅವಕಾಶವನ್ನು ಕಸಿದುಕೊಳ್ಳಬಹುದೆಂದು ಕಾಂಗ್ರೆಸ್ ಭಾವಿಸಿದಂತಿದೆ. ಆದರೆ ವಿದ್ಯಾರ್ಥಿಗಳು ತುಂಬಾ ಬುದ್ಧಿವಂತರು ಎಂದು ತಿರುಗೇಟು ನೀಡಿದ್ದಾರೆ.
“ಸಾಮಾಜಿಕ ಜಾಲತಾಣದಲ್ಲಿ ಸಾವರ್ಕರ್ ಕುರಿತು ಬೇಕಾದಷ್ಟು ಲೇಖನಗಳು ಲಭ್ಯವಿದೆ. ಅಷ್ಟೇ ಅಲ್ಲ ಸಾವರ್ಕರ್ ಸ್ಮಾರಕ ಅವರ ಸಾಹಿತ್ಯವನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ. ಅದನ್ನು ನಾವು ಕನ್ನಡದಲ್ಲಿಯೂ ಪ್ರಕಟಿಸುತ್ತಿದ್ದೇವೆ ಎಂದು ರಂಜಿತ್ ಸಾವರ್ಕರ್ ತಿಳಿಸಿದ್ದಾರೆ.
ರಂಜಿತ್ ಸಾವರ್ಕರ್
ಪಠ್ಯ ಪುಸ್ತಕದಿಂದ ಸಾವರ್ಕರ್ ಅವರ ಅಧ್ಯಾಯವನ್ನು ತೆಗೆದುಹಾಕಿದ ಕೂಡಲೇ ಎಲ್ಲಾ ಮಾಹಿತಿಯನ್ನು ತೆಗೆದುಹಾಕಿದಂತಾಗುವುದಿಲ್ಲ. ಒಂದು ವೇಳೆ ನೀವು ಸಾವರ್ಕರ್ ಬಗ್ಗೆ ಹೆಚ್ಚು, ಹೆಚ್ಚು ಮರೆಮಾಚಿದಷ್ಟು, ಅದು ಇನ್ನಷ್ಟು ಪ್ರಚಲಿತಕ್ಕೆ ಬರುತ್ತದೆ. ಇದೊಂದು ನೈಸರ್ಗಿಕ ಪ್ರತಿಕ್ರಿಯೆಯಾಗಿದೆ ಎಂದು ರಂಜಿತ್ ನ್ಯೂಟನ್ಸ್ ನ ಮೂರನೇ ನಿಯಮವನ್ನು(ನ್ಯೂಟನ್ 3ನೇ ನಿಯಮದಲ್ಲಿ ಪ್ರತಿಯೊಂದು ಕ್ರಿಯೆಗೆ ಅದಕ್ಕೆ ಸಮನಾದ ಮತ್ತು ವಿರುದ್ಧವಾದ ಪ್ರತಿಕ್ರಿಯೆ ಇದ್ದೇ ಇರುತ್ತದೆ ಎಂಬುದಾಗಿದೆ) ಉಲ್ಲೇಖಿಸುವ ಮೂಲಕ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರ, ರಾಜ್ಯದಲ್ಲಿ 6ನೇ ಮತ್ತು 10ನೇ ತರಗತಿಯ ಕನ್ನಡ ಮತ್ತು ಸಮಾಜ ವಿಜ್ಞಾನ ಪಠ್ಯದಲ್ಲಿರುವ ವೀರ ಸಾವರ್ಕರ್ ಮತ್ತು ಕೆಬಿ ಹೆಡ್ಗೇವಾರ್ ಅವರ ಅಧ್ಯಾಯವನ್ನು ಪರಿಷ್ಕರಿಸಲು ಅನುಮತಿ ನೀಡಿತ್ತು.ಇದಕ್ಕೆ ಭಾರತೀಯ ಜನತಾ ಪಕ್ಷ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್
Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು
AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್
PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್