Kalaburagi;ಅಕ್ರಮ ಮರಳುಗಾರಿಕೆ ಪ್ರಕರಣ: ಸಿಪಿಐ, ಪಿಎಸ್ಐ, ಪೇದೆ ಅಮಾನತು
ಸುಮ್ಮನೆ ಬಿಡುವುದಿಲ್ಲ, ಅಕ್ರಮ ಸಹಿಸಲ್ಲ: ಗುಡುಗಿದ ಶಾಸಕ ಡಾ.ಅಜಯಸಿಂಗ್
Team Udayavani, Jun 17, 2023, 8:59 PM IST
ಕಲಬುರಗಿ: ಜೇವರ್ಗಿ ಮತಕ್ಷೇತ್ರದಲ್ಲಿ ನಡೆಯುತ್ತಿರುವ ಅಕ್ರಮ ಮರಳಗಾರಿಕೆ ಸಂಬಂಧ ನಿರ್ಲಕ್ಷ್ಯ ವಹಿಸಿರುವ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿರುವುದು ಮೊದಲ ಕ್ರಮವಾಗಿದೆ. ಈ ಘಟನೆಯ ಹಿಂದೆ ಇರುವ ವರು ಯಾರೇ ಆಗಿರಲಿ, ಎಷ್ಟೇ ಬಲಾಢ್ಯವಾಗಿರಲಿ ಸುಮ್ಮನೆ ಬಿಡುವುದಿಲ್ಲ ಎಂದು ಗುಡುಗಿದ್ದಾರೆ.ಶೀಘ್ರವೇ ಇಡೀ ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆಯೂ ನಡೆಸಲಾಗುವುದು ಎಂದು ಶಾಸಕ ಡಾ. ಅಜಯ ಸಿಂಗ್ ಉದಯವಾಣಿಗೆ ತಿಳಿಸಿದ್ದಾರೆ.
ಇದನ್ನೂ ಓದಿ: ಅಕ್ರಮ ಮರಳುಗಾರಿಕೆಗೆ ಪೇದೆ ಬಲಿ ಪ್ರಕರಣ: ಪ್ರಮುಖ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು
ಜೇವರ್ಗಿ ತಾಲೂಕಿನ ಹುಲ್ಲೂರು ಕ್ರಾಸ್ ಬಳಿಯಲ್ಲಿ ಗುರುವಾರ ಮರಳಿನ ಟ್ಯಾಕ್ಟರ್ ಹಾಯಿಸಿ ಪೇದೆ ಮಯೂರ್ ಬಲಿ ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜೇವರ್ಗಿ ಸಿಪಿಐ, ನೇಲೋಗಿ ಪಿಎಸ್ಐ, ಎಸ್ಪಿ ಕರ್ತವ್ಯ ನಿರ್ವಹಿಸುವ ಪೇದೆಯೊಬರನ್ನು ಅಮಾನತು ಮಾಡಲಾಗಿದೆ ಎಂದು ಎಸ್ಪಿ ಇಶಾಪಂತ್ ಹೇಳಿದ್ದಾರೆ.
ಮುಖ್ಯ ಪೇದೆ ಮಯೂರ್ ಬಲಿಯಾಗಿರುವ ಪ್ರಕರಣದಲ್ಲಿ ಜೇವರ್ಗಿ ಸಿಪಿಐ ಭೀಮನಗೌಡ ಬಿರಾದಾರ, ನೆಲೋಗಿ ಪಿಎಸ್ ಐ ಗೌತಮ್ ಹಾಗೂ ನೆಲೋಗಿ ಠಾಣೆಯಲ್ಲಿ ಎಸ್ಪಿ ಕರ್ತವ್ಯ ನಿರ್ವಹಿಸುವ ಪೇದೆ ರಾಜಶೇಖರ ಅವರನ್ನು ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್
Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್
Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ
Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ
ಲೈಂಗಿಕ ದೌರ್ಜನ್ಯ: ಸಾಕ್ಷ್ಯ ಸಂಗ್ರಹಕ್ಕೆ ಇನ್ಮುಂದೆ ಸುರಕ್ಷಿತ ಕಿಟ್ ಬಳಕೆ