ಅಕ್ರಮ ಗೋಸಾಗಾಟ; ಇಬ್ಬರ ಬಂಧನ
Team Udayavani, Jun 19, 2023, 5:12 AM IST
ಸುಳ್ಯ: ಅಕ್ರಮ ಗೋಸಾಗಾಟ ಅರೋಪದಲ್ಲಿ ಬೆಳ್ಳಾರೆ ಪೊಲೀಸರು ಇಬ್ಬರನ್ನು ಬಂಧಿಸಿದ ಹಾಗೂ ಇಬ್ಬರು ಪರಾರಿಯಾಗಿರುವ ಘಟನೆ ರವಿವಾರ ರಾತ್ರಿ ನಡೆದಿದೆ. ಮೂರು ಗಂಡು ಕರುಗಳು ಸೇರಿದಂತೆ ಏಳು ಜಾನುವಾರು, ಆಕ್ಟಿವಾ ಸ್ಕೂರ್ಟ, ಪಿಕಪ್ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಜೂ.18ರಂದು ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಮುವಪ್ಪೆ ಎಂಬಲ್ಲಿ ಬೆಳ್ಳಾರೆ ಪೊಲೀಸ್ ಠಾಣಾ ಪಿಎಸ್ಐ ಸುಹಾಸ್ ಆì ಹಾಗೂ ಸಿಬ್ಬಂದಿಗಳು ಕರ್ತವ್ಯ ದಲ್ಲಿದ್ದ ವೇಳೆ ಯಾವುದೇ ಪರವಾನಿಗೆ ಹೊಂದದ ಪಿಕಪ್ ವಾಹನ ನಂಬ್ರ ಕೆಎ21ಬಿ4460 ವಾಹನದಲ್ಲಿ ಕೇರಳದ ಕಸಾಯಿಖಾನೆಗೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವೇಳೆ ಅಕ್ರಮ ಗೋಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.
3 ಗಂಡು ಕರುಗಳ ಹಾಗೂ ಅಕ್ರಮ ಸಾಗಾಟಕ್ಕೆ ಬಳಿಸಿದ ಹೊಂಡಾ ಆಕ್ಟಿವಾ ಸ್ಕೂರ್ಟ ವಾಹನ, ಹಾಗೂ ಪಿಕಪ್ ವಾಹನ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದು ಇಬ್ಬರು ಆರೋಪಿಗಳಾದ ಇಸುಬು, ಹುಸೈನ್ ಎಂಬವರನ್ನು ಬಂಧಿಸಿದ್ದಾರೆ. ಇಬ್ಬರು ಆರೋಪಿಗಳಾದ ಕೃಷ್ಣಪ್ಪ ಮತ್ತು ಆಲಿ ಕೋನಡ್ಕ ಪರಾರಿಯಾಗಿದ್ದು,ಅವರ ವಿರುದ್ಧ ಕೇಸು ದಾಖಲಿಸಿಕೊಂಡಿದ್ದಾರೆ. ಇಸುಬು ಮನೆಯಲ್ಲಿದ್ದ 4 ಜಾನುವಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಬೆಳ್ಳಾರೆ ಪಿಎಸ್ಐ ಸುಹಾಸ್ ಹಾಗೂ ಸಿಬಂದಿ ಶ್ರೀಶೈಲ, ಮಂಜುನಾಥ್, ಸುಭಾಷ್ ಕಿತ್ತೂರ್, ಬಸವರಾಜ್ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ
MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ
Belthangady ಕಾಂಗ್ರೆಸ್ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ
Belthangady ವಿದ್ಯುತ್ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ
Bantwal; ರಿಕ್ಷಾ ಪಲ್ಟಿಯಾಗಿ ರಸ್ತೆಗೆ ಎಸೆಯಲ್ಪಟ್ಟ ಯುವಕ ಮೃತ್ಯು
MUST WATCH
ಹೊಸ ಸೇರ್ಪಡೆ
Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ
Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು
Bellary; ರಾಜ್ಯದ ಶಿಕ್ಷಣದ ಸ್ಥಿತಿ ಅಧೋಗತಿಗೆ ತಲುಪಿದೆ; ಎನ್.ರವಿಕುಮಾರ್
Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ
Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !