Karnataka: ಶಾಲಾ ಮಕ್ಕಳಿಗೆ ವಾರದಲ್ಲಿ ಒಂದೇ ದಿನ ಮೊಟ್ಟೆ, ಬಾಳೆಹಣ್ಣು
Team Udayavani, Jun 21, 2023, 7:23 AM IST
ಬೆಂಗಳೂರು: ರಾಜ್ಯದ ಶಾಲಾ ಮಕ್ಕಳ ಮಧ್ಯಾಹ್ನದ ಬಿಸಿಯೂಟದ ಜತೆಗೆ ಪ್ರಧಾನ ಮಂತ್ರಿ ಪೋಷಣ ಅಭಿಯಾನದಡಿ ವಾರದಲ್ಲಿ 2 ದಿನ ನೀಡುತ್ತಿದ್ದ ಮೊಟ್ಟೆ/ಬಾಳೆಹಣ್ಣನ್ನು ಒಂದು ದಿನಕ್ಕೆ ಸೀಮಿತಗೊಳಿಸಲಾಗಿದೆ.
ಬಿಸಿಯೂಟ ಯೋಜನೆ ನಿರ್ದೇಶಕರು ಈ ಬಗ್ಗೆ ಸುತ್ತೋಲೆ ಹೊರಡಿಸಿದ್ದು, ರಾಜ್ಯದ ಎಲ್ಲ ಜಿಲ್ಲೆಗಳ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 2023-24ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ 1ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಟಿಕ ಆಹಾರವಾಗಿ ಬೇಯಿಸಿದ ಮೊಟ್ಟೆ ಅಥವಾ ಬಾಳೆಹಣ್ಣು / ಶೇಂಗಾ ಚಿಕ್ಕಿ ವಿತರಿಸುವಂತೆ ಸರ್ಕಾರ ಸೂಚನೆ ನೀಡಿದೆ.
ಪ್ರತಿ ವಿದ್ಯಾರ್ಥಿಗೆ ವಾರದಲ್ಲಿ ಒಂದು ಮೊಟ್ಟೆಯಂತೆ ಜೂ.20ರಿಂದ ಜು.15ರ ವರೆಗೆ ಮೊದಲ ಹಂತದಲ್ಲಿ ಅಥವಾ ಸರ್ಕಾರದ ಮುಂದಿನ ಆದೇಶ ಬರುವ ತನಕ ಮಕ್ಕಳ ಹಾಜರಾತಿಗೆ ಅನುಗುಣವಾಗಿ ಯೋಜನೆಯನ್ನು ಮುಂದುವರಿಸುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಇಲಾಖೆಯಲ್ಲಿರುವ ಅನುದಾನದ ಆಧಾರದಲ್ಲಿ ಸದ್ಯದ ಮಟ್ಟಿಗೆ ಮೊಟ್ಟೆ ವಿತರಿಸಲಾಗುತ್ತಿದೆ. ಹೊಸ ಸರ್ಕಾರವು ಜು.7ರಂದು ಬಜೆಟ್ ಮಂಡಿಸಲಿದೆ. ಅದಾದ ನಂತರ ಬಜೆಟ್ನಲ್ಲಿ ಕೈಗೊಳ್ಳುವ ನಿರ್ಧಾರದಂತೆ ಇಲಾಖೆ ಮೊಟ್ಟೆ ವಿತರಣೆ ಮಾಡಲಿದೆ ಎಂದು ಇಲಾಖೆ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ
ಲೀಡ್ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ
PU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು
MLC Elections: ಬಿಜೆಪಿಯಲ್ಲಿ 3 ಸ್ಥಾನಕ್ಕೆ 30 ಆಕಾಂಕ್ಷಿಗಳು
DK Shivakumar ರಕ್ಷಿಸಿದರೆ ಮುಂದೆ ಬೆಲೆ ತೆರಬೇಕಾಗುತ್ತದೆ: ಎಚ್ಡಿಕೆ ಎಚ್ಚರಿಕೆ
MUST WATCH
ಹೊಸ ಸೇರ್ಪಡೆ
Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
ಲೀಡ್ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ
Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ
Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು