ದೇಶದ ಪ್ರಧಾನಿಯ ಹೆಸರೇ ಗೊತ್ತಿಲ್ಲದ ವರ… ಕೋಪಗೊಂಡ ನವವಧು ಮಾಡಿದ ಕೆಲಸವೇನು ಗೊತ್ತಾ… ?


Team Udayavani, Jun 21, 2023, 2:21 PM IST

ದೇಶದ ಪ್ರಧಾನಿಯ ಹೆಸರು ಗೊತ್ತಿಲ್ಲದ ವರ… ಕೋಪಗೊಂಡ ವಧು ಮಾಡಿದ ಕೆಲಸವೇನು ಗೊತ್ತಾ… ?

ಲಕ್ನೋ: ಇತ್ತೀಚಿನ ದಿನಗಳಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಮದುವೆ ಮುರಿಯುವ ಪ್ರಕರಣ ಹೆಚ್ಚಾಗಿ ಕೇಳಿ ಬರುತ್ತಿದೆ. ಅದರಂತೆ ಉತ್ತರ ಪ್ರದೇಶದ ಗಾಜಿಪುರದ ನಾಸಿರ್‌ಪುರ ಗ್ರಾಮದಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ವರನಿಗೆ ದೇಶದ ಪ್ರಧಾನಿ ಯಾರೆಂದು ಗೊತ್ತಿಲ್ಲ ಎಂಬ ಕಾರಣಕ್ಕೆ ವಧು ತಾನು ಮದುವೆಯಾಗಬೇಕಿದ್ದ ಹುಡುಗ ತನಗೆ ಬೇಡವೆಂದು ಕೋಪದಿಂದ ಅಲ್ಲಿದ್ದ ವರನ ಕಿರಿಯ ಸಹೋದರನನ್ನೇ ವರಿಸಿಕೊಂಡಿದ್ದಾಳೆ.

ಏನಿದು ಪ್ರಕರಣ:
ಉತ್ತರ ಪ್ರದೇಶದ ನಸೀರಪುರ ಗ್ರಾಮದ ಶಿವಶಂಕರರಾಮ ಅವರು ಕರಂಡದ ಬಸಂತ್ ಪಟ್ಟಿಯಲ್ಲಿರುವ ಯುವತಿಯೊಂದಿಗೆ ವಿವಾಹವಾಗಬೇಕಿತ್ತು. ಅದರಂತೆ ಜೂನ್ 11ರಂದು ಹಿಂದೂ ಸಂಪ್ರದಾಯಗಳ ಪ್ರಕಾರ ಮದುವೆಗೆ ಮಂಗಳಕರ ದಿನವೆಂದು ನಿಗದಿಪಡಿಸಲಾಗಿದೆ. ಜೂನ್ 11 ರಂದು ಶಿವಶಂಕರ್ ಮದುವೆಯ ಮೆರವಣಿಗೆಯೊಂದಿಗೆ ವಧುವಿನ ಮನೆಗೆ ಬಂದಿದ್ದು. ಹಿಂದೂ ಸಂಪ್ರದಾಯದಂತೆ ಮದುವೆ ಕಾರ್ಯಗಳು ನಡೆದಿದೆ.

