ಅಪ್ಪ ಬೈದಿದ್ದಕ್ಕೆ ಫ್ರೀ ಬಸ್ ನಲ್ಲಿ ಧರ್ಮಸ್ಥಳಕ್ಕೆ ತೆರಳಿದ್ದ ಪುತ್ರಿಯರು! 


Team Udayavani, Jun 20, 2023, 12:14 PM IST

ಅಪ್ಪ ಬೈದಿದ್ದಕ್ಕೆ ಫ್ರೀ ಬಸ್ ನಲ್ಲಿ ಧರ್ಮಸ್ಥಳಕ್ಕೆ ತೆರಳಿದ್ದ ಪುತ್ರಿಯರು! 

ಬೆಂಗಳೂರು: ಪೋಷಕರು ಚಾಕಲೇಟ್‌ ಖರೀದಿಗೆ ಹಣ ಕೊಡಲಿಲ್ಲ ಎಂದು ಕೋಪಗೊಂಡು ನಾಪತ್ತೆಯಾಗಿದ್ದ ಅಪ್ರಾಪ್ತ ಸಹೋದರರಿಯರು ಧರ್ಮಸ್ಥಳದಲ್ಲೇ ಪತ್ತೆಯಾಗಿದ್ದಾರೆ. ಬಳಿಕ ಪೊಲೀಸರು ಇಬ್ಬರನ್ನು ನಗರಕ್ಕೆ ಕರೆತಂದು ಪೋಷಕರಿಗೆ ಒಪ್ಪಿಸಿದ್ದಾರೆ.

9 ಮತ್ತು 11 ವರ್ಷದ ಸಹೋದರಿಯರು ಜೂ.16 ರಂದು ಮನೆಯಿಂದ ಹೊರ ಬಂದು ಕೋಣನಕುಂಟೆ ಸಮೀಪದ ಗೊಟ್ಟಿಗೆರೆ ಅಂಗಡಿಯೊಂದರಲ್ಲಿ ಚಾಕಲೇಟ್‌ ತೆಗೆದುಕೊಳ್ಳಲು ಹೋಗಿದ್ದರು. ಆದರೆ, ಅವರ ಬಳಿ ಹಣ ಇರಲಿಲ್ಲ. ಅಂಗಡಿ ಮಾಲೀಕರು ಬಾಲಕಿಯರ ತಂದೆಗೆ ಕರೆ ಮಾಡಿ ಮಕ್ಕಳು ಹಣವಿಲ್ಲದೇ ಬಂದು ಚಾಕಲೇಟ್‌ ಕೇಳುತ್ತಿದ್ದಾರೆ ಎಂದಿದ್ದರು. ಅದರಿಂದ ಕೋಪಗೊಂಡ ತಂದೆ ಮನೆಬಿಟ್ಟು ಅಲ್ಲಿಗೆ ಯಾಕೆ ಹೋಗಿದ್ದೀರಾ? ಮನೆಗೆ ಬಂದ ಮೇಲೆ ನಿಮಗೆ ಇದೆ ಎಂದು ರೇಗಿದ್ದಾರೆ. ಅದರಿಂದ ಹೆದರಿದ ಬಾಲಕಿಯರು ಮನೆಗೆ ಹೋಗಲು ಹಿಂದೇಟು ಹಾಕಿ, ಸರ್ಕಾರಿ ಬಸ್‌ನಲ್ಲಿ ಉಚಿತವಾಗಿ ಓಡಾಡಬಹುದು ಎಂದು ಇಬ್ಬರು ಬಿಎಂಟಿಸಿ ಬಸ್‌ ಹತ್ತಿ ನೇರ ಮೆಜೆಸ್ಟಿಕ್‌ಗೆ ಬಂದಿದ್ದರು. ನಂತರ ಅಲ್ಲಿಂದ ಕೆಎಸ್‌ಆರ್‌ಟಿಸಿ ಬಸ್‌ ಹತ್ತಿ ಧರ್ಮಸ್ಥಳಕ್ಕೆ ಹೋಗಿದ್ದರು.

ಇತ್ತ ಮಕ್ಕಳು ಕಾಣದೆ ಗಾಬರಿಗೊಂಡಿದ್ದ ಪೋಷಕರು ಎಲ್ಲೆಡೆ ಹುಡುಕಾಟ ನಡೆಸಿ ಕೋಣನಕುಂಟೆ ಪೊಲೀಸರಿಗೆ ದೂರು ನೀಡಿದ್ದರು. ನಾಪತ್ತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ಬಿಎಂಟಿಸಿ ಬಸ್‌ ಹತ್ತಿ ಹೋಗಿರುವುದು ಪತ್ತೆಯಾಗಿದೆ. ಹಾಗೆಯೇ ಸಿಸಿ ಕ್ಯಾಮೆರಾಗಳ ದೃಶ್ಯಗಳ ಆಧರಿಸಿ ತನಿಖೆ ನಡೆಸಿದಾಗ ಧರ್ಮಸ್ಥಳಕ್ಕೆ ಹೋಗಿರುವುದು ಗೊತ್ತಾಗಿದೆ.

ಇದೇ ವೇಳೆ ಧರ್ಮಸ್ಥಳದಲ್ಲೇ ಬಾಲಕಿಯರ ಓಡಾಟ ಕಂಡು ಅವರಿಂದಲೇ ತಂದೆಯ ಮೊಬೈಲ್‌ ನಂಬರ್‌ ಪಡೆದು ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳೀಯ ಪೊಲೀಸರ ಸಹಾಯದಿಂದ ಸಹೋದರಿಯರನ್ನು ನಗರಕ್ಕೆ ಕರೆತರಲಾಗಿದೆ.

ವಿಚಾರಣೆ ವೇಳೆ ಚಾಕಲೇಟ್‌ ಕೊಡಿಸದ ವಿಚಾರ ತಿಳಿದು ಬಂದಿದೆ. ಅಲ್ಲದೆ, ಸರ್ಕಾರ ಶಕ್ತಿ ಯೋಜನೆ ಬಗ್ಗೆ ಮಾಹಿತಿಯಿದ್ದು, ಬಸ್‌ನಲ್ಲಿ ಪ್ರಯಾಣಿಸಿದೇವು ಎಂದು ಹೇಳಿಕೆ ನೀಡಿ ಪೊಲೀಸರು ಮತ್ತು ಪೋಷಕರಲ್ಲಿ ಅಚ್ಚರಿಮೂಡಿಸಿದ್ದಾರೆ. ಕೋಣನಕುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌ !

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌!

Crime: ಕೈ, ಕತ್ತು ಕೊಯ್ದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ

Crime: ಕೈ, ಕತ್ತು ಕೊಯ್ದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ

8-bng

17 ಕೋಟಿ ರೂ. ವಿದ್ಯುತ್‌ ಬಿಲ್‌ ಕಂಡು ಮನೆ ಮಾಲೀಕನಿಗೆ ಶಾಕ್‌!

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.