Adipurush; ಸಂಭಾಷಣೆಕಾರನಿಗೆ ಬೆದರಿಕೆ: ಮುಂಬಯಿ ಪೊಲೀಸರಿಂದ ಭದ್ರತೆ
CBFC ನಿರ್ಧಾರ ಕೈಗೊಂಡಿದೆ ಎಂದ ಅನುರಾಗ್ ಠಾಕೂರ್ ; ಲಕ್ನೋ ಸೇರಿ ವಿವಿಧೆಡೆ ಪ್ರತಿಭಟನೆ
Team Udayavani, Jun 19, 2023, 4:34 PM IST
ಮುಂಬಯಿ: ಆದಿಪುರುಷ್ ಚಿತ್ರದ ಸಂಭಾಷಣೆಕಾರ ಮನೋಜ್ ಮುಂತಾಶಿರ್ ಅವರಿಗೆ ಜೀವ ಬೆದರಿಕೆ ಬಂದ ಕಾರಣ ಮುಂಬೈ ಪೊಲೀಸರು ಭದ್ರತೆಯನ್ನು ಒದಗಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಅವರು ಚಿತ್ರದ ವಿವಾದದ ಕುರಿತಾಗಿ ಪ್ರತಿಕ್ರಿಯಿಸಿ ‘ಆದಿಪುರುಷ’ ಚಿತ್ರದಲ್ಲಿನ ಕೆಲವು ಡೈಲಾಗ್ಗಳ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ. ಸಿಬಿಎಫ್ಸಿ ಈ ಬಗ್ಗೆ ನಿರ್ಧಾರ ತೆಗೆದುಕೊಂಡಿದೆ. ಚಿತ್ರದ ನಿರ್ದೇಶಕ ಮತ್ತು ಸಂಭಾಷಣೆ ಬರಹಗಾರರು ಸಂಭಾಷಣೆಗಳನ್ನು ಬದಲಾಯಿಸುವ ಬಗ್ಗೆ ಮಾತನಾಡಿದ್ದಾರೆ. ಯಾರ ಭಾವನೆಗಳಿಗೂ ನೋವುಂಟು ಮಾಡುವ ಹಕ್ಕು ಯಾರಿಗೂ ಇಲ್ಲ” ಎಂದು ಹೇಳಿದ್ದಾರೆ.
ಆದಿಪುರುಷ್ ಚಿತ್ರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಗುಂಪು ಸೋಮವಾರ ಲಕ್ನೋದಲ್ಲಿ ಪ್ರತಿಭಟನೆ ನಡೆಸಿತು. ನಂತರ ಅವರನ್ನು ಹಜರತ್ಗಂಜ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಾಜಕೀಯ ಪಕ್ಷಗಳು ಸೇರಿ ವಿವಿಧ ವಲಯಗಳಿಂದ ವ್ಯಾಪಕ ವಿರೋಧ ವ್ಯಕ್ತವಾದ ಬಳಿಕ ಆಕ್ಷೇಪಾರ್ಹ ಸಂಭಾಷಣೆಗಳನ್ನು ಬದಲಿಸಲು ಚಿತ್ರತಂಡ ಒಪ್ಪಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Floor Test: ವಿಶ್ವಾಸ ಮತ ಸಾಬೀತಿಗೆ ಆಗ್ರಹಿಸಿ ರಾಜ್ಯಪಾಲರಿಗೆ ಪತ್ರ ಬರೆದ ದುಷ್ಯಂತ್ ಚೌಟಾಲ
Delhi Police; ಲಾರೆನ್ಸ್ ಬಿಷ್ಣೋಯ್-ಗೋಲ್ಡಿ ಬ್ರಾರ್ ಗ್ಯಾಂಗ್ ಗೆ ಸೇರಿದ 9 ಜನರ ಬಂಧನ
Mass Sick Leave… 30 ಸಿಬ್ಬಂದಿಗಳನ್ನು ವಜಾಗೊಳಿಸಿದ Air India Express
ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ
Sam Pitroda; ದಕ್ಷಿಣ ಭಾರತೀಯ ಜನತೆ ಆಫ್ರಿಕನ್ನರಂತೆ: ರಾಹುಲ್ ಆಪ್ತ