ಮರುದಿನ ಬೆಳಗ್ಗೆ ನಡೆದ ಖಿಚಡಿ ಸಮಾರಂಭದಲ್ಲಿ ವರನು ತನ್ನ ಸೊಸೆ ಹಾಗೂ ಸೋದರ ಮಾವನ ಜೊತೆ ಮೋಜು ಮಸ್ತಿ ಮಾಡಿಕೊಂಡಿದ್ದ ಸಂದರ್ಭ. ಶಿವಶಂಕರ್ ಅವರಿಗೆ ವಧುವಿನ ಕಡೆಯಿಂದ ಪ್ರಶ್ನೆ ಎದುರಾಗಿದೆ. ನಮ್ಮ ದೇಶದ ಪ್ರಧಾನಿ ಯಾರು ಎಂದು ಕೇಳಿದ್ದಾಳೆ. ಆದರೆ ಶಿವಶಂಕರನಿಗೆ ಆ ಪ್ರಶ್ನೆಗೆ ಉತ್ತರಿಸಲಾಗಲಿಲ್ಲ. ಅಲ್ಲಿದ್ದವರೆಲ್ಲ ಶಿವಶಂಕರ್ ಅವರನ್ನು ಗೇಲಿ ಮಾಡಲು ಆರಂಭಿಸುತ್ತಾರೆ. ‘ಪ್ರಧಾನಿ ಹೆಸರು ಗೊತ್ತಿಲ್ಲದಿದ್ದರೆ ಹೇಗೆ?’ ಎಂದು ನಿಂದಿಸಿದ್ದಾರೆ, ಇದನ್ನೇ ದೊಡ್ಡ ಅವಮಾನ ಎಂದು ಪರಿಗಣಿಸಿದ ಪತ್ನಿ ಶಿವಶಂಕರ್ ಅವರನ್ನು ತೊರೆದು ಅವರ ಕಿರಿಯ ಸಹೋದರ ಅನಂತ್ ಅವರನ್ನು ಸ್ಥಳದಲ್ಲೇ ಮದುವೆಯಾಗಿದ್ದಾಳೆ.

ಇತ್ತ ಘಟನೆ ಕುರಿತು ಪೊಲೀಸ್ ದೂರು ದಾಖಲಿಸುವುದಾಗಿ ವರನ ತಂದೆ ತಿಳಿಸಿದ್ದಾರೆ.

ಯಾವುದೇ ಕಡೆಯಿಂದ ನಮಗೆ ದೂರು ಬಂದಿಲ್ಲ ಎಂದು ಪೊಲೀಸ್ ಅಧಿಕಾರಿ ಸೈದ್‌ಪುರ್ ಕೊತ್ವಾಲ್ ವಂದನಾ ಸಿಂಗ್ ಹೇಳಿದ್ದಾರೆ. ದೂರು ಬಂದ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಯುವಕನೊಬ್ಬ ಠಾಣೆಗೆ ಬಂದು ಪ್ರಧಾನಿ ಹೆಸರು ಬಹಿರಂಗಪಡಿಸದ ಕಾರಣ ತನ್ನ ಮದುವೆ ನಿಲ್ಲಿಸಲಾಗಿದೆ ಎಂದು ಹೇಳಿದ್ದಾನೆ. ಈ ಬಗ್ಗೆ ಲಿಖಿತ ದೂರು ಬಂದ ನಂತರ ಮಧ್ಯ ಪ್ರವೇಶಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಕೊತ್ವಾಲ್ ಸಿಂಗ್ ತಿಳಿಸಿದ್ದಾರೆ.

ಇದನ್ನೂ ಓದಿ: ಮೈಸೂರು: ದಕ್ಷಿಣ ಕಾಶಿ ನಂಜನಗೂಡಿಗೆ ನಟ ಯಶ್ ದಂಪತಿ‌ ಭೇಟಿ

ಟಾಪ್ ನ್ಯೂಸ್

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

1-ub

Uber ಬಸ್‌ಗಳು ದಿಲ್ಲಿಯ ರಸ್ತೆಯಲ್ಲಿ ಓಡಲಿದೆ!

IMD

Delhi ತಾಪ 47 ಡಿಗ್ರಿ: ಶಾಲೆಗಳಿಗೆ ಸುದೀರ್ಘ‌ ರಜೆ

covid

Covaxin ಸೈಡ್‌ಎಫೆಕ್ಟ್ ವರದಿಗೆ ಐಸಿಎಂಆರ್‌ ಕಿಡಿ

train-track

Train Drivers Association; ಆನೆ ಹಳಿ ದಾಟುವಾಗ ರೈಲು ನಿಲುಗಡೆ ಅಸಾಧ್ಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

10-hunsur

Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್‌ಗೂ ಹಾನಿ

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

9-davangere

Davangere: ಮರ ಬಿದ್ದು ಕಾರು ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು

8-doddanagudde

ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.